AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಪ್ನ ಬುಕ್ ಹೌಸ್ ಸಂಸ್ಥಾಪಕ ಸುರೇಶ್ ಶಾ ನಿಧನ

Sapna Book House Suresh Shah: 1966ರಲ್ಲಿ ಸಪ್ನ ಬುಕ್ ಹೌಸ್ ಮಳಿಗೆಯನ್ನು ಪುಟ್ಟದಾಗಿ ಆರಂಭಿಸಿದ್ದ ಸುರೇಶ್ ಸಿ. ಷಾ ಅವರು ನಂತರ ದಿನಗಳಲ್ಲಿ ಸಪ್ನ ಬುಕ್ ಹೌಸ್ ಸಂಸ್ಥೆಯನ್ನು ದೇಶದ ಅತ್ಯಂತ ಪ್ರಮುಖ ಮತ್ತು ಬೃಹತ್ ಪುಸ್ತಕ ಮಳಿಗೆಯನ್ನಾಗಿ ಬೆಳೆಸಿದರು. ಈಗ ಅದು ಭಾರತದ ಅತಿದೊಡ್ಡ ಪುಸ್ತಕ ಮಳಿಗೆ ಎಂದೇ ಹೆಸರಾಗಿದೆ.

ಸಪ್ನ ಬುಕ್ ಹೌಸ್ ಸಂಸ್ಥಾಪಕ ಸುರೇಶ್ ಶಾ ನಿಧನ
ಸುರೇಶ್ ಶಾ
Follow us
guruganesh bhat
|

Updated on:May 25, 2021 | 7:12 PM

ಬೆಂಗಳೂರು: ಭಾರತದ ಅತಿದೊಡ್ಡ ಪುಸ್ತಕ ಮಳಿಗೆ ಎಂದು ಖ್ಯಾತಿ ಪಡೆದ ಸಪ್ನ ಬುಕ್ ಹೌಸ್ ಸಂಸ್ಥಾಪಕ ಸುರೇಶ್ ಸಿ ಶಾ ಅವರು ಇಂದು ಮಧ್ಯಾಹ್ನ 2.15ಕ್ಕೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರರಿಗೆ 94 ವರ್ಷ ವಯಸ್ಸಾಗಿತ್ತು. ಸುರೇಶ್ ಸಿ ಶಾ ಅವರು ಬೆಂಗಳೂರಿನ ಶೇಷಾದ್ರಿಪುರದ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ತಮ್ಮ ಕೊನೆಯುಸಿರೆಳೆದರು.

1966ರಲ್ಲಿ ಸಪ್ನ ಬುಕ್ ಹೌಸ್ ಮಳಿಗೆಯನ್ನು ಪುಟ್ಟದಾಗಿ ಆರಂಭಿಸಿದ್ದ ಸುರೇಶ್ ಸಿ. ಷಾ ಅವರು ನಂತರ ದಿನಗಳಲ್ಲಿ ಸಪ್ನ ಬುಕ್ ಹೌಸ್ ಸಂಸ್ಥೆಯನ್ನು ದೇಶದ ಅತ್ಯಂತ ಪ್ರಮುಖ ಮತ್ತು ಬೃಹತ್ ಪುಸ್ತಕ ಮಳಿಗೆಯನ್ನಾಗಿ ಬೆಳೆಸಿದರು. ಈಗ ಅದು ಭಾರತದ ಅತಿದೊಡ್ಡ ಪುಸ್ತಕ ಮಳಿಗೆ ಎಂದೇ ಹೆಸರಾಗಿದೆ. ಒಟ್ಟು 19 ಶಾಖೆಗಳನ್ನು ಹೊಂದಿರುವ ಸಪ್ನ ಬುಕ್ ಹೌಸ್ ಕನ್ನಡ ಪುಸ್ತಕಗಳನ್ನು ಓದುಗರಿಗೆ ಹೆಚ್ಚಿನ ಪ್ರಮಾಣದಲ್ಲಿ ತಲುಪಿಸುವ ಕೆಲಸವನ್ನು ಸತತವಾಗಿ ಮಾಡಿಕೊಂಡು ಬರುತ್ತಿದೆ.

ಸಪ್ನ ಬುಕ್ ಹೌಸ್​ನ ಮುಖ್ಯಸ್ಥರಾಗಿದ್ದ ಸುರೇಶ್ ಸಿ ಶಾ ಅವರು ಮೂವರು ಪುತ್ರರಾದ ನಿತಿನ್ ಶಾ, ದೀಪಕ್ ಶಾ ಮತ್ತು ಪರೇಶ್ ಶಾ ಅವರನ್ನು ಅಗಲಿದ್ದಾರೆ. ಬುಧವಾರ ಬೆಳಗ್ಗೆ ಹರಿಶ್ಚಂದ್ರ ಘಾಟ್ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಸಪ್ನದ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ಲೋಕ ಕಲ್ಯಾಣಕ್ಕೆ ಶಾಸಕರು ಮನೆಯಲ್ಲಿ ಹೋಮ ಮಾಡಲಿ, ಆದರೆ ಜನರ ಬಳಿಯೂ ಮಾಡಿಸೋದು ಸರಿಯಲ್ಲ: ಕೊವಿಡ್ ಟಾಸ್ಕ್​ಫೋರ್ಸ್ ಅಧ್ಯಕ್ಷ ಡಾ ಅಶ್ವತ್ಥ ನಾರಾಯಣ

ಕೊವಿಡ್​ ನಿಯಮ ಉಲ್ಲಂಘನೆ: ಅಧಿಕಾರಿಗಳನ್ನು ನೋಡುತ್ತಲೇ ವಧುವನ್ನೇ ಬಿಟ್ಟು ವರ ಪರಾರಿ! (Sapna Book House founder Suresh Shah died)

Published On - 6:41 pm, Tue, 25 May 21

ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ