AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ತನಿಖೆಗೆ ಸಕ್ಷಮ ಪ್ರಾಧಿಕಾರದ ಅನುಮತಿ

ಬಿಜೆಪಿ ಶಾಸಕ ಮುನಿರತ್ನಗೆ ತೀವ್ರ ಸಂಕಷ್ಟ ಎದುರಾಗಿದೆ. ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್​ ಠಾಣೆಯಲ್ಲಿ ದಾಖಲಾದ ಪ್ರಕರಣದ ತನಿಖೆಗೆ ಸಕ್ಷಮ ಪ್ರಾಧಿಕಾರವು ಸಿಐಡಿಗೆ ಅನುಮತಿ ನೀಡಿದೆ. 36 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಮುನಿರತ್ನ ಅವರ ಮೇಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಲಂಚ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ತನಿಖೆಗೆ ಸಕ್ಷಮ ಪ್ರಾಧಿಕಾರದ ಅನುಮತಿ
ಶಾಸಕ ಮುನಿರತ್ನ
Shivaprasad B
| Edited By: |

Updated on:May 20, 2025 | 7:22 PM

Share

ಬೆಂಗಳೂರು, ಮೇ 20: ಕೊಲೆ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದಿರುವ ಬಿಜೆಪಿ (BJP MLA) ಶಾಸಕ ಮುನಿರತ್ನ ಅವರಿಗೆ (Munirathna) ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಬಿಎಂಪಿ (BBMP) ಗುತ್ತಿಗೆದಾರ ಚಲುವಾರಜುಗೆ ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣದ ತನಿಖೆಗೆ ಸಕ್ಷಮ ಪ್ರಾಧಿಕಾರ ಅನುಮತಿ ನೀಡಿದೆ. ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1988 ರ ಅಡಿ ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಂಎಲ್ಎ ಮುನಿರತ್ನ ವಿರುದ್ಧ ತನಿಖೆಗೆ ಸಿಐಡಿ ಪೋಲಿಸ್ ಮಹಾ ನಿರ್ದೇಶಕರು ಸಕ್ಷಮ ಪ್ರಾಧಿಕಾರಕ್ಕೆ ಅನುಮತಿ ಕೋರಿದ್ದರು. ಸಕ್ಷಮ ಪ್ರಾಧಿಕಾರ ತನಿಖೆಗೆ ಅನುಮತಿ ನೀಡಿದೆ. ಇದರಿಂದ ಶಾಸಕ ಮುನಿರತ್ನಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.

ಏನಿದು ಪ್ರಕರಣ?

ಬಿಬಿಎಂಪಿ ಗುತ್ತಿಗೆದಾರ ಚಲುವರಾಜುಗೆ ಕಸ ವಿಲೇವಾರಿ ಗುತ್ತಿಗೆ ನೀಡಲು ಶಾಸಕ ಮುನಿರತ್ನ ಅವರು 36 ಲಕ್ಷ ರೂ. ಲಂಚ ಕೇಳಿದ್ದು, 20 ಲಕ್ಷ ರೂ. ಈಗಾಗಲೆ ಸ್ವೀಕರಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಮುನಿರತ್ನ ವಿರುದ್ಧ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1988 ರ ಅಡಿ ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮುನಿರತ್ನ ವಿರುದ್ಧ ಕಿರುಕುಳ, ಜೀವ ಬೆದರಿಕೆ ಆರೋಪ

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಷ್ಮಿದೇವಿನಗರ ವಾರ್ಡ್​ನ ಡಿ ದೇವರಾಜು ಅರಸು ಟ್ರಕ್ ಟರ್ಮಿನಲ್​ ಪ್ರದೇಶದ ಘನ ತ್ಯಾಜ್ಯ ಸಂಗ್ರಹಣ ಮತ್ತು ವಿಲೇವಾರಿ ಗುತ್ತಿಗೆ ಪಡೆದು ಕೆಲಸ ಮಾಡುತ್ತಿದ್ದೆ. ಶಾಸಕ ಮುನಿರತ್ನ 36 ಲಕ್ಷ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟು ಕಿರುಕುಳ ನೀಡಿದ್ದಾರೆ ಎಂದು ಚಲುವರಾಜು ಆರೋಪಿಸಿದ್ದರು.

ಇದನ್ನೂ ಓದಿ
Image
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
Image
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
Image
ಬೆಂಗಳೂರು ಅಭಿವೃದ್ಧಿ ಸಚಿವರ ಬದಲಾವಣೆಗೆ ಶಾಸಕ ಮುನಿರತ್ನ ಸಿಎಂಗೆ ಪತ್ರ
Image
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್

ಅಲ್ಲದೆ, ಹಣ ಕೊಡಲು ನಿರಾಕರಿಸಿದ್ದಕ್ಕೆ ಕಚೇರಿಗೆ ಕರೆಸಿಕೊಂಡು ಶಾಸಕ ಮುನಿರತ್ನ ಅಸಹ್ಯ ಪದಗಳಿಂದ ನಿಂದಿಸಿದ್ದಾರೆ. ಹಲವು ಬಾರಿ ಹಲ್ಲೆ ನಡೆಸಿದ್ದಾರೆ ಎಂದು ಚಲುವರಾಜು ಆರೋಪ ಹೊರಸಿದ್ದರು. ಇನ್ನು, ಶಾಸಕ ಮುನಿರತ್ನ ಆಪ್ತ ಸಹಾಯಕ ವಸಂತಕುಮಾರ್ ಹಾಗೂ ಇತರರು ರೇಣುಕಾಸ್ವಾಮಿಯನ್ನು ಕೊಂದ ರೀತಿಯಲ್ಲೇ ನಿನ್ನನ್ನು ಕೂಡ ಕೊಲೆ ಮಾಡುವುದಾಗಿ ಬೆದರಿಸಿದ್ದಾರೆ ಎಂದು ಚಲುವರಾಜು ಸ್ವಾಮಿ ದೂರಿದ್ದರು.

ಇದನ್ನೂ ಓದಿ: ಮುನಿರತ್ನ ವಿರುದ್ಧದ ಪ್ರಕರಣದ ಚಾರ್ಜ್​ಶೀಟ್ ಸಲ್ಲಿಕೆ: ಅಶ್ಲೀಲ ಫೋಟೊ, ವಿಡಿಯೋ ಮಾಡಿದ್ದು ಬಹಿರಂಗ

ಆಡಿಯೋ ವೈರಲ್​

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷ ಲಕ್ಷ ರೂ. ಹಣ ಲಂಚ ನೀಡುವಂತೆ ಶಾಸಕ ಮುನಿರತ್ನ ಕಚೇರಿ ಸಿಬ್ಬಂದಿ ಬೇಡಿಕೆ ಇಟ್ಟಿದ್ದರು ಎಂಬ ಆಡಿಯೋ ಕೂಡ ವೈರಲ್​ ಆಗಿತ್ತು. ಆಡಿಯೋದಲ್ಲಿ ಗುತ್ತಿಗೆದಾರ ಚೆಲುವರಾಜು ಮತ್ತು ಸ್ನೇಹಿತ ಸಹ ಮಾತಾಡಿದ್ದರು ಎನ್ನಲಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:22 pm, Tue, 20 May 25

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ