AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​ ಪೊಲೀಸ್​ ಅಕಾಡೆಮಿ ಕೇಂದ್ರ ಸಭಾಂಗಣಕ್ಕೆ ಕನ್ನಡಿಗ ಐಪಿಎಸ್​ ಅಧಿಕಾರಿ ದಿವಂಗತ ವಡ್ಡರ್ಸೆ ಡಾ.ಕೆ.ಮಧುಕರ್​ ಶೆಟ್ಟಿ ಹೆಸರು

ಡಾ.ಕೆ.ಮಧುಕರ್​ ಶೆಟ್ಟಿ ಅವರ ಕಾರ್ಯಕ್ಷಮತೆಗೆ, ದಕ್ಷತೆಗೆ, ಕೆಲಸದೆಡೆಗಿನ ಬದ್ಧತೆಗೆ ಹಾಗೂ ನಮ್ಮೆಲರಿಗೂ ಮಾದರಿ ವ್ಯಕ್ತಿತ್ವವಾಗಿ ಇದ್ದಿದ್ದಕ್ಕೆ ಗೌರವ ಸೂಚಿಸುವ ಸಲುವಾಗಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಕೇಂದ್ರದ ಉಪ ನಿರ್ದೇಶಕ ಕೆಪಿಎ ಇಳ್ಯಾಸ್ ತಿಳಿಸಿದ್ದಾರೆ.

ಹೈದರಾಬಾದ್​ ಪೊಲೀಸ್​ ಅಕಾಡೆಮಿ ಕೇಂದ್ರ ಸಭಾಂಗಣಕ್ಕೆ ಕನ್ನಡಿಗ ಐಪಿಎಸ್​ ಅಧಿಕಾರಿ ದಿವಂಗತ ವಡ್ಡರ್ಸೆ ಡಾ.ಕೆ.ಮಧುಕರ್​ ಶೆಟ್ಟಿ ಹೆಸರು
ದಿವಂಗತ ಡಾ.ಕೆ.ಮಧುಕರ್​ ಶೆಟ್ಟಿ
Follow us
Skanda
|

Updated on: May 12, 2021 | 8:42 AM

ಹಿರಿಯ ಪತ್ರಕರ್ತ ದಿವಂಗತ ವಡ್ಡರ್ಸೆ ರಘುರಾಮ್ ಶೆಟ್ಟಿ ಅವರ ಪುತ್ರ, ಕರ್ನಾಟಕದ ಹೆಮ್ಮೆಯ ಐಪಿಎಸ್​ ಅಧಿಕಾರಿ ದಿವಂಗತ ಡಾ.ಕೆ.ಮಧುಕರ್ ಶೆಟ್ಟಿ ತಮ್ಮ ಪ್ರಾಮಾಣಿಕತೆಗೆ, ದಕ್ಷತೆಗೆ, ಕಾರ್ಯ ವೈಖರಿಗೆ, ನೇರ ನುಡಿಗೆ ಹೆಸರಾಗಿದ್ದವರು. ದುರದೃಷ್ಟವಶಾತ್ ಹೆಚ್​1ಎನ್​1 ಕಾಯಿಲೆಗೆ ತುತ್ತಾಗಿ 2018ರ ಡಿಸೆಂಬರ್​ 28ರಂದು ಇಹಲೋಕ ತ್ಯಜಿಸಿದರು. ಆದರೆ, ಅವರು ತಮ್ಮ ಕಾರ್ಯಾವಧಿಯಲ್ಲಿ ಮಾಡಿದ ಉತ್ತಮ ಕೆಲಸಗಳನ್ನು ಇಂದಿಗೂ ಸಮಾಜ ಸ್ಮರಿಸುತ್ತಿದ್ದು, ಹೈದರಾಬಾದ್​ನ ಸರ್ದಾರ್ ವಲ್ಲಭಭಾಯಿ ಪಟೇಲ್​ ರಾಷ್ಟ್ರೀಯ ಪೊಲೀಸ್​ ಅಕಾಡೆಮಿ ಕೇಂದ್ರದ ಮುಖ್ಯ ಉಪನ್ಯಾಸ ಸಭಾಂಗಣಕ್ಕೆ ಅವರ ಹೆಸರನ್ನು ಗೌರವಾರ್ಥವಾಗಿ ಇಡಲು ನಿರ್ಧರಿಸಲಾಗಿದೆ.

ಈ ಬಗ್ಗೆ ಸರ್ದಾರ್ ವಲ್ಲಭಭಾಯಿ ಪಟೇಲ್​ ರಾಷ್ಟ್ರೀಯ ಪೊಲೀಸ್​ ಅಕಾಡೆಮಿ ಕೇಂದ್ರ ಅಧಿಕೃತ ಪ್ರಕಟಣೆ ನೀಡಿದ್ದು, ಕೇಂದ್ರದ ಮುಖ್ಯ ಉಪನ್ಯಾಸ ಸಭಾಂಗಣಕ್ಕೆ ದಿವಂಗತ ಡಾ.ಕೆ.ಮಧುಕರ್​ ಶೆಟ್ಟಿ ಅವರ ಹೆಸರನ್ನಿಡಲು ನಿರ್ಧರಿಸಿದ್ದೇವೆ. ಅವರ ಕಾರ್ಯಕ್ಷಮತೆಗೆ, ದಕ್ಷತೆಗೆ, ಕೆಲಸದೆಡೆಗಿನ ಬದ್ಧತೆಗೆ ಹಾಗೂ ನಮ್ಮೆಲರಿಗೂ ಮಾದರಿ ವ್ಯಕ್ತಿತ್ವವಾಗಿ ಇದ್ದಿದ್ದಕ್ಕೆ ಗೌರವ ಸೂಚಿಸುವ ಸಲುವಾಗಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಕೇಂದ್ರದ ಉಪ ನಿರ್ದೇಶಕ ಕೆಪಿಎ ಇಳ್ಯಾಸ್ ತಿಳಿಸಿದ್ದಾರೆ.

IPS K MADHUKAR SHETTY

ಸರ್ದಾರ್ ವಲ್ಲಭಭಾಯಿ ಪಟೇಲ್​ ರಾಷ್ಟ್ರೀಯ ಪೊಲೀಸ್​ ಅಕಾಡೆಮಿ ಕೇಂದ್ರದ ಮುಖ್ಯ ಉಪನ್ಯಾಸ ಸಭಾಂಗಣಕ್ಕೆ ದಿವಂಗತ ಡಾ.ಕೆ.ಮಧುಕರ್​ ಶೆಟ್ಟಿ ಹೆಸರು

ಮೂಲತಃ ಕರ್ನಾಟಕದ ಉಡುಪಿ ಜಿಲ್ಲೆಯವರಾದ ಮಧುಕರ್​ ಶೆಟ್ಟಿ, 1999ರ ಬ್ಯಾಚ್​ನ ಐಪಿಎಸ್​ ಅಧಿಕಾರಿಯಾಗಿದ್ದರು. ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆ ಬರೆಯುವ ಮುನ್ನ ದೆಹಲಿ ಜವಹರಲಾಲ್​ ವಿಶ್ವವಿದ್ಯಾಲಯದಲ್ಲಿ (ಜೆಎನ್​ಯು) ಸಮಾಜ ಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. ಚಿಕ್ಕಮಗಳೂರು ಎಸ್​ಪಿಯಾಗಿ ಸೇವೆ ಸಲ್ಲಿಸುತ್ತಿದ್ದ ವೇಳೆ, ಡಿಸಿ ಹರ್ಷ ಗುಪ್ತಾ ಜತೆಗೂಡಿ ದಲಿತ ಸಮುದಾಯದ ಬೆನ್ನೆಲುಬಾಗಿ ನಿಂತಿದ್ದರು. ದಲಿತರ ಭೂಮಿಯನ್ನು ಅಕ್ರಮವಾಗಿ ವಶಪಡಿಸಿಕೊಂಡಿದ್ದ ವ್ಯಕ್ತಿಗಳಿಂದ ಜಮೀನು ಬಿಡಿಸಿ ದಲಿತರಿಗೆ ನೀಡಿದ್ದರು. ನಂತರ ಕೃತಜ್ಞತಾಪೂರ್ವಕವಾಗಿ ಆ ಹಳ್ಳಿಯ ಹೆಸರನ್ನು ಗುಪ್ತಶೆಟ್ಟಿ ಹಳ್ಳಿ ಎಂದೇ ನಾಮಕರಣ ಮಾಡಲಾಗಿತ್ತು.

ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್​ ಹೆಗಡೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಅಧಿಕಾರಿ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್​ ಹೆಗಡೆ ಕಾರ್ಯವೈಖರಿ ಬಗ್ಗೆ ಅಸಮಾಧಾನಗೊಂಡಿದ್ದ ಮಧುಕರ್​ ಶೆಟ್ಟಿ 2011ರಲ್ಲಿ ಉನ್ನತ ವಿದ್ಯಾಭ್ಯಾಸದ ರಜೆಯ ಮೇಲೆ ತೆರಳಿದ್ದರು. ನಂತರದ ಐದು ವರ್ಷಗಳ ಕಾಲ ಅಮೆರಿಕಾದಲ್ಲಿ ಅಧ್ಯಯನ ನಡೆಸಿದ್ದರು. ಆ ಸಮಯದಲ್ಲಿ ಸಂತೋಷ್​ ಹೆಗಡೆ ಅವರ ವಿರುದ್ಧ ನೇರವಾಗಿ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದರು. ಸಂತೋಷ್​ ಹೆಗಡೆ ಕೆಲ ವಿಚಾರಗಳಲ್ಲಿ ತಾರತಮ್ಯ ಮಾಡುತ್ತಿದ್ದರು ಎಂಬ ಗಂಭೀರ ಆರೋಪವನ್ನು ಸಹ ಹೊರಿಸಿದ್ದರು.

ಬಳಿಕ ಐಜಿಪಿಯಾಗಿ ಬಡ್ತಿ ಪಡೆದ ಅವರು ಕೆಲ ಸಮಯ ಪೊಲೀಸ್​ ನೇಮಕಾತಿ ವಿಭಾಗದ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿದರು. ನಂತರ ಕೆಲವೇ ದಿನಗಳಲ್ಲಿ ಕೇಂದ್ರ ಸೇವೆಗೆ ತೆರಳಿದ ಅವರು ಸರ್ದಾರ್​ ವಲ್ಲಭಭಾಯ್​ ಪಟೇಲ್​ ರಾಷ್ಟ್ರೀಯ ಪೊಲೀಸ್​ ಅಕಾಡೆಮಿಯಲ್ಲಿ ಉಪ ನಿರ್ದೇಶಕರಾಗಿ ನೇಮಕಗೊಂಡಿದ್ದರು. ಹಿರಿಯ ಪತ್ರಕರ್ತ ದಿವಂಗತ ವಡ್ಡರ್ಸೆ ರಘುರಾಮ್ ಶೆಟ್ಟಿ ಅವರ ಮಗನಾದ ಮಧುಕರ್ ಶೆಟ್ಟಿ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಎಸ್​ಪಿಯಾಗಿ ಕೆಲಸ ಮಾಡಿದ್ದರು. ವೀರಪ್ಪನ್ ಬಂಧನಕ್ಕೆ ರಚಿಸಿದ್ದ ಸ್ಪೆಷಲ್ ಟಾಸ್ಕ್ ಫೋರ್ಸ್​ನಲ್ಲೂ ಎಸ್​ಪಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ನ್ಯೂಯಾರ್ಕ್​ನ ವಿವಿಯೊಂದರಲ್ಲಿ ಸಾರ್ವಜನಿಕ ಆಡಳಿತ ವಿಷಯದಲ್ಲಿ ಪಿಹೆಚ್​ಡಿ ಪಡೆದಿದ್ದ ಅವರು 2017ರ ಮಾರ್ಚ್​ನಲ್ಲಿ ಹೈದರಾಬಾದ್​ನ ಐಪಿಎಗೆ ಸೇರ್ಪಡೆಗೊಂಡಿದ್ದರು.

ದಕ್ಷ ಅಧಿಕಾರಿಯಾಗಿದ್ದ ಮಧುಕರ್ ಶೆಟ್ಟಿ ಅವರನ್ನು ಅನಾರೋಗ್ಯ ಹಿನ್ನೆಲೆಯಲ್ಲಿ 2018ರ ಡಿಸೆಂಬರ್ 25ರಂದು ಹೈದರಾಬಾದ್​ನ ಕಾಂಟಿನೆಂಟಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಡಿಸೆಂಬರ್ 28ರಂದು ಮಧುಕರ್ ಶೆಟ್ಟಿ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದರು. ಅವರ ಸಾವಿಗೆ ಹೆಚ್1ಎನ್1 ಕಾರಣ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದರು.

ಇದನ್ನೂ ಓದಿ: ವರ್ತೂರು ಕೋಡಿ ವೃತ್ತಕ್ಕೆ ಮಧುಕರ್ ಶೆಟ್ಟಿ ಹೆಸರಿಡಲು ನಿರಾಕರಣೆ: ಶಂಕರ್​ ಬಿದರಿ ಆಕ್ರೋಶ

ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ