AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾಗೆ ಸಿಗಲಿಲ್ಲ ರಿಲೀಫ್.. ಪರಪ್ಪನ ಅಗ್ರಹಾರ ಜೈಲೇ ಗಟ್ಟಿ

[lazy-load-videos-and-sticky-control id=”_ZSGVv0vuFs”] ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ CCB ಯಿಂದ ಬಂಧನಕ್ಕೊಳಗಾಗಿರುವ ನಟಿ ಸಂಜನಾ ಗಲ್ರಾನಿಯ ಜಾಮೀನು ಅರ್ಜಿ ವಿಚಾರಣೆ ನಡೆಸಿದ 1ನೇ ಎಸಿಎಂಎಂ ‌ಕೋರ್ಟ್‌ ಸಂಜನಾಗೆ ಜಾಮೀನು ನಿರಾಕರಿಸಿದೆ. ಈ ಮಧ್ಯೆ, ಆರೋಪಿ ಸಂಜನಾರನ್ನು ತನ್ನ ಕಸ್ಟಡಿಗೆ ನೀಡುವುದು ಬೇಡ ಎಂದು ಸಿಸಿಬಿ ಕೋರ್ಟ್ ಗಮನಕ್ಕೆ ತಂದ ಕಾರಣ, ಸಂಜನಾಗೆ 2 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ಹೊರಡಿಸಿದೆ. ಹಾಗಾಗಿ, ಸಂಜನಾ ಇಂದೇ ಪರಪ್ಪನ ಅಗ್ರಹಾರ ಜೈಲಿಗೆ ತೆರಳಬೇಕಾಗಿದೆ. […]

ಸಂಜನಾಗೆ ಸಿಗಲಿಲ್ಲ ರಿಲೀಫ್.. ಪರಪ್ಪನ ಅಗ್ರಹಾರ ಜೈಲೇ ಗಟ್ಟಿ
ಸಾಧು ಶ್ರೀನಾಥ್​
|

Updated on:Sep 16, 2020 | 6:49 PM

Share

[lazy-load-videos-and-sticky-control id=”_ZSGVv0vuFs”]

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ CCB ಯಿಂದ ಬಂಧನಕ್ಕೊಳಗಾಗಿರುವ ನಟಿ ಸಂಜನಾ ಗಲ್ರಾನಿಯ ಜಾಮೀನು ಅರ್ಜಿ ವಿಚಾರಣೆ ನಡೆಸಿದ 1ನೇ ಎಸಿಎಂಎಂ ‌ಕೋರ್ಟ್‌ ಸಂಜನಾಗೆ ಜಾಮೀನು ನಿರಾಕರಿಸಿದೆ.

ಈ ಮಧ್ಯೆ, ಆರೋಪಿ ಸಂಜನಾರನ್ನು ತನ್ನ ಕಸ್ಟಡಿಗೆ ನೀಡುವುದು ಬೇಡ ಎಂದು ಸಿಸಿಬಿ ಕೋರ್ಟ್ ಗಮನಕ್ಕೆ ತಂದ ಕಾರಣ, ಸಂಜನಾಗೆ 2 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ಹೊರಡಿಸಿದೆ. ಹಾಗಾಗಿ, ಸಂಜನಾ ಇಂದೇ ಪರಪ್ಪನ ಅಗ್ರಹಾರ ಜೈಲಿಗೆ ತೆರಳಬೇಕಾಗಿದೆ.

ಈ ಪ್ರಕರಣವನ್ನು 1ನೇ ಎಸಿಎಂಎಂ ಕೋರ್ಟ್​ನಿಂದ 33 ನೇ ಎಸಿಎಂಎಂಗೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ. ಸೆ.18 ರಂದು ಸಂಜನಾರನ್ನು ವಿಶೇಷ ಕೋರ್ಟ್ ಗೆ ಹಾಜರುಪಡಿಸಲು ಸೂಚನೆ ನೀಡಲಾಗಿದ್ದು, ಜಾಮೀನು ಅರ್ಜಿಯನ್ನು ಅಲ್ಲಿಯೇ ತೀರ್ಮಾನ ಮಾಡುವಂತೆ ಆದೇಶದಲ್ಲಿ ಹೇಳಲಾಗಿದೆ.

ಸಂಜನಾ ಪರ ವಕೀಲರ ವಾದ ಹೀಗಿತ್ತು.. ನಟಿ ಸಂಜನಾ ಗಲ್ರಾನಿ ಪರ ವಕೀಲರಾದ ಶ್ರೀನಿವಾಸರಾವ್ ಅವರಿಂದ ವಾದ ಮಂಡನೆ ಮಾಡಲಾಯಿತು. ಸಿಸಿಬಿ ಪೊಲೀಸರ ಕ್ರಮಕ್ಕೆ ತಕರಾರು ಎತ್ತಿದ ವಕೀಲರು, ಪ್ರಕರಣವನ್ನು NDPS ವಿಶೇಷ ಕೋರ್ಟ್‌ಗೆ ವರ್ಗಾಯಿಸಬೇಕಿತ್ತು. ಆದರೆ ಜಾಮೀನು ತಪ್ಪಿಸುವ ಉದ್ದೇಶದಿಂದ 1ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಿದ್ದಾರೆ ಎಂದು ಸಿಸಿಬಿ ಪೊಲೀಸರ ಕ್ರಮಕ್ಕೆ ತಕರಾರು ಎತ್ತಿದರು.

ಇದು NDPS ಕೇಸ್ ಆಗಿರುವುದರಿಂದ ವಿಶೇಷ ಕೋರ್ಟ್‌ ಇದೆ. ಅಲ್ಲಿ ಜಾಮೀನು ಅರ್ಜಿಯೂ ವಿಚಾರಣೆಗೆ ಬಾಕಿ ಇದೆ. ಅಲ್ಲೇ ಹಾಜರುಪಡಿಸಿದ್ದರೆ ಜಾಮೀನಿಗೆ ಮನವಿ ಸಲ್ಲಿಸಬಹುದಿತ್ತು ಎಂದರು.

ಜೊತೆಗೆ ಸಂಜನಾ ಮೇಲಿನ ಆರೋಪವೇನು ಎಂಬುದನ್ನು ಸಿಸಿಬಿ ತಿಳಿಸಿಲ್ಲ ಹಾಗೂ ಯಾವ ಸೆಕ್ಷನ್ ಅಡಿ ಸಂಜನಾ ಆರೋಪವಿದೆ ಎಂಬುದನ್ನೂ ತಿಳಿಸಿಲ್ಲ. ಹೀಗಾಗಿ ಇದು ವಿಶೇಷ ಕೋರ್ಟ್ ವ್ಯಾಪ್ತಿಗೆ ಬರುತ್ತದೋ ಇಲ್ಲವೋ ತಿಳಿದಿಲ್ಲ. ಇದರಿಂದ ಸಿಸಿಬಿ ಆರೋಪವೇ ಅಸ್ಪಷ್ಟವಾಗಿರುವುದರಿಂದ ನ್ಯಾಯಾಂಗ ಬಂಧನ ಬೇಡ ಎಂದರು. ಜೊತೆಗೆ 3 ವರ್ಷಕ್ಕಿಂತ ಕಡಿಮೆ ಶಿಕ್ಷೆಯಿದ್ದರೆ ಇಲ್ಲೇ ಜಾಮೀನು ನೀಡಬಹುದು. ಹೀಗಾಗಿ ಸಂಜನಾರಿಗೆ ಜಾಮೀನು ನೀಡಲು ಸಂಜನಾ ಪರ ವಕೀಲರು ವಾದ ಮಂಡಿಸಿದರು.

Published On - 5:30 pm, Wed, 16 September 20

ಬೀದಿನಾಯಿಯನ್ನು ಗುಂಡಿಕ್ಕಿ ಕೊಂದ ನ್ಯಾಯಮೂರ್ತಿ ಮನೆಯ ಭದ್ರತಾ ಸಿಬ್ಬಂದಿ
ಬೀದಿನಾಯಿಯನ್ನು ಗುಂಡಿಕ್ಕಿ ಕೊಂದ ನ್ಯಾಯಮೂರ್ತಿ ಮನೆಯ ಭದ್ರತಾ ಸಿಬ್ಬಂದಿ
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ