AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್​ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ಸಂಜನಾ ಗಲ್ರಾನಿ ಬಿಡುಗಡೆ

ಸ್ಯಾಂಡಲ್​ವುಡ್​ನಲ್ಲಿ ಡ್ರಗ್​ ಡೀಲ್​ ಪ್ರಕರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಮೊದಲು ನಟಿ ರಾಗಿಣಿ ದ್ವಿವೇದಿ ಅರೆಸ್ಟ್​ ಆಗಿದ್ದರು. ನಂತರ ಈ ಪ್ರಕರಣದಲ್ಲಿ ಸಂಜನಾ ಹೆಸರು ತಳಕು ಹಾಕಿಕೊಂಡಿತ್ತು. ನಂತರ ಅವರನ್ನು ಬಂಧಿಸಲಾಗಿತ್ತು.

ಡ್ರಗ್​ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ಸಂಜನಾ ಗಲ್ರಾನಿ ಬಿಡುಗಡೆ
ಸಂಜನಾ
ರಾಜೇಶ್ ದುಗ್ಗುಮನೆ
|

Updated on:Dec 11, 2020 | 9:44 PM

Share

ಬೆಂಗಳೂರು: ಡ್ರಗ್ಸ್​ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟಿ ಸಂಜನಾ ಗಲ್ರಾನಿಗೆ ಹೈಕೋರ್ಟ್​ ಜಾಮೀನು ಮಂಜೂರು ಮಾಡಿದೆ ಬೆನ್ನಲ್ಲೇ ಅವರು ಜೈಲಿನಿಂದ ಹೊರ ಬಂದಿದ್ದಾರೆ. ಈ ಮೂಲಕ 3 ತಿಂಗಳ ಬಳಿಕ ಅವರಿಗೆ ಬಿಡುಗಡೆ ಭಾಗ್ಯ ಸಿಕ್ಕಂತಾಗಿದೆ.

ನಟಿ ಸಂಜನಾಗೆ ಗೈನಕಾಲಜಿಗೆ (Gynecology) ಸಂಬಂಧಿಸಿದ ಚಿಕಿತ್ಸೆ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಜಾಮೀನು ನೀಡಿ ಎಂದು ಸಂಜನಾ ಪರ ವಕೀಲರು ವೈದ್ಯರ ಪ್ರಮಾಣ ಪತ್ರದ ಜೊತೆಗೆ ಕೋರ್ಟ್​​ಗೆ ಮನವಿ ಸಲ್ಲಿಸಿದ್ದರು. ವಿಚಾರಣೆ ಬಳಿ ಅದನ್ನು ಅದನ್ನು ಅಂಗೀಕರಿಸಿದ ನ್ಯಾಯಧೀಶರು ಅನಾರೋಗ್ಯ ಕಾರಣಕ್ಕಾಗಿ ನಟಿ ಸಂಜನಾಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.

ಸ್ಯಾಂಡಲ್​ವುಡ್​ನಲ್ಲಿ ಡ್ರಗ್​ ಡೀಲ್​ ಪ್ರಕರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಮೊದಲು ನಟಿ ರಾಗಿಣಿ ದ್ವಿವೇದಿ ಅರೆಸ್ಟ್​ ಆಗಿದ್ದರು. ನಂತರ ಈ ಪ್ರಕರಣದಲ್ಲಿ ಸಂಜನಾ ಹೆಸರು ತಳಕು ಹಾಕಿಕೊಂಡಿತ್ತು. ಆದರೆ, ನನಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಂಜನಾ ಸ್ಪಷ್ಟನೆ ನೀಡಿದ್ದರು. ಆದರೆ, ಪೊಲೀಸರು ಇವರನ್ನು ಕೂಡ ಬಂಧಿಸಿ ಕರೆದೊಯ್ದಿದ್ದರು.

ಮಾಧ್ಯಮಗಳಿಗಿಲ್ಲ ಪ್ರತಿಕ್ರಿಯೆ: ನಟಿ ಸಂಜನಾ ಗಲ್ರಾನಿ ಹೆಸರು ಡ್ರಗ್​ ಕೇಸ್​ನಲ್ಲಿ ತಳುಕು ಹಾಕಿಕೊಂಡ ಬೆನ್ನಲ್ಲೇ ಮಾಧ್ಯಮಗಳ ವಿರುದ್ಧ  ಅವರು ಹರಿಹಾಯ್ದಿದ್ದರು. ಈಗ ಅವರು ಜೈಲಿನಿಂದ ಹೊರ ಬಂದ ಕೂಡಲೇ ಮಾಧ್ಯಮದವರಿಗೆ ಯಾವುದೆ ಪ್ರತಿಕ್ರಿಯೆ ನೀಡದೇ ಹೊರ ನಡೆದಿದ್ದಾರೆ.

ನಟಿ ಸಂಜನಾಗೆ ಶಸ್ತ್ರಚಿಕಿತ್ಸೆ ಅಗತ್ಯವಿದೆ; ಹೀಗಾಗಿ ಜಾಮೀನು ಮಂಜೂರು

Published On - 9:41 pm, Fri, 11 December 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!