AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಆದಿತ್ಯ ಆಳ್ವಾ ಕೊನೆಗೂ ಅರೆಸ್ಟ್

ಸ್ಯಾಂಡಲ್​ವುಡ್ ಡ್ರಗ್ಸ್ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಆದಿತ್ಯ ಆಳ್ವಾನನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ.

ಡ್ರಗ್ಸ್ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಆದಿತ್ಯ ಆಳ್ವಾ ಕೊನೆಗೂ ಅರೆಸ್ಟ್
ಆದಿತ್ಯ ಆಳ್ವಾ
ಆಯೇಷಾ ಬಾನು
ಆಯೇಷಾ ಬಾನು|

Updated on:Jan 12, 2021 | 7:11 AM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ನ ಸಂಬಂಧ ನಾಪತ್ತೆಯಾಗಿದ್ದ ಎ6 ಆದಿತ್ಯ ಆಳ್ವಾನನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಸಿಸಿಬಿ ಪೊಲೀಸರು ಚೆನ್ನೈನಲ್ಲಿ ನಿನ್ನೆ ರಾತ್ರಿ ಮಾಜಿ ಸಚಿವ ಜೀವರಾಜ್ ಆಳ್ವಾ ಪುತ್ರ ಆದಿತ್ಯ ಆಳ್ವಾನನ್ನು ಅರೆಸ್ಟ್ ಮಾಡಿದ್ದು ಸದ್ಯ ಈಗ ಬೆಂಗಳೂರಿಗೆ ಕರೆತಂದಿದ್ದಾರೆ.

ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಯಲ್ಲಿ ಆದಿತ್ಯ ಆಳ್ವಾನ ವಿಚಾರಣೆ ನಡೆಯುತ್ತಿದೆ. ಮುಂಬೈ ಸೇರಿದಂತೆ ಹಲವೆಡೆ ಬಂಧನ ಭೀತಿಯಲ್ಲಿ ತಲೆಮರೆಸಿಕೊಂಡಿದ್ದ ಆದಿತ್ಯ ಆಳ್ವಾ, ಕಳೆದ 15 ದಿನಗಳಿಂದ ಚೆನ್ನೈ ಹೊರವಲಯದ ರೆಸಾರ್ಟ್​ನಲ್ಲಿ ಬಚ್ಚಿಟ್ಟಿಕೊಂಡಿದ್ದ. ಸದ್ಯ CCB ಪೊಲೀಸರು ಕಾರ್ಯಾಚರಣೆ ನಡೆಸಿ ಕೊನೆಗೂ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಡ್ರಗ್ಸ್ ಪ್ರಕರಣದ ತನಿಖೆ ಆರಂಭವಾಗುತ್ತಿದ್ದಂತೆ ಆದಿತ್ಯ ಆಳ್ವಾ ಪರಾರಿಯಾಗಿದ್ದ. 2020ರ ಸೆಪ್ಟೆಂಬರ್‌ನಲ್ಲಿ ಆದಿತ್ಯ ರೆಸಾರ್ಟ್ ಮೇಲೆ ಬೆಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ದಾಳಿ ವೇಳೆ ರೆಸಾರ್ಟ್​ನಲ್ಲಿ ಗಾಂಜಾ, ಮಾತ್ರೆಗಳು ಪತ್ತೆಯಾಗಿದ್ದವು. ಪೊಲೀಸ್ ದಾಳಿಗೂ ಮೊದಲೇ ಆದಿತ್ಯ ಆಳ್ವಾ ತಲೆಮರೆಸಿಕೊಂಡಿದ್ದು ಕೊನೆಗೂ ಈಗ ಅರೆಸ್ಟ್ ಆಗಿದ್ದಾನೆ.

ಆದಿತ್ಯ ಸಹೋದರಿ ಪ್ರಿಯಾಂಕಾ ಆಳ್ವಾಗೆ CCB ಬುಲಾವ್

Published On - 7:01 am, Tue, 12 January 21

Follow Us
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!