AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಗೊಳ್ಳಿ ರಾಯಣ್ಣ ಸ್ಮಾರಕಕ್ಕೆ ಹಣಕೊಡದ ಸರ್ಕಾರ: ಸಿದ್ದರಾಮಯ್ಯ ಟೀಕೆ

ಸಂಗೊಳ್ಳಿ ರಾಯಣ್ಣ ಹುತಾತ್ಮರಾದ ಸ್ಥಳ ಹಾಗೂ ಜನ್ಮಸ್ಥಳದ ಅಭಿವೃದ್ಧಿಗೆ ₹ 270 ಕೋಟಿ ರೂಪಾಯಿ ನೀಡಿದ್ದೆ. ಈ ಸರ್ಕಾರ ಬಾಕಿ ₹ 50 ಕೋಟಿ ನೀಡಿಲ್ಲ. ಹೀಗಾಗಿ ಕಾಮಗಾರಿ ಸ್ಥಗಿತವಾಗಿದೆ ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.

ಸಂಗೊಳ್ಳಿ ರಾಯಣ್ಣ ಸ್ಮಾರಕಕ್ಕೆ ಹಣಕೊಡದ ಸರ್ಕಾರ: ಸಿದ್ದರಾಮಯ್ಯ ಟೀಕೆ
ಸಂಗೊಳಿರಾಯಣ್ಣ ಕಂಚಿನ ಪ್ರತಿಮೆ ಉದ್ಘಾಟನೆ
Follow us
shruti hegde
|

Updated on:Apr 02, 2021 | 4:56 PM

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲೂಕಿನ ಯಕ್ಕನಹಳ್ಳಿ ಗ್ರಾಮದಲ್ಲಿ ನಿರ್ಮಿಸಲಾದ ಸಂಗೊಳ್ಳಿರಾಯಣ್ಣ ಕಂಚಿನ ಪ್ರತಿಮೆಯನ್ನು ಇಂದು ಶುಕ್ರವಾರ ಉದ್ಘಾಟಿಸಲಾಯಿತು. ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಮೆಯನ್ನು ಉದ್ಘಾಟಿಸಿದರು. ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಚ್. ಆಂಜನೇಯ, ಶಾಸಕ ಎಸ್. ರಾಮಪ್ಪ ಸಿದ್ದರಾಮಯ್ಯ ಸಾಥ್​ ನೀಡಿದರು.

ಡೊಳ್ಳು ಬಾರಿಸುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಸಂಗೊಳ್ಳಿ ರಾಯಣ್ಣ ದೇಶ ಕಂಡ ಮಹಾನ್ ದೇಶ ಪ್ರೇಮಿ. ಬ್ರಿಟಿಷರ ವಿರುದ್ಧ ಹೋರಾಟದ ದಿಟ್ಟ ಶಕ್ತಿ ರಾಯಣ್ಣ. ಕಿತ್ತೂರ ಸಂಸ್ಥಾನದ ರಕ್ಷಣೆಗೆ ಪ್ರಾಣದ ಹಂಗು ತೊರೆದು ಹೋರಾಡಿದಾತ. ದೇಶದಲ್ಲಿ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ಆರಂಭವಾಗಿದ್ದು ಮೈಸೂರಿನ ಟಿಪ್ಪು ಸುಲ್ತಾನ್ ಹಾಗೂ ಕಿತ್ತೂರ ರಾಣಿ ಚನ್ನಮ್ಮರಿಂದ. ನಮ್ಮವರೇ ಕೆಲ ದೇಶ ದ್ರೋಹಗಳಿದ್ದರಿಂದ ಇದನ್ನರಿತ ಬ್ರಿಟಿಷರು ಅವರನ್ನು ಬಳಸಿಕೊಂಡು ಚನ್ನಮ್ಮನ್ನು ಸೋಲಿಸಿದರು. ಇಂತಹ ಕಷ್ಟದ ಕಾಲದಲ್ಲಿ ರಾಯಣ್ಣ ಗುಪ್ತವಾಗಿ ಗೆರಿಲ್ಲಾ ಯುದ್ಧ ಮಾಡಿದ್ದರು. ಸಂಗೊಳ್ಳಿ ರಾಯಣ್ಣ ಕೆರೆಯಲ್ಲಿ ಸ್ನಾನ ಮಾಡುವಾಗ ಬ್ರಿಟಿಷರು ಬಂಧಿಸಿದ್ದರು. ಅವರ ಅಡಗುಸ್ಥಳದ ಮಾಹಿತಿ ನೀಡಿದ್ದು ಸಹ ನಮ್ಮವರೇ ಎಂದು ಮಾತನಾಡಿದರು.

ಸಂಗೊಳ್ಳಿ ರಾಯಣ್ಣ ನಮ್ಮನ್ನ ಅಗಲಿರಬಹುದು. ಆದರೆ ಅವರ ಆಶಯಗಳು ನಮ್ಮೊಂದಿಗೆ ಇವೆ. ಸಂಗೊಳ್ಳಿ ರಾಯಣ್ಣ ಹುತಾತ್ಮರಾದ ಸ್ಥಳ ಹಾಗೂ ಜನ್ಮಸ್ಥಳದ ಅಭಿವೃದ್ಧಿಗೆ ₹ 270 ಕೋಟಿ ನೀಡಿದ್ದೆ. ಗುತ್ತಿಗೆದಾರರ ಈ ಸರ್ಕಾರ ಬಾಕಿ ಹಣ ₹ 50 ಕೋಟಿ ನೀಡಿಲ್ಲ. ಅದಕ್ಕಾಗಿ ಕಾಮಗಾರಿ ಸ್ಥಗಿತವಾಗಿದೆ ಎಂದು ಅಭಿಪ್ರಾಯ ಹಂಚಿಕೊಂಡರು.

ಇದನ್ನೂ ಓದಿ: ರಾಜ್ಯಪಾಲರು ಮಧ್ಯಪ್ರವೇಶಿಸಿ ಮುಖ್ಯಮಂತ್ರಿಗಳನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕು: ಸಿದ್ದರಾಮಯ್ಯ​

ಇದನ್ನೂ ಓದಿ: ಸಿದ್ದರಾಮಯ್ಯ ತಮ್ಮ 5 ವರ್ಷ ಕಾಲ ಆಡಳಿತದಲ್ಲಿ ಏನೂ ಮಾಡದಿದ್ದಕ್ಕೆ ಹೀಗೆ ಮಾತಾಡ್ತಿದ್ದಾರೆ ಎಂದ ಡಿಸಿಎಂ ಕಾರಜೋಳ

(Sangolli Rayanna is the greatest patriot ever seen says Siddaramaiah in Davangere)

Published On - 4:49 pm, Fri, 2 April 21

ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ತಮ್ಮ ಭಾಷಣದಲ್ಲಿ ಶಿವಕುಮಾರ್​ರನ್ನು ಡೈನಾಮಿಕ್ ಲೀಡರ್ ಎಂದ ಪವನ್ ಕಲ್ಯಾಣ್
ತಮ್ಮ ಭಾಷಣದಲ್ಲಿ ಶಿವಕುಮಾರ್​ರನ್ನು ಡೈನಾಮಿಕ್ ಲೀಡರ್ ಎಂದ ಪವನ್ ಕಲ್ಯಾಣ್
‘ಜಯಹೇ ಕರ್ನಾಟಕ ಮಾತೆ’ ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಪವನ್ ಕಲ್ಯಾಣ್
‘ಜಯಹೇ ಕರ್ನಾಟಕ ಮಾತೆ’ ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಪವನ್ ಕಲ್ಯಾಣ್
ಕುಮಾರಸ್ವಾಮಿ ಒಬ್ಬ ಹಿಟ್ ಅಂಡ್ ರನ್ ಗಿರಾಕಿ: ಡಿಕೆ ಸುರೇಶ್
ಕುಮಾರಸ್ವಾಮಿ ಒಬ್ಬ ಹಿಟ್ ಅಂಡ್ ರನ್ ಗಿರಾಕಿ: ಡಿಕೆ ಸುರೇಶ್