AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬಾರಿಯಾಗ್ತಿದೆ ಹೊಸ ಮನೆ ಕಟ್ಟೋ ಕನಸು: ಇಂದಿನಿಂದ ಮನೆ ನಿರ್ಮಾಣ ಉತ್ಪನ್ನಗಳ ಬೆಲೆ ಏರಿಕೆ

ಇಂದಿನಿಂದ ನಂದಿನಿ ಹಾಲಿನ ದರದ ಜೊತೆಗೆ ಹೋಟೆಲ್ ಊಟ ತಿಂಡಿ ಕಾಫಿ-‌ ಟೀ ದರ ದರ ಏರಿಕೆಯಾಗಿದೆ. ಇದರ ಬೆನ್ನಲ್ಲೇ ಇದೀಗ ಹೊಸ ಮನೆ ಕಟ್ಟುವವರಿಗೆ ಬೆಲೆ ಏರಿಕೆಯ ಶಾಕ್​ ಎದುರಾಗಿದೆ.

ದುಬಾರಿಯಾಗ್ತಿದೆ ಹೊಸ ಮನೆ ಕಟ್ಟೋ ಕನಸು: ಇಂದಿನಿಂದ ಮನೆ ನಿರ್ಮಾಣ ಉತ್ಪನ್ನಗಳ ಬೆಲೆ ಏರಿಕೆ
ಸಾಂದರ್ಭಿಕ ಚಿತ್ರ
Follow us
Vinay Kashappanavar
| Updated By: ರಮೇಶ್ ಬಿ. ಜವಳಗೇರಾ

Updated on: Aug 01, 2023 | 9:58 AM

ಬೆಂಗಳೂರು, (ಆಗಸ್ಟ್ 01):  ಕೋವಿಡ್‌ (Covid) ಮುನ್ನ ಕೊಂಚ ಕೈಗೆಟುಕುವಂತಿದ್ದ ಅಗತ್ಯ ವಸ್ತುಗಳು ತದನಂತರ ಗಣನೀಯವಾಗಿ ಏರಿಕೆ ಕಾಣುತ್ತಲೆ ಇದೆ. ಗೃಹ ಹಾಗೂ ಇತರೆ ಕಟ್ಟಡ ನಿರ್ಮಾಣಕ್ಕೆ(house construction)  ಅಗತ್ಯವಿರುವ ಕಚ್ಚಾವಸ್ತುಗಳ ಬೆಲೆಯೂ(price hike) ಏರುತ್ತಲೆ ಇದೆ. ಇದರಿಂದ ಮನೆ ಕಟ್ಟುವವರನ್ನು ಕಂಗಾಲಾಗುವಂತೆ ಮಾಡಿದೆ.  ಹೌದು…. ದಿನಸಿ, ಹಾಲು-ತರಕಾರಿ ಸೇರಿದಂತೆ ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಜನರು ಕಂಗಾಲಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಹೊಸ ಮನೆ ಕಟ್ಟುವವರಿಗೆ ಬೆಲೆ ಏರಿಕೆಯ ಶಾಕ್​ ಎದುರಾಗಿದೆ. ಇಂದಿನಿಂದ ಅಂದರೆ (ಆಗಸ್ಟ್ 01) ಮರಳು, ಜಲ್ಲಿ, ಗ್ರಾನೈಟ್​​​, ಕಬ್ಬಿಣ ಬೆಲೆ ಮತ್ತಷ್ಟು ಏರಿಕೆಯಾಗಿದೆ.  ಇದರೊಂದಿಗೆ  ಹೊಸ ಮನೆ ಕಟ್ಟೋ ಕನಸು ದುಬಾರಿಯಾಗುತ್ತಿದೆ.

ಇದನ್ನೂ ಓದಿ: ಇಂದಿನಿಂದ ದುಬಾರಿ ದುನಿಯಾ; ಟೊಮೆಟೊ ದರ ಬರೆಯ ಮೇಲೆ ಮತ್ತೊಂದು ಬರೆ, ಹಾಲು-ಹೋಟೆಲ್ ದರ ಹೆಚ್ಚಳ

ಮರಳು, ಎಂ-ಸ್ಯಾಂಡ್​​​, ಜಲ್ಲಿಕಲ್ಲು, ಗ್ರಾನೈಟ್​ ಬಂಡೆ, ಕಬ್ಬಿಣ ಸೇರಿದಂತೆ ಮನೆ ನಿರ್ಮಾಣದ ಇನ್ನಿತರ ವಸ್ತುಗಳ ಪರಿಷ್ಕೃತ ಇಂದಿನಿಂದ ದರ ಜಾರಿಗೆ ಬಂದಿದೆ. ಜೊತೆಗೆ ಮನೆ ನಿರ್ಮಾಣದ ವಸ್ತುಗಳ ಸಾಗಾಣಿಕೆ ದರ ಕೂಡ ದುಬಾರಿಯಾಗಿದೆ. ಇದರೊಂದಿಗೆ ಮನೆ, ಕಟ್ಟಡ ನಿರ್ಮಾಣಕ್ಕೆ ಮುಂದಾದವರಿಗೆ ಮತ್ತಷ್ಟು ಹೆಚ್ಚುವರಿ ದರ ಏರಿಕೆ ಬಿಸಿ ತಟ್ಟಿದೆ.

ಕಳೆದ ಸರ್ಕಾರ ಈ ವರ್ಷ ಶೇ 10 ರಷ್ಟು ರಾಯಲ್ಟಿ ಏರಿಕೆ ಮಾಡಿತ್ತು. ಈ ಬೆನ್ನಲ್ಲೇ ಹೊಸ ಸರ್ಕಾರ ಕೂಡಾ ಮೊದಲ ಬಜೆಟ್ ನಲ್ಲಿ ರಾಜಸ್ವ ಏರಿಕೆ ಮಾಡಿದ್ದು, ನೇರವಾಗಿ ಜನ ಸಾಮಾನ್ಯರಿಗೆ ಇದರ ಎಪೆಕ್ಟ್ ತಟ್ಟಲಿದೆ. ಇದರಿಂದ ಮನೆ ಕಟ್ಟುವ ಕಬ್ಬಿಣ, ಅದಿರು, ಜಲ್ಲಿ ಕಲ್ಲು, ಗ್ರಾನೈಟ್, ಮರಳು, ಎಂ. ಸ್ಯಾಂಡ್ ಸೇರಿದಂತೆ ಇನ್ನಿತರೆ ವಸ್ತುಗಳ ಬೆಲೆ ಇಂದಿನಿಂದ ದುಬಾರಿಯಾಗಲಿದೆ.

ಇನ್ನಷ್ಟು ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ