AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.ಕೆ.ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂದ ಸಲೀಂ; ಮೌನವಾಗಿ ಆಲಿಸಿರುವ ಉಗ್ರಪ್ಪ – ಟ್ವೀಟ್​ ಮಾಡಿ ಕೆಣಕಿದ ಬಿಜೆಪಿ!

KPCC president DK Shivakumar: ಕರ್ನಾಟಕ ರಾಜಕೀಯದಲ್ಲಿ ಭ್ರಷ್ಟಾಚಾರ ಎಂಬುದು ಅವ್ಯಾಹತವಾಗಿ ನಡೆದು ಬಂದಿದೆ. ಇದು ಆಡಳಿತಾರೂಢ ಮತ್ತು ವಿಪಕ್ಷಗಳು ಎಂಬ ಬೇಧ ಭಾವ ಇಲ್ಲದೆ ನಡೆದಿದೆ. ಈ ಹಿನ್ನೆಲೆಯಲ್ಲಿ ಸಹಜವಾಗಿಯೇ ಸಲೀಂ-ಉಗ್ರಪ್ಪ ನಡುವಣ ಮಾತುಗಳು ರಾಜಕೀಯ ಬಿರುಗಾಳಿ ಎಬ್ಬಿಸಿದೆ. ಇದಕ್ಕೆ ಆಡಳಿತಾರೂಢ ಬಿಜೆಪಿ ಪಕ್ಷ ಉಗ್ರವಾಗಿ ಟ್ವೀಟ್​ ಮಾಡಿ, ಕೆಣಕಿದೆ.

ಡಿ.ಕೆ.ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂದ ಸಲೀಂ; ಮೌನವಾಗಿ ಆಲಿಸಿರುವ ಉಗ್ರಪ್ಪ - ಟ್ವೀಟ್​ ಮಾಡಿ ಕೆಣಕಿದ ಬಿಜೆಪಿ!
ಡಿ.ಕೆ.ಶಿವಕುಮಾರ್
TV9 Web
| Updated By: ಸಾಧು ಶ್ರೀನಾಥ್​|

Updated on:Oct 16, 2021 | 11:23 AM

Share

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಬಗ್ಗೆ ವಿ.ಎಸ್. ಉಗ್ರಪ್ಪ ಮತ್ತು ಸಲೀಂ ನಡುವಣ ಸ್ಫೋಟಕ ಮಾತುಗಳು ಕರ್ನಾಟಕದ ರಾಜಕೀಯ ಪಡಸಾಲೆಯಲ್ಲಿ ಭಾರೀ ಸದ್ದು ಮಾಡತೊಡಗಿದೆ. ಡಿ.ಕೆ.ಶಿವಕುಮಾರ್ ಕಲೆಕ್ಷನ್ ಗಿರಾಕಿ. ಶಿವಕುಮಾರ್‌ರದ್ದು ದೊಡ್ಡ ಸ್ಕ್ಯಾಮ್. ಪಟ್ಟು ಹಿಡಿದು ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಡಿಸಿದ್ದು ಎಂದು ಸಲೀಂ- ಉಗ್ರಪ್ಪ ನಡುವಣ ಮಾತುಗಳು ಬಹಿರಂಗವಾಗಿವೆ.

ಕರ್ನಾಟಕ ರಾಜಕೀಯದಲ್ಲಿ ಭ್ರಷ್ಟಾಚಾರ ಎಂಬುದು ಅವ್ಯಾಹತವಾಗಿ ನಡೆದು ಬಂದಿದೆ. ಇದು ಆಡಳಿತಾರೂಢ ಮತ್ತು ವಿಪಕ್ಷಗಳು ಎಂಬ ಬೇಧ ಭಾವ ಇಲ್ಲದೆ ನಡೆದಿದೆ. ಈ ಹಿನ್ನೆಲೆಯಲ್ಲಿ ಸಹಜವಾಗಿಯೇ ಸಲೀಂ-ಉಗ್ರಪ್ಪ ನಡುವಣ ಮಾತುಗಳು ರಾಜಕೀಯ ಬಿರುಗಾಳಿ ಎಬ್ಬಿಸಿದೆ. ಇದಕ್ಕೆ ಆಡಳಿತಾರೂಢ ಬಿಜೆಪಿ ಪಕ್ಷ ಉಗ್ರವಾಗಿ ಟ್ವೀಟ್​ ಮಾಡಿ, ಕೆಣಕಿದೆ.

ಕರ್ನಾಟಕ ಬಿಜೆಪಿ ಟ್ವೀಟ್​ ಸಂದೇಶದ ಸಾರಾಂಶ ಹೀಗಿದೆ:

ಕೆಪಿಸಿಸಿ ಕಚೇರಿಯಲ್ಲೇ ಕಾಂಗ್ರೆಸ್‌ ಪಕ್ಷದ ರಾಜ್ಯಾಧ್ಯಕ್ಷರ ಬಗ್ಗೆ ಸ್ವಪಕ್ಷೀಯರ ಗುಣಗಾನ… #ಭ್ರಷ್ಟಾಧ್ಯಕ್ಷ

ಕೆಪಿಸಿಸಿ ಕಚೇರಿಯಲ್ಲೇ ಕೆಪಿಸಿಸಿ ಅಧ್ಯಕ್ಷ @DKShivakumar ಭ್ರಷ್ಟಾಚಾರವನ್ನು @INCKarnataka ಪಕ್ಷದ ರಾಜ್ಯ ಪದಾಧಿಕಾರಿಗಳು ತೆರೆದಿಟ್ಟಿದ್ದಾರೆ. ಭ್ರಷ್ಟಾಚಾರಕ್ಕೆ ಕಾಂಗ್ರೆಸ್‌ ಪಕ್ಷ ತವರು ಮನೆಯಾಗಿದೆ. #ಭ್ರಷ್ಟಾಧ್ಯಕ್ಷ

ಮಾನ್ಯ @DKShivakumar ಅವರೇ, ಸೀಸರ್‌ನ ಪತ್ನಿ ಅನುಮಾನಕ್ಕೆ ಅತೀತವಾಗಿರಬೇಕೆಂಬ ಮಾತಿದೆ. ಆದರೆ ಕೆಪಿಸಿಸಿ ಪಕ್ಷದ ವೇದಿಕೆಯಲ್ಲೇ ನಿಮ್ಮವರೇ ನಿಮ್ಮ ಬಗ್ಗೆ ಆಡಿರುವ ಅಧಿಕೃತ ಮಾತುಗಳ ಬಗ್ಗೆ ನೀವು ಸ್ಪಷ್ಟನೆ ನೀಡಲೇಬೇಕಲ್ಲವೇ? #ಭ್ರಷ್ಟಾಧ್ಯಕ್ಷ

ಇದನ್ನೂ ಓದಿ: ಪಟ್ಟು ಹಿಡಿದು ಅಧ್ಯಕ್ಷ ಸ್ಥಾನ ಗಿಟ್ಟಿಸಿಕೊಂಡ; ಡಿಕೆ ಶಿವಕುಮಾರ್​ ಬಗ್ಗೆ ಕಾಂಗ್ರೆಸ್ ನಾಯಕರ ಸ್ಫೋಟಕ ಮಾತು!

ಡಿಕೆಶಿ ಹುಡುಗರ ಬಳಿ ₹50-100 ಕೋಟಿ ಇದೆ ಎಂದ ಸಲೀಂ |Ugrappa|Tv9kannada

(saleem alleges corruption by kpcc president dk shivakumar karnataka bjp tweets)

Published On - 11:41 am, Wed, 13 October 21

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?