AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಸರ್ಕಾರವೇ ಕೊಲೆ ಮಾಡಿದೆ: ಗುತ್ತಿಗೆದಾರರ ಸಂಘ ಆಕ್ರೋಶ, ಮುಷ್ಕರಕ್ಕೆ ನಿರ್ಧಾರ

ಭ್ರಷ್ಟಾಚಾರ ಖಂಡಿಸಿ ನಾವು ಒಂದು ತಿಂಗಳು ಕೆಲಸ ಮಾಡುವುದಿಲ್ಲ ಎಂದು ಘೋಷಿಸಿದರು. ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳಲ್ಲೂ ಭ್ರಷ್ಟಾಚಾರ ಮಿತಿ ಮೀರಿದೆ. ಬಿಜೆಪಿ ಸರ್ಕಾರವು ರೌಡಿಸಂ ಮಾಡುತ್ತಿದೆ ಎಂದು ದೂರಿದರು.

ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಸರ್ಕಾರವೇ ಕೊಲೆ ಮಾಡಿದೆ: ಗುತ್ತಿಗೆದಾರರ ಸಂಘ ಆಕ್ರೋಶ, ಮುಷ್ಕರಕ್ಕೆ ನಿರ್ಧಾರ
ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮಾತನಾಡಿದರು.
TV9 Web
| Edited By: |

Updated on:Apr 13, 2022 | 1:19 PM

Share

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಅವರದ್ದು ಆತ್ಮಹತ್ಯೆ ಅಲ್ಲ, ಅದು ಸರ್ಕಾರವೇ ಮಾಡಿರುವ ಕೊಲೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೇಳಿದರು. ಚಾಮರಾಜಪೇಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅತ್ಯಂತ ಭ್ರಷ್ಟ ಸರ್ಕಾರ ಆಡಳಿತದಲ್ಲಿದೆ. ಈ ಭ್ರಷ್ಟಾಚಾರ ಖಂಡಿಸಿ ನಾವು ಒಂದು ತಿಂಗಳು ಕೆಲಸ ಮಾಡುವುದಿಲ್ಲ ಎಂದು ಘೋಷಿಸಿದರು. ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳಲ್ಲೂ ಭ್ರಷ್ಟಾಚಾರ ಮಿತಿ ಮೀರಿದೆ. ಬಿಜೆಪಿ ಸರ್ಕಾರವು ರೌಡಿಸಂ ಮಾಡುತ್ತಿದೆ. ನಮ್ಮ ಬಳಿ ಸಾಕಷ್ಟು ಸಾಕ್ಷ್ಯಾಧಾರಗಳಿದ್ದರೂ ಸರ್ಕಾರ ತೊಂದರೆ ಕೊಡಬಹುದು ಎನ್ನುವ ಕಾರಣಕ್ಕೆ ಅವನ್ನು ಒದಗಿಸುತ್ತಿಲ್ಲ. ಪ್ರತಿ ಟೆಂಡರ್‌ಗೂ ಕನಿಷ್ಠ ಶೇ 5ರ ಕಮಿಷನ್ ಕೊಡಬೇಕಿದೆ. ಮುಖ್ಯಮಂತ್ರಿ ಕಚೇರಿಯಲ್ಲಿಯೇ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಆರೋಗ್ಯ, ನೀರಾವರಿ ಇಲಾಖೆಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಗುತ್ತಿಗೆದಾರರನ್ನು ಕಾಡುತ್ತಿರುವ ಭ್ರಷ್ಟಾಚಾರ ಸಮಸ್ಯೆಗಳನ್ನು ಪರಿಹರಿಸದಿದ್ದರೆ 15 ದಿನಗಳಲ್ಲಿ ದಾಖಲೆ ಬಿಡುಗಡೆ ಮಾಡಲಾಗುವುದು ಎಂದು ಎಚ್ಚರಿಸಿದರು.

ನಾವು ಸರ್ಕಾರವನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿಲ್ಲ. ನಮ್ಮ ಮಾತು ಸಂಪೂರ್ಣ ಸತ್ಯ. ಆರೋಗ್ಯ ಇಲಾಖೆಯ ಸಚಿವ ಡಾ.ಕೆ.ಸುಧಾಕರ್‌ ಅತ್ಯಂತ ಭ್ರಷ್ಟ ಮಂತ್ರಿ. ಅವರು ಪ್ರತಿ ಕಾಮಗಾರಿಗಳಲ್ಲಿಯೂ ಶೇ 5ರ ಕಮಿಷನ್ ಪಡೆಯುತ್ತಿದ್ದಾರೆ ಎಂದರು.

ಗುತ್ತಿಗೆಯನ್ನು ಇಂಥವರಿಗೇ ನೀಡಬೇಕೆಂದು ಸಚಿವರು ಮೊದಲೇ ನಿರ್ಧರಿಸುತ್ತಾರೆ. ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ₹ 10 ಸಾವಿರ ಕೋಟಿ ವೆಚ್ಚದ ಕಾಮಗಾರಿ ನಡೆದಿದೆ. ಅಷ್ಟು ದೊಡ್ಡಮೊತ್ತದ ಹಣ ವೆಚ್ಚ ಮಾಡಿದರೂ ಕಾಮಗಾರಿ ಕಳಪೆಯಾಗಿದೆ ಎಂದು ಉದಾಹರಣೆ ನೀಡಿದರು.

ಕರ್ನಾಟಕದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ, ಕಡಿವಾಣ ಹಾಕಿ ಎಂದು ಮುಖ್ಯಮಂತ್ರಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ಮೇ 25ರಿಂದ ಒಂದು ತಿಂಗಳ‌ ಕಾಲ ಕಾಮಗಾರಿ ಸ್ಥಗಿತಗೊಳಿಸುತ್ತೇವೆ. ಮುಖ್ಯಮಂತ್ರಿಗಳು ಮೌನಿಯಾಗಿದ್ದಾರೆ. ಆರೋಗ್ಯ ಇಲಾಖೆ, ನೀರಾವರಿ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಆರೋಗ್ಯ ಇಲಾಖೆಯಲ್ಲಿ ಟೆಂಡರ್ ಪಡೆಯಲು 5 ಪರ್ಸೆಂಟ್ ಕೊಡಬೇಕಾಗುತ್ತದೆ. ಆರೋಗ್ಯ ಇಲಾಖೆ ಸಚಿವರೇ ಪರ್ಸೆಂಟೇಜ್ ಪಡೆಯುತ್ತಾರೆ. ಇಂದು ದಾಖಲೆಗಳನ್ನು ಬಿಡುಗಡೆ ಮಾಡುವ ಉದ್ದೇಶವಿತ್ತು. ಆದರೆ ಜೀವ ಬೆದರಿಕೆ ಬರುವ ಸಾಧ್ಯತೆಯಿದ್ದ ಕಾರಣ ದಾಖಲೆ ಬಿಡುಗಡೆ ಮಾಡಿಲ್ಲ ಎಂದರು.

ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ, ಬಿಬಿಎಂಪಿ ಮತ್ತು ನೀರಾವರಿ ಇಲಾಖೆಗಳಲ್ಲಿ ಸಚಿವರೇ ಏಜೆಂಟ್​ಗಳನ್ನು ಗುರುತಿಸಿದ್ದಾರೆ. ಮುಖ್ಯಮಂತ್ರಿ ಕಚೇರಿಯೂ ಇದಕ್ಕೆ ಹೊರತಾಗಿಲ್ಲ. ಪರ್ಸೇಂಟೇಜ್ ನೀಡಿರುವ ಬಗ್ಗೆ ಆಡಿಯೊ ಸೇರಿದಂತೆ ಹಲವು ದಾಖಲೆಗಳಿವೆ ಎಂದು ವಿವರಿಸಿದರು. ಆರೋಗ್ಯ ಸಚಿವ ಸುಧಾಕರ್ ಅವರ ಕುಟುಂಬದ ಸದಸ್ಯರೇ ಶೇ 60ರಷ್ಟು ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದಾರೆ. ಸಚಿವರ ಪತ್ನಿಯೇ ಕಾಮಗಾರಿಗಳಿಗೆ ಚೆಕ್ ನೀಡುತ್ತಾರೆ. ಚಿತ್ರದುರ್ಗ ಜಿಲ್ಲೆಯ ಶಾಸಕರೊಬ್ಬರ ಮಗ ಡಾಕ್ಟರ್ ಹುದ್ದೆ ಬಿಟ್ಟು ಗುತ್ತಿಗೆದಾರರಾಗಿದ್ದಾರೆ ಎಂದು ದೂರಿದರು. ನಮ್ಮ ಆರೋಪಗಳ ಬಗ್ಗೆ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶರಿಂದ ತನಿಖೆ ಮಾಡಿಸಬೇಕು. ಸೂಕ್ತ ದಾಖಲೆ ಒದಗಿಸುತ್ತೇವೆ. ನಾವು ದಾಖಲೆಗಳನ್ನು ಬಿಡುಗಡೆ ಮಾಡಿದಾಗ ಸುಧಾಕರ್ ಸಚಿವ ಸ್ಥಾನ ಕಳೆದುಕೊಳ್ಳುತ್ತಾರೆ ಎಂದರು.

ಸಂಘದ ಉಪಾಧ್ಯಕ್ಷ ಮಂಜುನಾಥ್ ಮಾತನಾಡಿ, ಸಚಿವರು ಮತ್ತು ಶಾಸಕರು ನಮ್ಮನ್ನು ಬೆದರಿಸುವುದನ್ನು ಬಿಡಬೇಕು. ರಾಜ್ಯದಲ್ಲಿ ಕಾಮಗಾರಿಗಳ ಗುಣಮಟ್ಟ ಕಳಪೆಯಾಗುತ್ತಿದೆ. ಇದಕ್ಕೆ ಪರ್ಸೆಂಟೇಜ್ ಹಾವಳಿಯೇ ಕಾರಣ ಎಂದರು.

ಇದನ್ನೂ ಓದಿ: ಸಂತೋಷ್ ಮನೆಯಲ್ಲಿ ಆಕ್ರಂದನ: ಮಗ ಆತ್ಮಹತ್ಯೆ ಮಾಡಿಕೊಳ್ಳುವವನಲ್ಲ ಎಂದ ತಾಯಿ, ಇದು ಕೊಲೆ ಎಂದ ಪತ್ನಿ

ಇದನ್ನೂ ಓದಿ: ಕಮಿಷನ್ ಆರೋಪ ಮಾಡಿದ್ದ ಸಂತೋಷ್ ಸಾವು ಪ್ರಕರಣ: ಈಶ್ವರಪ್ಪ ಆರೋಪಿ ನಂ 1, ಎಫ್​ಐಆರ್ ದಾಖಲು

Published On - 12:59 pm, Wed, 13 April 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?