AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗ ಕಾಮಗಾರಿ: 6 ತಿಂಗಳು ಬೆಂಗಳೂರು-ಮಂಗಳೂರಿನ ಕೆಲ ರೈಲುಗಳು ರದ್ದು

ಸಕಲೇಶಪುರ-ಸುಬ್ರಹ್ಮಣ್ಯ ರೈಲು ಮಾರ್ಗದಲ್ಲಿ ಜೂನ್ 1 ರಿಂದ ನವೆಂಬರ್ 1 ರವರೆಗೆ ನಡೆಯಲಿರುವ ರೈಲ್ವೆ ವಿದ್ಯುದ್ದೀಕರಣ ಮತ್ತು ಸುರಕ್ಷತಾ ಕಾಮಗಾರಿಯಿಂದಾಗಿ ಹಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ. ಹಾಗಾದರೆ ಯಾವೆಲ್ಲಾ ರೈಲುಗಳನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಎಂಬ ಮಾಹಿತಿ ಇಲ್ಲಿದೆ.

ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗ ಕಾಮಗಾರಿ: 6 ತಿಂಗಳು ಬೆಂಗಳೂರು-ಮಂಗಳೂರಿನ ಕೆಲ ರೈಲುಗಳು ರದ್ದು
Bengaluru Mangaluru Trains
ಗಂಗಾಧರ​ ಬ. ಸಾಬೋಜಿ
|

Updated on:May 17, 2025 | 8:51 AM

Share

ಬೆಂಗಳೂರು, ಮೇ 17: ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದಲ್ಲಿ (Sakleshpur-Subrahmanya Road) ಜೂನ್ 1ರಿಂದ ನವೆಂಬರ್ 1 ರವರೆಗೆ ಸುರಕ್ಷತೆ ಮತ್ತು ರೈಲ್ವೆ ವಿದ್ಯುದ್ದೀಕರಣ ಕಾಮಗಾರಿ ನಡೆಯಲಿರುವ ಕಾರಣದಿಂದಾಗಿ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ. ಈ ಬಗ್ಗೆ ನೈರುತ್ಯ ರೈಲ್ವೆ (South Western Railway) ಮಾಹಿತಿ ನೀಡಿದೆ. ಹಾಗಾದರೆ ಯಾವೆಲ್ಲಾ ರೈಲುಗಳನ್ನು ರದ್ದುಪಡಿಸಲಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಕೆಲವು ರೈಲುಗಳ ಸಂಚಾರ ರದ್ದು

  • ಮೇ 31 ರಿಂದ ನವೆಂಬರ್ 1 ರವರೆಗೆ ಪ್ರತಿ ಶನಿವಾರದಂದು ಸಂಚರಿಸುವ ಯಶವಂತಪುರ ಟು ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16539) ರದ್ದಾಗಲಿದೆ. ಅದೇ ರೀತಿ, ಜೂನ್ 1 ರಿಂದ ನವೆಂಬರ್ 2 ರವರೆಗೆ ಪ್ರತಿ ಭಾನುವಾರದಂದು ಸಂಚರಿಸುವ ಮಂಗಳೂರು ಜಂಕ್ಷನ್ ಟು ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16540) ಸಹ ರದ್ದಾಗಲಿದೆ.

ನೈರುತ್ಯ ರೈಲ್ವೆ ಟ್ವೀಟ್​​

  • ಜೂನ್ 1 ರಿಂದ ಅಕ್ಟೋಬರ್ 30 ರವರೆಗೆ ಮಂಗಳವಾರ, ಗುರುವಾರ ಮತ್ತು ಭಾನುವಾರದಂದು ಸಂಚರಿಸುವ ಯಶವಂತಪುರ ಟು ಮಂಗಳೂರು ಜಂಕ್ಷನ್ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16575) ರದ್ದಾಗಲಿದೆ.
  • ಜೂನ್ 2ರಿಂದ ಅಕ್ಟೋಬರ್ 31 ರವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಸಂಚರಿಸುವ ಮಂಗಳೂರು ಟು ಯಶವಂತಪುರ ಟಿ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16576) ಸಹ ರದ್ಧಾಗಲಿದೆ.

ಇದನ್ನೂ ಓದಿ: ಬೆಂಗಳೂರಿನ ಹೆಬ್ಬಾಳ ಫ್ಲೈಓವರ್​​ ಇಂದಿನಿಂದ ಮೇ 21ರವರೆಗೆ ಪ್ರತಿದಿನ 3 ಗಂಟೆ ಬಂದ್: ಪರ್ಯಾಯ ಮಾರ್ಗಗಳು ಹೀಗಿವೆ

  • ಇದಲ್ಲದೆ, ಜೂನ್ 2 ರಿಂದ ಅಕ್ಟೋಬರ್ 31 ರವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಸಂಚರಿಸುವ ಯಶವಂತಪುರ ಟು ಕಾರವಾರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16515) ಹಾಗೂ ಜೂನ್ 3ರಿಂದ ನವೆಂಬರ್ 1 ರವರೆಗೆ ಮಂಗಳವಾರ, ಗುರುವಾರ ಮತ್ತು ಶನಿವಾರದಂದು ಸಂಚರಿಸುವ ಕಾರವಾರ ಟು ಯಶವಂತಪುರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16516) ರೈಲುಗಳ ಸಂಚಾರವನ್ನು ಸಹ ರದ್ದುಗೊಳಿಸಲಾಗಿದೆ ಎಂದು ನೈರುತ್ಯ ರೈಲ್ವೆ ಮಾಹಿತಿ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:49 am, Sat, 17 May 25

Follow Us
ಆ.13ರಂದು ಕರ್ನಾಟಕ ಬಂದ್​​: ಬೆಂಗಳೂರಿನ ಖಾಸಗಿ ಶಾಲೆಗಳಿಗಿಲ್ಲ ರಜೆ!
ಆ.13ರಂದು ಕರ್ನಾಟಕ ಬಂದ್​​: ಬೆಂಗಳೂರಿನ ಖಾಸಗಿ ಶಾಲೆಗಳಿಗಿಲ್ಲ ರಜೆ!
ಬನಶಂಕರಿಯಲ್ಲಿ ನಿನ್ನೆ ಸಂಜೆ ಮತ್ತೆ ಚಿರತೆ ಪ್ರತ್ಯಕ್ಷ ಇಂದು ಕಾರ್ಯಾಚರಣೆ
ಬನಶಂಕರಿಯಲ್ಲಿ ನಿನ್ನೆ ಸಂಜೆ ಮತ್ತೆ ಚಿರತೆ ಪ್ರತ್ಯಕ್ಷ ಇಂದು ಕಾರ್ಯಾಚರಣೆ
ಬಾಗಲಕೋಟೆಯಲ್ಲಿ ಗಮನ ಸೆಳೆದ 500 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜ
ಬಾಗಲಕೋಟೆಯಲ್ಲಿ ಗಮನ ಸೆಳೆದ 500 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜ
ಅದ್ವೈತ್ ಉಪಾಧ್ಯಾಯ ನಾಪತ್ತೆ ಕೇಸ್​​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್​​!
ಅದ್ವೈತ್ ಉಪಾಧ್ಯಾಯ ನಾಪತ್ತೆ ಕೇಸ್​​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್​​!
ಸರ್ಕಾರಿ ಆದೇಶದಿಂದ ಸಂಕಷ್ಟಕ್ಕೆ ಸಿಲುಕಿದ ಅತಿಥಿ ಉಪನ್ಯಾಸಕರು
ಸರ್ಕಾರಿ ಆದೇಶದಿಂದ ಸಂಕಷ್ಟಕ್ಕೆ ಸಿಲುಕಿದ ಅತಿಥಿ ಉಪನ್ಯಾಸಕರು
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು