AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ತನಿಖೆಗೆ ಸಕ್ಷಮ ಪ್ರಾಧಿಕಾರದ ಅನುಮತಿ

ಬಿಜೆಪಿ ಶಾಸಕ ಮುನಿರತ್ನಗೆ ತೀವ್ರ ಸಂಕಷ್ಟ ಎದುರಾಗಿದೆ. ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್​ ಠಾಣೆಯಲ್ಲಿ ದಾಖಲಾದ ಪ್ರಕರಣದ ತನಿಖೆಗೆ ಸಕ್ಷಮ ಪ್ರಾಧಿಕಾರವು ಸಿಐಡಿಗೆ ಅನುಮತಿ ನೀಡಿದೆ. 36 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಮುನಿರತ್ನ ಅವರ ಮೇಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಲಂಚ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ತನಿಖೆಗೆ ಸಕ್ಷಮ ಪ್ರಾಧಿಕಾರದ ಅನುಮತಿ
ಶಾಸಕ ಮುನಿರತ್ನ
Shivaprasad B
| Edited By: |

Updated on:May 20, 2025 | 7:22 PM

Share

ಬೆಂಗಳೂರು, ಮೇ 20: ಕೊಲೆ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದಿರುವ ಬಿಜೆಪಿ (BJP MLA) ಶಾಸಕ ಮುನಿರತ್ನ ಅವರಿಗೆ (Munirathna) ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಬಿಎಂಪಿ (BBMP) ಗುತ್ತಿಗೆದಾರ ಚಲುವಾರಜುಗೆ ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣದ ತನಿಖೆಗೆ ಸಕ್ಷಮ ಪ್ರಾಧಿಕಾರ ಅನುಮತಿ ನೀಡಿದೆ. ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1988 ರ ಅಡಿ ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಂಎಲ್ಎ ಮುನಿರತ್ನ ವಿರುದ್ಧ ತನಿಖೆಗೆ ಸಿಐಡಿ ಪೋಲಿಸ್ ಮಹಾ ನಿರ್ದೇಶಕರು ಸಕ್ಷಮ ಪ್ರಾಧಿಕಾರಕ್ಕೆ ಅನುಮತಿ ಕೋರಿದ್ದರು. ಸಕ್ಷಮ ಪ್ರಾಧಿಕಾರ ತನಿಖೆಗೆ ಅನುಮತಿ ನೀಡಿದೆ. ಇದರಿಂದ ಶಾಸಕ ಮುನಿರತ್ನಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.

ಏನಿದು ಪ್ರಕರಣ?

ಬಿಬಿಎಂಪಿ ಗುತ್ತಿಗೆದಾರ ಚಲುವರಾಜುಗೆ ಕಸ ವಿಲೇವಾರಿ ಗುತ್ತಿಗೆ ನೀಡಲು ಶಾಸಕ ಮುನಿರತ್ನ ಅವರು 36 ಲಕ್ಷ ರೂ. ಲಂಚ ಕೇಳಿದ್ದು, 20 ಲಕ್ಷ ರೂ. ಈಗಾಗಲೆ ಸ್ವೀಕರಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಮುನಿರತ್ನ ವಿರುದ್ಧ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1988 ರ ಅಡಿ ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮುನಿರತ್ನ ವಿರುದ್ಧ ಕಿರುಕುಳ, ಜೀವ ಬೆದರಿಕೆ ಆರೋಪ

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಷ್ಮಿದೇವಿನಗರ ವಾರ್ಡ್​ನ ಡಿ ದೇವರಾಜು ಅರಸು ಟ್ರಕ್ ಟರ್ಮಿನಲ್​ ಪ್ರದೇಶದ ಘನ ತ್ಯಾಜ್ಯ ಸಂಗ್ರಹಣ ಮತ್ತು ವಿಲೇವಾರಿ ಗುತ್ತಿಗೆ ಪಡೆದು ಕೆಲಸ ಮಾಡುತ್ತಿದ್ದೆ. ಶಾಸಕ ಮುನಿರತ್ನ 36 ಲಕ್ಷ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟು ಕಿರುಕುಳ ನೀಡಿದ್ದಾರೆ ಎಂದು ಚಲುವರಾಜು ಆರೋಪಿಸಿದ್ದರು.

ಇದನ್ನೂ ಓದಿ
Image
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
Image
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
Image
ಬೆಂಗಳೂರು ಅಭಿವೃದ್ಧಿ ಸಚಿವರ ಬದಲಾವಣೆಗೆ ಶಾಸಕ ಮುನಿರತ್ನ ಸಿಎಂಗೆ ಪತ್ರ
Image
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್

ಅಲ್ಲದೆ, ಹಣ ಕೊಡಲು ನಿರಾಕರಿಸಿದ್ದಕ್ಕೆ ಕಚೇರಿಗೆ ಕರೆಸಿಕೊಂಡು ಶಾಸಕ ಮುನಿರತ್ನ ಅಸಹ್ಯ ಪದಗಳಿಂದ ನಿಂದಿಸಿದ್ದಾರೆ. ಹಲವು ಬಾರಿ ಹಲ್ಲೆ ನಡೆಸಿದ್ದಾರೆ ಎಂದು ಚಲುವರಾಜು ಆರೋಪ ಹೊರಸಿದ್ದರು. ಇನ್ನು, ಶಾಸಕ ಮುನಿರತ್ನ ಆಪ್ತ ಸಹಾಯಕ ವಸಂತಕುಮಾರ್ ಹಾಗೂ ಇತರರು ರೇಣುಕಾಸ್ವಾಮಿಯನ್ನು ಕೊಂದ ರೀತಿಯಲ್ಲೇ ನಿನ್ನನ್ನು ಕೂಡ ಕೊಲೆ ಮಾಡುವುದಾಗಿ ಬೆದರಿಸಿದ್ದಾರೆ ಎಂದು ಚಲುವರಾಜು ಸ್ವಾಮಿ ದೂರಿದ್ದರು.

ಇದನ್ನೂ ಓದಿ: ಮುನಿರತ್ನ ವಿರುದ್ಧದ ಪ್ರಕರಣದ ಚಾರ್ಜ್​ಶೀಟ್ ಸಲ್ಲಿಕೆ: ಅಶ್ಲೀಲ ಫೋಟೊ, ವಿಡಿಯೋ ಮಾಡಿದ್ದು ಬಹಿರಂಗ

ಆಡಿಯೋ ವೈರಲ್​

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷ ಲಕ್ಷ ರೂ. ಹಣ ಲಂಚ ನೀಡುವಂತೆ ಶಾಸಕ ಮುನಿರತ್ನ ಕಚೇರಿ ಸಿಬ್ಬಂದಿ ಬೇಡಿಕೆ ಇಟ್ಟಿದ್ದರು ಎಂಬ ಆಡಿಯೋ ಕೂಡ ವೈರಲ್​ ಆಗಿತ್ತು. ಆಡಿಯೋದಲ್ಲಿ ಗುತ್ತಿಗೆದಾರ ಚೆಲುವರಾಜು ಮತ್ತು ಸ್ನೇಹಿತ ಸಹ ಮಾತಾಡಿದ್ದರು ಎನ್ನಲಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:22 pm, Tue, 20 May 25

ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ