AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranya Rao Gold Smuggling: ರನ್ಯಾ ರಾವ್​​ ಜಾಮೀನು ಅರ್ಜಿ ವಜಾ, ಚಿನ್ನದ ರಾಣಿಗೆ ಜೈಲೇ ಗತಿ

ಸ್ಯಾಂಡಲ್​ವುಡ್​ ನಟಿ ರನ್ಯಾ ರಾವ್​ ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಬಂಧನವಾಗಿದ್ದು, ಈ ಪ್ರಕರಣದಲ್ಲಿ ಈಗಾಗಲೇ ದಿನ ಡಿಆರ್​ಐ, ಸಿಬಿಐ ತನಿಖೆ ನಡೆಸುತ್ತಿವೆ. ಇದರ ಮಧ್ಯ ಇದೀಗ ಇಡಿ ಸಹ ಈ ಪ್ರಕರಣದಲ್ಲಿ ಪ್ರವೇಶ ಮಾಡಿದ್ದು ನಿನ್ನೆ(ಮಾರ್ಚ್ 13) ರನ್ಯಾ ರಾವ್ ಫ್ಲ್ಯಾಟ್​​ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ಮತ್ತೊಂದೆಡೆ ರನ್ಯಾ ರಾವ್​ ಜಾಮೀನು ಅರ್ಜಿ ಸಹ ತಿರಸ್ಕೃತವಾಗಿದೆ.

Ranya Rao Gold Smuggling: ರನ್ಯಾ ರಾವ್​​ ಜಾಮೀನು ಅರ್ಜಿ ವಜಾ, ಚಿನ್ನದ ರಾಣಿಗೆ ಜೈಲೇ ಗತಿ
ರನ್ಯಾ ರಾವ್
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Mar 14, 2025 | 6:09 PM

Share

ಬೆಂಗಳೂರು, (ಮಾರ್ಚ್ 14): ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಬಂಧನವಾಗಿರುವ ಸ್ಯಾಂಡಲ್​ವುಡ್​ ನಟಿ ರನ್ಯಾ ರಾವ್ (Ranya Rao) ಜಾಮೀನು ಅರ್ಜಿ ವಜಾಗೊಂಡಿದೆ. ಆರ್ಥಿಕ ಅಪರಾಧಗಳ ನ್ಯಾಯಾಲಯವು ರನ್ಯಾ ರಾವ್​ ಅವರ ಜಾಮೀನು ಅರ್ಜಿಯನ್ನು ತಿರಸ್ಕೃತ ಮಾಡಿ (ಮಾರ್ಚ್ 14) ಆದೇಶ ಹೊರಡಿಸಿದೆ. ದುಬೈನಿಂದ ಚಿನ್ನ ಕಳ್ಳ ಸಾಗಣೆ ಆರೋಪದ ಮೇಲೆ ನಟಿ ರನ್ಯಾ ರಾವ್ ಬೆಂಗಳೂರು ವಿಮಾನ ನಿಲ್ದಾಣ ಸಿಕ್ಕಿಬಿದ್ದಿದ್ದು,  ಡಿಆರ್​ಐ ಅಧಿಕಾರಿಗಳು ಬಂಧಿಸಿ ತನಿಖೆ ನಡೆಸಿದ್ದಾರೆ. ಮತ್ತೊಂದೆಡೆ  ನಟಿ ರನ್ಯಾ ರಾವ್​ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ಈ ಪ್ರಕರಣದಲ್ಲಿ ವಾದ-ಪ್ರತಿವಾದಗಳನ್ನು ಆಲಿಸಿ ಇಂದು ನಟಿ ಜಾಮೀನು ಅರ್ಜಿಯನ್ನು ವಜಾ ಮಾಡಿದೆ. ಇದರಿಂದ ಚಿನ್ನದ ರಾಣಿಗೆ ಜೈಲೇ ಗತಿ.

ರನ್ಯಾ ರಾವ್​ ಪರವಾಗಿ ಹಿರಿಯ ವಕೀಲ ಕಿರಣ್ ಜವಳಿ ವಾದ ಮಂಡಿಸಿದರೆ, ಡಿಆರ್ಐ ಪರವಾಗಿ ಮಧು ರಾವ್ ವಾದ ಮಂಡಿಸಿದ್ದರು. ಆದ್ರೆ, ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ಈ ಪ್ರಕರಣದಲ್ಲಿ ವಾದ-ಪ್ರತಿವಾದಗಳನ್ನು ಆಲಿಸಿ, ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು. ಅದರಂತೆ ಕೋರ್ಟ್​ ರನ್ಯಾ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದ್ದು, ರನ್ಯಾ ಜೈಲಿನಲ್ಲೇ ಉಳಿಯಬೇಕಿದೆ. ಇನ್ನು ಜಾಮೀನಿಗಾಗಿ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಇದೆ.

ಇದನ್ನೂ ಓದಿ: ರನ್ಯಾ ರಾವ್ ಪ್ರಕರಣಕ್ಕೆ ಇಡಿ ಎಂಟ್ರಿ; ಹೊರ ಬಿತ್ತು ಹವಾಲಾ ದಂಧೆ

ಇಡಿಯಿಂದ ತನಿಖೆ ಚುರುಕು

ಇಷ್ಟು ದಿನ ರನ್ಯಾ ರಾವ್ ಕೇಸ್​ನಲ್ಲಿ ಸಿಬಿಐ ಅಧಿಕಾರಿಗಳು ಹಾಗೂ ಡಿಆರ್​ಐ ಅಧಿಕಾರಿಗಳು ಮಾತ್ರ ವಿಚಾರಣೆ ನಡೆಸುತ್ತಾ ಇದ್ದರು. ಈಗ ಕೇಸ್​ನಲ್ಲಿ ಇಡಿಯಿಂದ ಇಸಿಐಆರ್ ದಾಖಲಾಗಿದೆ. ಇಸಿಐಆರ್ ಎಂದರೆ ಎನ್​ಫೋರ್ಸ್​ಮೆಂಟ್ ಕೇಸ್ ಇನ್​ಫಾರ್ಮೇಷನ್ ರಿಪೋರ್ಟ್. ಅಕ್ರಮ ಹಣ ವರ್ಗಾವಣೆ ವಿಚಾರ ತಿಳಿದಿರುವುದರಿಂದ ಈ ಕೇಸ್ ದಾಖಲಾಗಿದೆ. ಇದರ ಬೆನ್ನಲ್ಲೇ ಇಡಿ ರನ್ಯಾ ರಾವ್​ ಹಾಗೂ ಎರಡನೇ ಆರೋಪಿ ತರುಣ್ ಕೊಂಡೂರು ರಾಜು ನಿವಾಸದ ಮೇಲೂ ದಾಳಿ ಮಾಡಿ ಮಹತ್ವದ ದಾಖಲೆ ಕಲೆಹಾಕಿದೆ.

ಇದನ್ನೂ ಓದಿ
Image
ರನ್ಯಾ ಪ್ರಕರಣಕ್ಕೆ ಇಡಿ ಎಂಟ್ರಿ; ಹೊರ ಬಿತ್ತು ಹವಾಲಾ ದಂಧೆ
Image
ನಟಿ ರನ್ಯಾ ರಾವ್​ ಕೇಸ್‌: ಸಿಐಡಿ ತನಿಖೆ ಆದೇಶ ಹಿಂಪಡೆದ ರಾಜ್ಯ ಸರ್ಕಾರ!
Image
ಚಿನ್ನ ಕಳ್ಳ ಸಾಗಣೆ: ರನ್ಯಾ ಜತೆ ನಿರಂತರ ಸಂಪರ್ಕದಲ್ಲಿ ಇದ್ದ ಪ್ರಭಾವಿಗಳು
Image
ಅಪ್ಪ ಪೋಲಿಸ್.. ಮಗಳು ಕಳ್ಳಿ.. ನಟಿ ರನ್ಯಾ ಚಿನ್ನದ ರಹಸ್ಯ!

ಇನ್ನು ಗೋಲ್ಡ್​ ಸ್ಮಗ್ಲಿಂಗ್ ವಿಚಾರದಲ್ಲಿ ಅಕ್ರಮ ಹಣ ವರ್ಗಾವಣೆ ಆಗಿರೋದು ಮೇಲ್ನೋಟಕ್ಕೆ ದೃಢಪಟ್ಟಿದೆ. ಹಾವಾಲಾ ದಂಧೆ ಮೂಲಕ ಭಾರತದಿಂದ ಹಣ ದುಬೈಗೆ ಹೋಗುತ್ತಿತ್ತು. ಬಳಿಕ ಚಿನ್ನದ ಗಟ್ಟಿ ರೂಪದಲ್ಲಿ ಬೆಂಗಳೂರಿಗೆ ವಾಪಸ್ ಬರುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 5:50 pm, Fri, 14 March 25

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!