AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್​ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ಸಂಜನಾ ಗಲ್ರಾನಿ ಬಿಡುಗಡೆ

ಸ್ಯಾಂಡಲ್​ವುಡ್​ನಲ್ಲಿ ಡ್ರಗ್​ ಡೀಲ್​ ಪ್ರಕರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಮೊದಲು ನಟಿ ರಾಗಿಣಿ ದ್ವಿವೇದಿ ಅರೆಸ್ಟ್​ ಆಗಿದ್ದರು. ನಂತರ ಈ ಪ್ರಕರಣದಲ್ಲಿ ಸಂಜನಾ ಹೆಸರು ತಳಕು ಹಾಕಿಕೊಂಡಿತ್ತು. ನಂತರ ಅವರನ್ನು ಬಂಧಿಸಲಾಗಿತ್ತು.

ಡ್ರಗ್​ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ಸಂಜನಾ ಗಲ್ರಾನಿ ಬಿಡುಗಡೆ
ಸಂಜನಾ
ರಾಜೇಶ್ ದುಗ್ಗುಮನೆ
|

Updated on:Dec 11, 2020 | 9:44 PM

Share

ಬೆಂಗಳೂರು: ಡ್ರಗ್ಸ್​ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟಿ ಸಂಜನಾ ಗಲ್ರಾನಿಗೆ ಹೈಕೋರ್ಟ್​ ಜಾಮೀನು ಮಂಜೂರು ಮಾಡಿದೆ ಬೆನ್ನಲ್ಲೇ ಅವರು ಜೈಲಿನಿಂದ ಹೊರ ಬಂದಿದ್ದಾರೆ. ಈ ಮೂಲಕ 3 ತಿಂಗಳ ಬಳಿಕ ಅವರಿಗೆ ಬಿಡುಗಡೆ ಭಾಗ್ಯ ಸಿಕ್ಕಂತಾಗಿದೆ.

ನಟಿ ಸಂಜನಾಗೆ ಗೈನಕಾಲಜಿಗೆ (Gynecology) ಸಂಬಂಧಿಸಿದ ಚಿಕಿತ್ಸೆ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಜಾಮೀನು ನೀಡಿ ಎಂದು ಸಂಜನಾ ಪರ ವಕೀಲರು ವೈದ್ಯರ ಪ್ರಮಾಣ ಪತ್ರದ ಜೊತೆಗೆ ಕೋರ್ಟ್​​ಗೆ ಮನವಿ ಸಲ್ಲಿಸಿದ್ದರು. ವಿಚಾರಣೆ ಬಳಿ ಅದನ್ನು ಅದನ್ನು ಅಂಗೀಕರಿಸಿದ ನ್ಯಾಯಧೀಶರು ಅನಾರೋಗ್ಯ ಕಾರಣಕ್ಕಾಗಿ ನಟಿ ಸಂಜನಾಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.

ಸ್ಯಾಂಡಲ್​ವುಡ್​ನಲ್ಲಿ ಡ್ರಗ್​ ಡೀಲ್​ ಪ್ರಕರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಮೊದಲು ನಟಿ ರಾಗಿಣಿ ದ್ವಿವೇದಿ ಅರೆಸ್ಟ್​ ಆಗಿದ್ದರು. ನಂತರ ಈ ಪ್ರಕರಣದಲ್ಲಿ ಸಂಜನಾ ಹೆಸರು ತಳಕು ಹಾಕಿಕೊಂಡಿತ್ತು. ಆದರೆ, ನನಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಂಜನಾ ಸ್ಪಷ್ಟನೆ ನೀಡಿದ್ದರು. ಆದರೆ, ಪೊಲೀಸರು ಇವರನ್ನು ಕೂಡ ಬಂಧಿಸಿ ಕರೆದೊಯ್ದಿದ್ದರು.

ಮಾಧ್ಯಮಗಳಿಗಿಲ್ಲ ಪ್ರತಿಕ್ರಿಯೆ: ನಟಿ ಸಂಜನಾ ಗಲ್ರಾನಿ ಹೆಸರು ಡ್ರಗ್​ ಕೇಸ್​ನಲ್ಲಿ ತಳುಕು ಹಾಕಿಕೊಂಡ ಬೆನ್ನಲ್ಲೇ ಮಾಧ್ಯಮಗಳ ವಿರುದ್ಧ  ಅವರು ಹರಿಹಾಯ್ದಿದ್ದರು. ಈಗ ಅವರು ಜೈಲಿನಿಂದ ಹೊರ ಬಂದ ಕೂಡಲೇ ಮಾಧ್ಯಮದವರಿಗೆ ಯಾವುದೆ ಪ್ರತಿಕ್ರಿಯೆ ನೀಡದೇ ಹೊರ ನಡೆದಿದ್ದಾರೆ.

ನಟಿ ಸಂಜನಾಗೆ ಶಸ್ತ್ರಚಿಕಿತ್ಸೆ ಅಗತ್ಯವಿದೆ; ಹೀಗಾಗಿ ಜಾಮೀನು ಮಂಜೂರು

Published On - 9:41 pm, Fri, 11 December 20

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ