AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ ನಿಗದಿ ಮಾಡಿದ ದರಕ್ಕಿಂತ ಹೆಚ್ಚು ಹಣ ವಸೂಲಿ; ಬಿಲ್ ಕಟ್ಟಿಲ್ಲವೆಂದು ರೋಗಿಯನ್ನು ಡಿಸ್ಚಾರ್ಜ್ ಮಾಡದ ಸಪ್ತಗಿರಿ ಆಸ್ಪತ್ರೆ

ಸೋಂಕಿತರೊಬ್ಬರು ಸಪ್ತಗಿರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. 18 ದಿನಕ್ಕೆ 12 ಲಕ್ಷದ 13 ಸಾವಿರ ಬಿಲ್ ಆಗಿದೆ. ಬಿಲ್ ಕಟ್ಟಿಲ್ಲವೆಂದು ರೋಗಿಯನ್ನು ಸಪ್ತಗಿರಿ ಆಸ್ಪತ್ರೆ ಡಿಸ್ಚಾರ್ಜ್ ಮಾಡಿಲ್ಲ. ಬಿಬಿಎಂಪಿಯಿಂದ ಬೆಡ್ ಸಿಗದ ಕಾರಣ ನೇರವಾಗಿ ಹೋಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಸರ್ಕಾರ ನಿಗದಿ ಮಾಡಿದ ದರಕ್ಕಿಂತ ಹೆಚ್ಚು ಹಣ ವಸೂಲಿ; ಬಿಲ್ ಕಟ್ಟಿಲ್ಲವೆಂದು ರೋಗಿಯನ್ನು ಡಿಸ್ಚಾರ್ಜ್ ಮಾಡದ ಸಪ್ತಗಿರಿ ಆಸ್ಪತ್ರೆ
ಪ್ರಾತಿನಿಧಿಕ ಚಿತ್ರ
sandhya thejappa
|

Updated on:May 15, 2021 | 11:02 AM

Share

ಬೆಂಗಳೂರು: ಚಿಕಿತ್ಸೆ ಫಲಕಾರಿಯಾಗದೆ ಹಲವರು ಕೊರೊನಾ ಸೋಂಕಿತರು ಸಾವನ್ನಪ್ಪಿದ್ದರೆ, ಆಸ್ಪತ್ರೆಯಲ್ಲಿ ಸರಿಯಾದ ಸಮಯಕ್ಕೆ ಬೆಡ್ ಸಿಗದೆ ಹಲವಾರು ಸೋಂಕಿತರು ಕೊನೆಯುಸಿರೆಳೆದಿದ್ದಾರೆ. ಕೊರೊನಾ ಆರ್ಭಟ ನಡುವೆ ರಾಜ್ಯದ ಹಲವು ಖಾಸಗಿ ಆಸ್ಪತ್ರೆಗಳು ಅಮಾನವೀಯತೆ ಮೆರೆಯುತ್ತಿವೆ. ಅಷ್ಟು ದುಡ್ಡು ಕಟ್ಟಿ.. ಇಷ್ಟು ದುಡ್ಡು ಕಟ್ಟಿ ಅಂತ ಒತ್ತಡ ಹೇರುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಈ ಸಾಲಿಗೆ ಸಪ್ತಗಿರಿ ಆಸ್ಪತ್ರೆ ಕೂಡಾ ಸೇರಿದೆ ಎಂಬ ಮಾಹಿತಿ ತಿಳಿದುಬಂದಿದೆ.

ಸೋಂಕಿತರೊಬ್ಬರು ಸಪ್ತಗಿರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. 18 ದಿನಕ್ಕೆ 12 ಲಕ್ಷದ 13 ಸಾವಿರ ಬಿಲ್ ಆಗಿದೆ. ಬಿಲ್ ಕಟ್ಟಿಲ್ಲವೆಂದು ರೋಗಿಯನ್ನು ಸಪ್ತಗಿರಿ ಆಸ್ಪತ್ರೆ ಡಿಸ್ಚಾರ್ಜ್ ಮಾಡಿಲ್ಲ. ಬಿಬಿಎಂಪಿಯಿಂದ ಬೆಡ್ ಸಿಗದ ಕಾರಣ ನೇರವಾಗಿ ಹೋಗಿ ಆಸ್ಪತ್ರೆಗೆ ದಾಖಲಾಗಿದ್ದರು. ಸರ್ಕಾರ ದರ ನಿಗದಿ ಮಾಡಿದೆ ಎಂದು ಧೈರ್ಯದಿಂದ ಆಸ್ಪತ್ರೆಗೆ ದಾಖಲು ಆಗುತ್ತಾರೆ. ಆದರೆ ಇದೀಗ ಸರ್ಕಾರದ ದರಕ್ಕಿಂತ ಹತ್ತು ಪಟ್ಟು ಹೆಚ್ಚು ಹಣವನ್ನು ಸಪ್ತಗಿರಿ ಆಸ್ಪತ್ರೆ ವಸೂಲಿ ಮಾಡುತ್ತಿದ್ದು, ಬಿಲ್ ಕಟ್ಟಿಲ್ಲವೆಂದು ಮೂರು ದಿನದಿಂದ ರೋಗಿಯನ್ನು ಡಿಸ್ಚಾರ್ಜ್ ಮಾಡುತ್ತಿಲ್ಲ.

ಸುಲಿಗೆಗೆ ಇಳಿದ ಸಪ್ತಗಿರಿ ಆಸ್ಪತ್ರೆ ಸರ್ಕಾರದಿಂದ ಸೋಂಕಿತರಿಗೆ ಬೆಡ್ ಸಿಗದ ಕಾರಣ ಖಾಸಗಿ ಆಸ್ಪತ್ರೆಗಳಲ್ಲಿ ಸುಲಿಗೆ ಶುರುವಾಗಿದೆ. ಸಪ್ತಗಿರಿ ಆಸ್ಪತ್ರೆ ಸರ್ಕಾರ ದರ ನಿಗದಿ ಮಾಡಿದ್ದರೂ ರೋಗಿಗಳಿಂದ ಹೆಚ್ಚು ಹಣ ವಸೂಲಿಗೆ ಮುಂದಾಗಿದೆ. 5 ದಿನದಿಂದ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗೆ ಸಪ್ತಗಿರಿ ಆಸ್ಪತ್ರೆ 5 ಲಕ್ಷದ 81 ಸಾವಿರ ರೂ. ಬಿಲ್ ಮಾಡಿದೆ. ಪೇಶೆಂಟ್ ಜನರಲ್ ಬೆಡ್​ಲ್ಲಿ ಇದ್ದರು, ಹೆಚ್​ಡಿಯು ಬೆಡ್ ಎಂದು ನಮೂದು ಮಾಡುತ್ತಿದೆ. ಗೂಗಲ್ ಪೇ, ಚೆಕ್ ಮುಖಾಂತರ ಬಿಲ್ ಕಟ್ಟದಂತೆ ತಾಕೀತು ಮಾಡಿ ನಗದು ಹಣ ಕಟ್ಟುವಂತೆ ಪಟ್ಟು ಬಿದ್ದಿದೆ.

ಬಿಲ್

ಸರ್ಕಾರ ನಿಗದಿ ಮಾಡಿರುವ ದರ ಜನರಲ್ ವಾರ್ಡ್​ಗೆ 5,200 ರೂ. ಆಕ್ಸಿಜನ್ ವ್ಯವಸ್ಥೆಯುಳ್ಳ ವಾರ್ಡ್​ಗೆ ನಿತ್ಯ 7 ಸಾವಿರ ರೂ. ಐಸಿಯು ವಾರ್ಡ್​ಗೆ 8,500 ರೂ. ಐಸಿಯು ಜೊತೆಗೆ ವೆಂಟಿಲೇಟರ್ ಉಳ್ಳ ವಾರ್ಡ್​ಗೆ 10 ಸಾವಿರ ನಿಗದಿ ಮಾಡಲಾಗಿದೆ. ಉಳಿದಂತೆ ನಗದು ಹಾಗೂ ವಿಮಾ ಯೋಜನೆ ಹೊಂದಿರುವವರಿಗೆ ಜನರಲ್ ವಾರ್ಡ್​ಗೆ ದಿನಕ್ಕೆ 10 ಸಾವಿರ ರೂ. ಆಕ್ಸಿಜನ್ ವ್ಯವಸ್ಥೆಯುಳ್ಳ ವಾರ್ಡ್​ಗೆ 12 ಸಾವಿರ ರೂ. ಐಸಿಯು ವಾರ್ಡ್15,000 ರೂ. ಐಸಿಯು ಮತ್ತು ವೆಂಟಿಲೇಟರ್ ಹೊಂದಿರುವ ವಾರ್ಡ್​ಗೆ 25,000 ರೂ. ನಿಗದಿ ಮಾಡಲಾಗಿದೆ.

ಇದನ್ನೂ ಓದಿ

ಬೆಡ್​ಗಾಗಿ 5 ಆಸ್ಪತ್ರೆಗಳಿಗೆ ಅಲೆದು ಪ್ರಾಣ ಬಿಟ್ಟ ಮಹಿಳೆ; ಮೇಡಿ ಅಗ್ರಹಾರ ಚಿತಾಗಾರದ ಮುಂದೆ ಕಣ್ಣೀರಿಟ್ಟ ಪತಿ

ಕರ್ನಾಟಕದ ಹಳ್ಳಿಗರ ಅಭಿಮಾನಕ್ಕೆ ಸನ್ನಿ ಲಿಯೋನ್​ ಫಿದಾ; ಅನಾಥ ಮಕ್ಕಳ ತಾಯಿ ಎಂದ ಫ್ಯಾನ್ಸ್​

(Saptagiri Hospital is making more money than the government has set)

Published On - 9:22 am, Sat, 15 May 21

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?