ಶಾಸಕ ಜಮೀರ್ ವಿರುದ್ಧ ಮತ್ತೇ ಆರೋಪ ಮಾಡಿದ ಸಂಬರಗಿ

ಡ್ರಗ್ಸ್ ಹಗರಣ ಶುರುವಾದ ನಂತರ ದಿನಕ್ಕೊಂದು ಪತ್ರಿಕಾ ಗೋಷ್ಟಿ ನಡೆಸಿದ ನಂತರ ಕೆಲ ಸಮಯದವರೆಗೆ ಸುಮ್ಮನಿದ್ದ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಇಂದು ವಿಧಾನ ಸೌಧಕ್ಕೆ ಆಗಮಿಸಿ ಪುನಃ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ವಿರುದ್ಧ ಹೊಸ ಆರೋಪಗಳನ್ನು ಮಾಡಿದರು. ‘‘ಜಮೀರ್ ಅಹ್ಮದ್ ವಿದೇಶ ಪ್ರವಾಸಕ್ಕೆ ಹೋದ ಮಾಹಿತಿ ಸರ್ಕಾರಕ್ಕೆ ನೀಡದೆ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ, ಈ ಕುರಿತು ಸಿಎಂ ಬಿ.ಎಸ್. ಯಡಿಯೂರಪ್ಪನವರಿಗೂ ದೂರು ನೀಡಿದ್ದೇನೆ ಮತ್ತು ಸಿಸಿಬಿ ಅಧಿಕಾರಿಗಳಿಗೆ ಡಿಜಿಟಲ್ ಎವಿಡೆನ್ಸ್ ನೀಡಲಿದ್ದೇನೆ,’’ ಅಂತ ಸಂಬರಗಿ […]

ಶಾಸಕ ಜಮೀರ್ ವಿರುದ್ಧ ಮತ್ತೇ ಆರೋಪ ಮಾಡಿದ ಸಂಬರಗಿ
ಅರುಣ್​ ಕುಮಾರ್​ ಬೆಳ್ಳಿ

Updated on: Sep 22, 2020 | 8:47 PM

ಡ್ರಗ್ಸ್ ಹಗರಣ ಶುರುವಾದ ನಂತರ ದಿನಕ್ಕೊಂದು ಪತ್ರಿಕಾ ಗೋಷ್ಟಿ ನಡೆಸಿದ ನಂತರ ಕೆಲ ಸಮಯದವರೆಗೆ ಸುಮ್ಮನಿದ್ದ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಇಂದು ವಿಧಾನ ಸೌಧಕ್ಕೆ ಆಗಮಿಸಿ ಪುನಃ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ವಿರುದ್ಧ ಹೊಸ ಆರೋಪಗಳನ್ನು ಮಾಡಿದರು.

‘‘ಜಮೀರ್ ಅಹ್ಮದ್ ವಿದೇಶ ಪ್ರವಾಸಕ್ಕೆ ಹೋದ ಮಾಹಿತಿ ಸರ್ಕಾರಕ್ಕೆ ನೀಡದೆ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ, ಈ ಕುರಿತು ಸಿಎಂ ಬಿ.ಎಸ್. ಯಡಿಯೂರಪ್ಪನವರಿಗೂ ದೂರು ನೀಡಿದ್ದೇನೆ ಮತ್ತು ಸಿಸಿಬಿ ಅಧಿಕಾರಿಗಳಿಗೆ ಡಿಜಿಟಲ್ ಎವಿಡೆನ್ಸ್ ನೀಡಲಿದ್ದೇನೆ,’’ ಅಂತ ಸಂಬರಗಿ ಹೇಳಿದರು.

‘‘ಜಮೀರ್ ಹಲವಾರು ಸಲ ಕೊಲಂಬೊಗೆ ಹೋಗಿದ್ದಾರೆ, ಆದರೆ ಅವರ ಪ್ರವಾಸದ ಬಗ್ಗೆ ಯಾವುದೇ ಮಾಹಿತಿ ಸಿಗುತ್ತಿಲ್ಲ. ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡದೆ ಹೋಗಿ ಕಾನೂನು ಉಲ್ಲಂಘನೆ ಮಾಡಿದ್ದಾರೆ. ಹಾಗಾಗಿ ಜಮೀರ್ ವಿರುದ್ಧ ಕ್ರಮಕೈಗೊಳ್ಳುವಂತೆ ಮನವಿ ಸಿಎಂ ಅವರನ್ನು ಭೇಟಿಯಾಗಿ ಮನವಿ ಪತ್ರ ನೀಡಿದ್ದೇನೆ,’’ ಎಂದು ಸಂಬರಗಿ ತಾನು ವಿಧಾನ ಸೌಧಕ್ಕೆ ಬಂದಿದ್ದ ಕಾರಣವನ್ನು ವಿವರಿಸಿದರು.

Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Follow Us