AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Santro Ravi Case: ಸ್ಯಾಂಟ್ರೋ ರವಿ ಪ್ರಕರಣ; ಅಖಾಡಕ್ಕಿಳಿದ ಸಿಐಡಿ, ಮೈಸೂರಿನಲ್ಲಿ ಮಾಹಿತಿ ಸಂಗ್ರಹ

ಸಿಐಡಿ ಡಿವೈಎಸ್​ಪಿ ನರಸಿಂಹಮೂರ್ತಿ ನೇತೃತ್ವದ ತಂಡ ಸೋಮವಾರ ಸಂಜೆ ನಗರಕ್ಕೆ ಆಗಮಿಸಿ ಮೈಸೂರಿನ ವಿಜಯನಗರ ಉಪವಿಭಾಗದ ಎಸಿಪಿ ಶಿವಶಂಕರ್​​ರಿಂದ ಮಾಹಿತಿ ಸಂಗ್ರಹಿಸಿದೆ.

Santro Ravi Case: ಸ್ಯಾಂಟ್ರೋ ರವಿ ಪ್ರಕರಣ; ಅಖಾಡಕ್ಕಿಳಿದ ಸಿಐಡಿ, ಮೈಸೂರಿನಲ್ಲಿ ಮಾಹಿತಿ ಸಂಗ್ರಹ
ಸ್ಯಾಂಟ್ರೋ ರವಿ
TV9 Web
| Edited By: |

Updated on:Jan 16, 2023 | 5:13 PM

Share

ಮೈಸೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪ ಎದುರಿಸುತ್ತಿರುವ ಕೆ.ಎಸ್.ಮಂಜುನಾಥ ಅಲಿಯಾಸ್ ಸ್ಯಾಂಟ್ರೋ ರವಿ (Santro Ravi) ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯ ಹೊಣೆಯನ್ನು ಸಿಐಡಿ (CID) ಕೈಗೆತ್ತಿಕೊಂಡಿದೆ. ತನಿಖೆಗಾಗಿ ಸಿಐಡಿ ತಂಡ ಮೈಸೂರಿಗೆ ಬಂದಿದ್ದು, ಪ್ರಾಥಮಿಕ ಮಾಹಿತಿ ಕಲೆ ಹಾಕಿದೆ. ಸಿಐಡಿ ಡಿವೈಎಸ್​ಪಿ ನರಸಿಂಹಮೂರ್ತಿ ನೇತೃತ್ವದ ತಂಡ ಸೋಮವಾರ ಸಂಜೆ ನಗರಕ್ಕೆ ಆಗಮಿಸಿ ಮೈಸೂರಿನ ವಿಜಯನಗರ ಉಪವಿಭಾಗದ ಎಸಿಪಿ ಶಿವಶಂಕರ್​​ರಿಂದ ಮಾಹಿತಿ ಸಂಗ್ರಹಿಸಿದೆ. ಸಿಐಡಿ ತಂಡದಲ್ಲಿ ನಾಲ್ಕಕ್ಕೂ ಹೆಚ್ಚು ಅಧಿಕಾರಿಗಳಿದ್ದು, ಎಸಿಪಿ ಶಿವಶಂಕರ್​​ರಿಂದ ಮಾಹಿತಿ ಪಡೆದರು. ಸ್ಯಾಂಟ್ರೋ ರವಿ ಪ್ರಕರಣವನ್ನು ಸಿಐಡಿಗೆ ವಹಿಸುವ ಬಗ್ಗೆ ಸೋಮವಾರ ಬೆಳಿಗ್ಗೆ ಸರ್ಕಾರ ನಿರ್ಧಾರ ಕೈಗೊಂಡಿತ್ತು. ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುತ್ತಿರುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಟಿವಿ9 ಗೆ ಮಾಹಿತಿ ನೀಡಿದ್ದರು.

ಈ ಮಧ್ಯೆ, ಸಂತ್ರಸ್ತೆ ಹಾಗೂ ಆಕೆಯ ತಾಯಿ 10 ಲಕ್ಷ ರೂಪಾಯಿ ಸಾಲ ಪಡೆದಿದ್ದರು. ಈ ಸಾಲದ ಹಣವನ್ನು ತೀರಿಸಲಾಗದೆ ಸುಳ್ಳು ದೂರು ದಾಖಲಿಸಿದ್ದಾರೆ ಎಂದು ಸ್ಯಾಂಟ್ರೋ ರವಿ ಪರ ವಕೀಲ ಹರೀಶ್ ಪ್ರಭು ಮೈಸೂರಿನಲ್ಲಿ ಆರೋಪಿಸಿದ್ದಾರೆ. ಹಣಕಾಸಿನ ವ್ಯಾಜ್ಯವನ್ನು ವಿಜೃಂಭಿಸಲಾಗಿದ್ದಲ್ಲದೆ, ಅದನ್ನು ಬೇರೆ ರೀತಿಯಾಗಿ ಬಿಂಬಿಸಲಾಗಿದೆ. ವಾಟ್ಸ್​ಆ್ಯಪ್ ಸ್ಟೇಟಸ್ ಹಾಕಿಕೊಂಡಿರುವುದನ್ನೇ ದೊಡ್ಡ ರೀತಿಯಲ್ಲಿ ತಪ್ಪಾಗಿ ಬಿಂಬಿಸಲಾಗುತ್ತಿದೆ. ಮಂಜುನಾಥ್ ಅವರನ್ನು ಮಹಿಳೆ ಮದುವೆ ಆಗಿದ್ದರೆ ಇದುವರೆಗೂ ಯಾಕೆ ಸಾಕ್ಷ್ಯಾಧಾರ ಸಲ್ಲಿಸಿಲ್ಲ ಎಂದು ವಕೀಲರು ಪ್ರಶ್ನಿಸಿದ್ದಾರೆ.

ಏನಿದು ಸ್ಯಾಂಟ್ರೋ ರವಿ ಪ್ರಕರಣ?

ಪ್ರಸ್ತುತ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕೆ.ಎಸ್.ಮಂಜುನಾಥ ಅಲಿಯಾಸ್ ಸ್ಯಾಂಟ್ರೋ ರವಿ ವಿರುದ್ಧ ಅನೇಕ ಆರೋಪಗಳಿವೆ. ಇವುಗಳಲ್ಲಿ ಮಾಂಸದಂಧೆ, ದಶಕಗಳ ಕಾಲ ವೇಶ್ಯಾವಾಟಿಕೆ ನಡೆಸುತ್ತಿದ್ದುದು ಮತ್ತು ಇದ್ದಕ್ಕಿದ್ದಂತೆ ಪೊಲೀಸ್ ಇಲಾಖೆಯ ವರ್ಗಾವಣೆ ದಂಧೆಯಲ್ಲಿ ಶಾಮೀಲಾಗಿರುವುದೂ ಸೇರಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:04 pm, Mon, 16 January 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!