AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.ಕೆ.ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂದ ಸಲೀಂ; ಮೌನವಾಗಿ ಆಲಿಸಿರುವ ಉಗ್ರಪ್ಪ – ಟ್ವೀಟ್​ ಮಾಡಿ ಕೆಣಕಿದ ಬಿಜೆಪಿ!

KPCC president DK Shivakumar: ಕರ್ನಾಟಕ ರಾಜಕೀಯದಲ್ಲಿ ಭ್ರಷ್ಟಾಚಾರ ಎಂಬುದು ಅವ್ಯಾಹತವಾಗಿ ನಡೆದು ಬಂದಿದೆ. ಇದು ಆಡಳಿತಾರೂಢ ಮತ್ತು ವಿಪಕ್ಷಗಳು ಎಂಬ ಬೇಧ ಭಾವ ಇಲ್ಲದೆ ನಡೆದಿದೆ. ಈ ಹಿನ್ನೆಲೆಯಲ್ಲಿ ಸಹಜವಾಗಿಯೇ ಸಲೀಂ-ಉಗ್ರಪ್ಪ ನಡುವಣ ಮಾತುಗಳು ರಾಜಕೀಯ ಬಿರುಗಾಳಿ ಎಬ್ಬಿಸಿದೆ. ಇದಕ್ಕೆ ಆಡಳಿತಾರೂಢ ಬಿಜೆಪಿ ಪಕ್ಷ ಉಗ್ರವಾಗಿ ಟ್ವೀಟ್​ ಮಾಡಿ, ಕೆಣಕಿದೆ.

ಡಿ.ಕೆ.ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂದ ಸಲೀಂ; ಮೌನವಾಗಿ ಆಲಿಸಿರುವ ಉಗ್ರಪ್ಪ - ಟ್ವೀಟ್​ ಮಾಡಿ ಕೆಣಕಿದ ಬಿಜೆಪಿ!
ಡಿ.ಕೆ.ಶಿವಕುಮಾರ್
TV9 Web
| Edited By: ಸಾಧು ಶ್ರೀನಾಥ್​|

Updated on:Oct 16, 2021 | 11:23 AM

Share

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಬಗ್ಗೆ ವಿ.ಎಸ್. ಉಗ್ರಪ್ಪ ಮತ್ತು ಸಲೀಂ ನಡುವಣ ಸ್ಫೋಟಕ ಮಾತುಗಳು ಕರ್ನಾಟಕದ ರಾಜಕೀಯ ಪಡಸಾಲೆಯಲ್ಲಿ ಭಾರೀ ಸದ್ದು ಮಾಡತೊಡಗಿದೆ. ಡಿ.ಕೆ.ಶಿವಕುಮಾರ್ ಕಲೆಕ್ಷನ್ ಗಿರಾಕಿ. ಶಿವಕುಮಾರ್‌ರದ್ದು ದೊಡ್ಡ ಸ್ಕ್ಯಾಮ್. ಪಟ್ಟು ಹಿಡಿದು ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಡಿಸಿದ್ದು ಎಂದು ಸಲೀಂ- ಉಗ್ರಪ್ಪ ನಡುವಣ ಮಾತುಗಳು ಬಹಿರಂಗವಾಗಿವೆ.

ಕರ್ನಾಟಕ ರಾಜಕೀಯದಲ್ಲಿ ಭ್ರಷ್ಟಾಚಾರ ಎಂಬುದು ಅವ್ಯಾಹತವಾಗಿ ನಡೆದು ಬಂದಿದೆ. ಇದು ಆಡಳಿತಾರೂಢ ಮತ್ತು ವಿಪಕ್ಷಗಳು ಎಂಬ ಬೇಧ ಭಾವ ಇಲ್ಲದೆ ನಡೆದಿದೆ. ಈ ಹಿನ್ನೆಲೆಯಲ್ಲಿ ಸಹಜವಾಗಿಯೇ ಸಲೀಂ-ಉಗ್ರಪ್ಪ ನಡುವಣ ಮಾತುಗಳು ರಾಜಕೀಯ ಬಿರುಗಾಳಿ ಎಬ್ಬಿಸಿದೆ. ಇದಕ್ಕೆ ಆಡಳಿತಾರೂಢ ಬಿಜೆಪಿ ಪಕ್ಷ ಉಗ್ರವಾಗಿ ಟ್ವೀಟ್​ ಮಾಡಿ, ಕೆಣಕಿದೆ.

ಕರ್ನಾಟಕ ಬಿಜೆಪಿ ಟ್ವೀಟ್​ ಸಂದೇಶದ ಸಾರಾಂಶ ಹೀಗಿದೆ:

ಕೆಪಿಸಿಸಿ ಕಚೇರಿಯಲ್ಲೇ ಕಾಂಗ್ರೆಸ್‌ ಪಕ್ಷದ ರಾಜ್ಯಾಧ್ಯಕ್ಷರ ಬಗ್ಗೆ ಸ್ವಪಕ್ಷೀಯರ ಗುಣಗಾನ… #ಭ್ರಷ್ಟಾಧ್ಯಕ್ಷ

ಕೆಪಿಸಿಸಿ ಕಚೇರಿಯಲ್ಲೇ ಕೆಪಿಸಿಸಿ ಅಧ್ಯಕ್ಷ @DKShivakumar ಭ್ರಷ್ಟಾಚಾರವನ್ನು @INCKarnataka ಪಕ್ಷದ ರಾಜ್ಯ ಪದಾಧಿಕಾರಿಗಳು ತೆರೆದಿಟ್ಟಿದ್ದಾರೆ. ಭ್ರಷ್ಟಾಚಾರಕ್ಕೆ ಕಾಂಗ್ರೆಸ್‌ ಪಕ್ಷ ತವರು ಮನೆಯಾಗಿದೆ. #ಭ್ರಷ್ಟಾಧ್ಯಕ್ಷ

ಮಾನ್ಯ @DKShivakumar ಅವರೇ, ಸೀಸರ್‌ನ ಪತ್ನಿ ಅನುಮಾನಕ್ಕೆ ಅತೀತವಾಗಿರಬೇಕೆಂಬ ಮಾತಿದೆ. ಆದರೆ ಕೆಪಿಸಿಸಿ ಪಕ್ಷದ ವೇದಿಕೆಯಲ್ಲೇ ನಿಮ್ಮವರೇ ನಿಮ್ಮ ಬಗ್ಗೆ ಆಡಿರುವ ಅಧಿಕೃತ ಮಾತುಗಳ ಬಗ್ಗೆ ನೀವು ಸ್ಪಷ್ಟನೆ ನೀಡಲೇಬೇಕಲ್ಲವೇ? #ಭ್ರಷ್ಟಾಧ್ಯಕ್ಷ

ಇದನ್ನೂ ಓದಿ: ಪಟ್ಟು ಹಿಡಿದು ಅಧ್ಯಕ್ಷ ಸ್ಥಾನ ಗಿಟ್ಟಿಸಿಕೊಂಡ; ಡಿಕೆ ಶಿವಕುಮಾರ್​ ಬಗ್ಗೆ ಕಾಂಗ್ರೆಸ್ ನಾಯಕರ ಸ್ಫೋಟಕ ಮಾತು!

ಡಿಕೆಶಿ ಹುಡುಗರ ಬಳಿ ₹50-100 ಕೋಟಿ ಇದೆ ಎಂದ ಸಲೀಂ |Ugrappa|Tv9kannada

(saleem alleges corruption by kpcc president dk shivakumar karnataka bjp tweets)

Published On - 11:41 am, Wed, 13 October 21

Follow Us
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ