AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanchari Vijay: ಹುಟ್ಟೂರಿನತ್ತ ಸಂಚಾರಿ ವಿಜಯ್​ ಮೃತದೇಹ ರವಾನೆ; ಸಕಲ ಸರ್ಕಾರಿ ಗೌರವಗಳೊಂದಿಗೆ ಸಂಜೆ ಅಂತ್ಯಕ್ರಿಯೆ

Sanchari Vijay Last Sight: ಮೃತ ದೇಹವನ್ನು ನೇರವಾಗಿ ಪಂಚನಹಳ್ಳಿಗೆ ತೆಗೆದುಕೊಂಡು ಹೋಗುವ ಸಾಧ್ಯತೆ ಹೆಚ್ಚಾಗಿರುವುದರಿಂದ ಹುಳಿಯೂರಿನಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಸಾಧ್ಯತೆ ಇಲ್ಲ ಎನ್ನುವ ಮಾಹಿತಿ ಆಪ್ತರ ವಲಯದಿಂದ ಲಭ್ಯವಾಗಿದೆ.

Sanchari Vijay: ಹುಟ್ಟೂರಿನತ್ತ ಸಂಚಾರಿ ವಿಜಯ್​ ಮೃತದೇಹ ರವಾನೆ; ಸಕಲ ಸರ್ಕಾರಿ ಗೌರವಗಳೊಂದಿಗೆ ಸಂಜೆ ಅಂತ್ಯಕ್ರಿಯೆ
ಸಂಚಾರಿ ವಿಜಯ್
TV9 Web
| Edited By: |

Updated on: Jun 15, 2021 | 12:16 PM

Share

ಬೆಂಗಳೂರು: ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕಿರಿಸಲಾಗಿದ್ದ ನಟ ಸಂಚಾರಿ ವಿಜಯ್​ ಪಾರ್ಥಿವ ಶರೀರವನ್ನು ಹುಟ್ಟೂರಿನಿತ್ತ ತೆಗೆದುಕೊಂಡು ಹೋಗಲಾಗುತ್ತಿದೆ. ಸಂಚಾರಿ ವಿಜಯ್​ ಹುಟ್ಟೂರಾದ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಂಚನಹಳ್ಳಿಗೆ ಮೃತದೇಹವನ್ನು ಸಾಗಿಸಲಾಗುತ್ತಿದ್ದು, ಹುಳಿಯೂರಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡುವ ಬಗ್ಗೆ ಯಾವುದೇ ಸ್ಪಷ್ಟ ನಿರ್ಧಾರ ತೆಗೆದುಕೊಂಡಿಲ್ಲ. ಮೃತ ದೇಹವನ್ನು ನೇರವಾಗಿ ಪಂಚನಹಳ್ಳಿಗೆ ತೆಗೆದುಕೊಂಡು ಹೋಗುವ ಸಾಧ್ಯತೆ ಹೆಚ್ಚಾಗಿರುವುದರಿಂದ ಹುಳಿಯೂರಿನಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಸಾಧ್ಯತೆ ಇಲ್ಲ ಎನ್ನುವ ಮಾಹಿತಿ ಆಪ್ತರ ವಲಯದಿಂದ ಲಭ್ಯವಾಗಿದೆ.

ಎರಡು ದಿನಗಳ ಹಿಂದೆ ನಡೆದ ಭೀಕರ ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದ ನಟ ಸಂಚಾರಿ ವಿಜಯ್(38) ತಮ್ಮ ವಿಭಿನ್ನ ಅಭಿನಯದ ಮೂಲಕ ಚಂದನವನ ಮಾತ್ರವಲ್ಲದೇ ರಾಷ್ಟ್ರಮಟ್ಟದಲ್ಲೇ ಗುರುತಿಸಿಕೊಂಡಿದ್ದ ಕಲಾವಿದರಾಗಿದ್ದರು. ಸಂಕಷ್ಟಕ್ಕೊಳಗಾದವರ ಸೇವೆಯೇ ಸರ್ವಸ್ವ ಅಂದುಕೊಂಡು ಬದುಕುತ್ತಿದ್ದ ನಟ ಸಂಚಾರಿ ವಿಜಯ್ ಜೀವನದ ಕೊನೆಯವರೆಗೂ ನೊಂದವರ ಬೆನ್ನಿಗೆ ನಿಂತಿದ್ದರು. ಮಧ್ಯರಾತ್ರಿವರೆಗೂ ಒಂದಷ್ಟು ಜನರ ಕಣ್ಣೀರು ಒರೆಸಿ ಇನ್ನೇನು ಮನೆ ಸೇರಬೇಕು ಅನ್ನುವಷ್ಟರಲ್ಲಿ ವಿಜಯ್ ಬಾಳಲ್ಲಿ ವಿಧಿ ಕ್ರೂರ ಆಟ ಆಡಿಬಿಟ್ಟಿದೆ. ಬೈಕ್ ಅಪಘಾತದ ತೀವ್ರತೆಗೆ ಕೋಮಾದಲ್ಲಿದ್ದ ನಟ ವಿಜಯ್ ಶಾಶ್ವತವಾಗಿ ಕಣ್ಣುಮುಚ್ಚಿದ್ದಾರೆ. ಇಂದು ಬೆಳಗ್ಗೆ 3.34ಕ್ಕೆ ಜೀವನ್ಮರಣ ಹೋರಾಟ ಅಂತ್ಯಗೊಂಡಿದೆ. ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗಿದ್ದ ಸಂಚಾರಿ ವಿಜಯ್ ಪಾರ್ಥಿವ ಶರೀರವನ್ನು ಕಡೆಯ ಬಾರಿಗೆ ನೋಡಲು ಅನೇಕ ಗಣ್ಯರು ಆಗಮಿಸಿ ಕಣ್ಣೀರು ಸುರಿಸಿದರು.

ಇಂದು ಮುಂಜಾನೆ ಅಂಗಾಂಗ ಕಸಿ ಕಾರ್ಯ ಮುಗಿದ ನಂತರ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರಿಂದ ಅಪೋಲೊ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ. ಬಳಿಕ ವಿಜಯ್‌ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಈಗ ಸಂಚಾರಿ ವಿಜಯ್ ಪಾರ್ಥಿವ ಶರೀರ ರವೀಂದ್ರ ಕಲಾಕ್ಷೇತ್ರದಿಂದ ಹುಟ್ಟೂರಿನತ್ತ ತೆರಳುತ್ತಿದೆ. ಸಂಜೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಟ ವಿಜಯ್ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಂಚನಹಳ್ಳಿಯಲ್ಲಿ ಅಂತ್ಯಕ್ರಿಯೆ ಮಾಡಲಾಗುತ್ತದೆ.

ಇದನ್ನೂ ಓದಿ: ಸಂಚಾರಿ ವಿಜಯ್ ಅಂತಿಮ ದರ್ಶನ ಪಡೆದು ಕಣ್ಣೀರ ವಿದಾಯ ಹೇಳಿದ ಗಣ್ಯರು, ಹಣೆಗೆ ಮುತ್ತಿಟ್ಟು ಬಿಕ್ಕಿ ಬಿಕ್ಕಿ ಅತ್ತ ಕುಟುಂಬಸ್ಥರು 

Sanchari Vijay Death: ಕಣ್ಣೀರು ಹಾಕುತ್ತ ನಟ ಸಂಚಾರಿ ವಿಜಯ್ ಬಗ್ಗೆ ಏನು ಹೇಳುತ್ತಿದೆ ಇಡೀ ಸ್ಯಾಂಡಲ್​ವುಡ್​?

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?