AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Santro Ravi Case: ಸ್ಯಾಂಟ್ರೋ ರವಿ ಪ್ರಕರಣ; ಅಖಾಡಕ್ಕಿಳಿದ ಸಿಐಡಿ, ಮೈಸೂರಿನಲ್ಲಿ ಮಾಹಿತಿ ಸಂಗ್ರಹ

ಸಿಐಡಿ ಡಿವೈಎಸ್​ಪಿ ನರಸಿಂಹಮೂರ್ತಿ ನೇತೃತ್ವದ ತಂಡ ಸೋಮವಾರ ಸಂಜೆ ನಗರಕ್ಕೆ ಆಗಮಿಸಿ ಮೈಸೂರಿನ ವಿಜಯನಗರ ಉಪವಿಭಾಗದ ಎಸಿಪಿ ಶಿವಶಂಕರ್​​ರಿಂದ ಮಾಹಿತಿ ಸಂಗ್ರಹಿಸಿದೆ.

Santro Ravi Case: ಸ್ಯಾಂಟ್ರೋ ರವಿ ಪ್ರಕರಣ; ಅಖಾಡಕ್ಕಿಳಿದ ಸಿಐಡಿ, ಮೈಸೂರಿನಲ್ಲಿ ಮಾಹಿತಿ ಸಂಗ್ರಹ
ಸ್ಯಾಂಟ್ರೋ ರವಿ
TV9 Web
| Edited By: |

Updated on:Jan 16, 2023 | 5:13 PM

Share

ಮೈಸೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪ ಎದುರಿಸುತ್ತಿರುವ ಕೆ.ಎಸ್.ಮಂಜುನಾಥ ಅಲಿಯಾಸ್ ಸ್ಯಾಂಟ್ರೋ ರವಿ (Santro Ravi) ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯ ಹೊಣೆಯನ್ನು ಸಿಐಡಿ (CID) ಕೈಗೆತ್ತಿಕೊಂಡಿದೆ. ತನಿಖೆಗಾಗಿ ಸಿಐಡಿ ತಂಡ ಮೈಸೂರಿಗೆ ಬಂದಿದ್ದು, ಪ್ರಾಥಮಿಕ ಮಾಹಿತಿ ಕಲೆ ಹಾಕಿದೆ. ಸಿಐಡಿ ಡಿವೈಎಸ್​ಪಿ ನರಸಿಂಹಮೂರ್ತಿ ನೇತೃತ್ವದ ತಂಡ ಸೋಮವಾರ ಸಂಜೆ ನಗರಕ್ಕೆ ಆಗಮಿಸಿ ಮೈಸೂರಿನ ವಿಜಯನಗರ ಉಪವಿಭಾಗದ ಎಸಿಪಿ ಶಿವಶಂಕರ್​​ರಿಂದ ಮಾಹಿತಿ ಸಂಗ್ರಹಿಸಿದೆ. ಸಿಐಡಿ ತಂಡದಲ್ಲಿ ನಾಲ್ಕಕ್ಕೂ ಹೆಚ್ಚು ಅಧಿಕಾರಿಗಳಿದ್ದು, ಎಸಿಪಿ ಶಿವಶಂಕರ್​​ರಿಂದ ಮಾಹಿತಿ ಪಡೆದರು. ಸ್ಯಾಂಟ್ರೋ ರವಿ ಪ್ರಕರಣವನ್ನು ಸಿಐಡಿಗೆ ವಹಿಸುವ ಬಗ್ಗೆ ಸೋಮವಾರ ಬೆಳಿಗ್ಗೆ ಸರ್ಕಾರ ನಿರ್ಧಾರ ಕೈಗೊಂಡಿತ್ತು. ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುತ್ತಿರುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಟಿವಿ9 ಗೆ ಮಾಹಿತಿ ನೀಡಿದ್ದರು.

ಈ ಮಧ್ಯೆ, ಸಂತ್ರಸ್ತೆ ಹಾಗೂ ಆಕೆಯ ತಾಯಿ 10 ಲಕ್ಷ ರೂಪಾಯಿ ಸಾಲ ಪಡೆದಿದ್ದರು. ಈ ಸಾಲದ ಹಣವನ್ನು ತೀರಿಸಲಾಗದೆ ಸುಳ್ಳು ದೂರು ದಾಖಲಿಸಿದ್ದಾರೆ ಎಂದು ಸ್ಯಾಂಟ್ರೋ ರವಿ ಪರ ವಕೀಲ ಹರೀಶ್ ಪ್ರಭು ಮೈಸೂರಿನಲ್ಲಿ ಆರೋಪಿಸಿದ್ದಾರೆ. ಹಣಕಾಸಿನ ವ್ಯಾಜ್ಯವನ್ನು ವಿಜೃಂಭಿಸಲಾಗಿದ್ದಲ್ಲದೆ, ಅದನ್ನು ಬೇರೆ ರೀತಿಯಾಗಿ ಬಿಂಬಿಸಲಾಗಿದೆ. ವಾಟ್ಸ್​ಆ್ಯಪ್ ಸ್ಟೇಟಸ್ ಹಾಕಿಕೊಂಡಿರುವುದನ್ನೇ ದೊಡ್ಡ ರೀತಿಯಲ್ಲಿ ತಪ್ಪಾಗಿ ಬಿಂಬಿಸಲಾಗುತ್ತಿದೆ. ಮಂಜುನಾಥ್ ಅವರನ್ನು ಮಹಿಳೆ ಮದುವೆ ಆಗಿದ್ದರೆ ಇದುವರೆಗೂ ಯಾಕೆ ಸಾಕ್ಷ್ಯಾಧಾರ ಸಲ್ಲಿಸಿಲ್ಲ ಎಂದು ವಕೀಲರು ಪ್ರಶ್ನಿಸಿದ್ದಾರೆ.

ಏನಿದು ಸ್ಯಾಂಟ್ರೋ ರವಿ ಪ್ರಕರಣ?

ಪ್ರಸ್ತುತ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕೆ.ಎಸ್.ಮಂಜುನಾಥ ಅಲಿಯಾಸ್ ಸ್ಯಾಂಟ್ರೋ ರವಿ ವಿರುದ್ಧ ಅನೇಕ ಆರೋಪಗಳಿವೆ. ಇವುಗಳಲ್ಲಿ ಮಾಂಸದಂಧೆ, ದಶಕಗಳ ಕಾಲ ವೇಶ್ಯಾವಾಟಿಕೆ ನಡೆಸುತ್ತಿದ್ದುದು ಮತ್ತು ಇದ್ದಕ್ಕಿದ್ದಂತೆ ಪೊಲೀಸ್ ಇಲಾಖೆಯ ವರ್ಗಾವಣೆ ದಂಧೆಯಲ್ಲಿ ಶಾಮೀಲಾಗಿರುವುದೂ ಸೇರಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:04 pm, Mon, 16 January 23

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ