AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​ ಪೊಲೀಸ್​ ಅಕಾಡೆಮಿ ಕೇಂದ್ರ ಸಭಾಂಗಣಕ್ಕೆ ಕನ್ನಡಿಗ ಐಪಿಎಸ್​ ಅಧಿಕಾರಿ ದಿವಂಗತ ವಡ್ಡರ್ಸೆ ಡಾ.ಕೆ.ಮಧುಕರ್​ ಶೆಟ್ಟಿ ಹೆಸರು

ಡಾ.ಕೆ.ಮಧುಕರ್​ ಶೆಟ್ಟಿ ಅವರ ಕಾರ್ಯಕ್ಷಮತೆಗೆ, ದಕ್ಷತೆಗೆ, ಕೆಲಸದೆಡೆಗಿನ ಬದ್ಧತೆಗೆ ಹಾಗೂ ನಮ್ಮೆಲರಿಗೂ ಮಾದರಿ ವ್ಯಕ್ತಿತ್ವವಾಗಿ ಇದ್ದಿದ್ದಕ್ಕೆ ಗೌರವ ಸೂಚಿಸುವ ಸಲುವಾಗಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಕೇಂದ್ರದ ಉಪ ನಿರ್ದೇಶಕ ಕೆಪಿಎ ಇಳ್ಯಾಸ್ ತಿಳಿಸಿದ್ದಾರೆ.

ಹೈದರಾಬಾದ್​ ಪೊಲೀಸ್​ ಅಕಾಡೆಮಿ ಕೇಂದ್ರ ಸಭಾಂಗಣಕ್ಕೆ ಕನ್ನಡಿಗ ಐಪಿಎಸ್​ ಅಧಿಕಾರಿ ದಿವಂಗತ ವಡ್ಡರ್ಸೆ ಡಾ.ಕೆ.ಮಧುಕರ್​ ಶೆಟ್ಟಿ ಹೆಸರು
ದಿವಂಗತ ಡಾ.ಕೆ.ಮಧುಕರ್​ ಶೆಟ್ಟಿ
Skanda
|

Updated on: May 12, 2021 | 8:42 AM

Share

ಹಿರಿಯ ಪತ್ರಕರ್ತ ದಿವಂಗತ ವಡ್ಡರ್ಸೆ ರಘುರಾಮ್ ಶೆಟ್ಟಿ ಅವರ ಪುತ್ರ, ಕರ್ನಾಟಕದ ಹೆಮ್ಮೆಯ ಐಪಿಎಸ್​ ಅಧಿಕಾರಿ ದಿವಂಗತ ಡಾ.ಕೆ.ಮಧುಕರ್ ಶೆಟ್ಟಿ ತಮ್ಮ ಪ್ರಾಮಾಣಿಕತೆಗೆ, ದಕ್ಷತೆಗೆ, ಕಾರ್ಯ ವೈಖರಿಗೆ, ನೇರ ನುಡಿಗೆ ಹೆಸರಾಗಿದ್ದವರು. ದುರದೃಷ್ಟವಶಾತ್ ಹೆಚ್​1ಎನ್​1 ಕಾಯಿಲೆಗೆ ತುತ್ತಾಗಿ 2018ರ ಡಿಸೆಂಬರ್​ 28ರಂದು ಇಹಲೋಕ ತ್ಯಜಿಸಿದರು. ಆದರೆ, ಅವರು ತಮ್ಮ ಕಾರ್ಯಾವಧಿಯಲ್ಲಿ ಮಾಡಿದ ಉತ್ತಮ ಕೆಲಸಗಳನ್ನು ಇಂದಿಗೂ ಸಮಾಜ ಸ್ಮರಿಸುತ್ತಿದ್ದು, ಹೈದರಾಬಾದ್​ನ ಸರ್ದಾರ್ ವಲ್ಲಭಭಾಯಿ ಪಟೇಲ್​ ರಾಷ್ಟ್ರೀಯ ಪೊಲೀಸ್​ ಅಕಾಡೆಮಿ ಕೇಂದ್ರದ ಮುಖ್ಯ ಉಪನ್ಯಾಸ ಸಭಾಂಗಣಕ್ಕೆ ಅವರ ಹೆಸರನ್ನು ಗೌರವಾರ್ಥವಾಗಿ ಇಡಲು ನಿರ್ಧರಿಸಲಾಗಿದೆ.

ಈ ಬಗ್ಗೆ ಸರ್ದಾರ್ ವಲ್ಲಭಭಾಯಿ ಪಟೇಲ್​ ರಾಷ್ಟ್ರೀಯ ಪೊಲೀಸ್​ ಅಕಾಡೆಮಿ ಕೇಂದ್ರ ಅಧಿಕೃತ ಪ್ರಕಟಣೆ ನೀಡಿದ್ದು, ಕೇಂದ್ರದ ಮುಖ್ಯ ಉಪನ್ಯಾಸ ಸಭಾಂಗಣಕ್ಕೆ ದಿವಂಗತ ಡಾ.ಕೆ.ಮಧುಕರ್​ ಶೆಟ್ಟಿ ಅವರ ಹೆಸರನ್ನಿಡಲು ನಿರ್ಧರಿಸಿದ್ದೇವೆ. ಅವರ ಕಾರ್ಯಕ್ಷಮತೆಗೆ, ದಕ್ಷತೆಗೆ, ಕೆಲಸದೆಡೆಗಿನ ಬದ್ಧತೆಗೆ ಹಾಗೂ ನಮ್ಮೆಲರಿಗೂ ಮಾದರಿ ವ್ಯಕ್ತಿತ್ವವಾಗಿ ಇದ್ದಿದ್ದಕ್ಕೆ ಗೌರವ ಸೂಚಿಸುವ ಸಲುವಾಗಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಕೇಂದ್ರದ ಉಪ ನಿರ್ದೇಶಕ ಕೆಪಿಎ ಇಳ್ಯಾಸ್ ತಿಳಿಸಿದ್ದಾರೆ.

IPS K MADHUKAR SHETTY

ಸರ್ದಾರ್ ವಲ್ಲಭಭಾಯಿ ಪಟೇಲ್​ ರಾಷ್ಟ್ರೀಯ ಪೊಲೀಸ್​ ಅಕಾಡೆಮಿ ಕೇಂದ್ರದ ಮುಖ್ಯ ಉಪನ್ಯಾಸ ಸಭಾಂಗಣಕ್ಕೆ ದಿವಂಗತ ಡಾ.ಕೆ.ಮಧುಕರ್​ ಶೆಟ್ಟಿ ಹೆಸರು

ಮೂಲತಃ ಕರ್ನಾಟಕದ ಉಡುಪಿ ಜಿಲ್ಲೆಯವರಾದ ಮಧುಕರ್​ ಶೆಟ್ಟಿ, 1999ರ ಬ್ಯಾಚ್​ನ ಐಪಿಎಸ್​ ಅಧಿಕಾರಿಯಾಗಿದ್ದರು. ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆ ಬರೆಯುವ ಮುನ್ನ ದೆಹಲಿ ಜವಹರಲಾಲ್​ ವಿಶ್ವವಿದ್ಯಾಲಯದಲ್ಲಿ (ಜೆಎನ್​ಯು) ಸಮಾಜ ಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. ಚಿಕ್ಕಮಗಳೂರು ಎಸ್​ಪಿಯಾಗಿ ಸೇವೆ ಸಲ್ಲಿಸುತ್ತಿದ್ದ ವೇಳೆ, ಡಿಸಿ ಹರ್ಷ ಗುಪ್ತಾ ಜತೆಗೂಡಿ ದಲಿತ ಸಮುದಾಯದ ಬೆನ್ನೆಲುಬಾಗಿ ನಿಂತಿದ್ದರು. ದಲಿತರ ಭೂಮಿಯನ್ನು ಅಕ್ರಮವಾಗಿ ವಶಪಡಿಸಿಕೊಂಡಿದ್ದ ವ್ಯಕ್ತಿಗಳಿಂದ ಜಮೀನು ಬಿಡಿಸಿ ದಲಿತರಿಗೆ ನೀಡಿದ್ದರು. ನಂತರ ಕೃತಜ್ಞತಾಪೂರ್ವಕವಾಗಿ ಆ ಹಳ್ಳಿಯ ಹೆಸರನ್ನು ಗುಪ್ತಶೆಟ್ಟಿ ಹಳ್ಳಿ ಎಂದೇ ನಾಮಕರಣ ಮಾಡಲಾಗಿತ್ತು.

ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್​ ಹೆಗಡೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಅಧಿಕಾರಿ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್​ ಹೆಗಡೆ ಕಾರ್ಯವೈಖರಿ ಬಗ್ಗೆ ಅಸಮಾಧಾನಗೊಂಡಿದ್ದ ಮಧುಕರ್​ ಶೆಟ್ಟಿ 2011ರಲ್ಲಿ ಉನ್ನತ ವಿದ್ಯಾಭ್ಯಾಸದ ರಜೆಯ ಮೇಲೆ ತೆರಳಿದ್ದರು. ನಂತರದ ಐದು ವರ್ಷಗಳ ಕಾಲ ಅಮೆರಿಕಾದಲ್ಲಿ ಅಧ್ಯಯನ ನಡೆಸಿದ್ದರು. ಆ ಸಮಯದಲ್ಲಿ ಸಂತೋಷ್​ ಹೆಗಡೆ ಅವರ ವಿರುದ್ಧ ನೇರವಾಗಿ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದರು. ಸಂತೋಷ್​ ಹೆಗಡೆ ಕೆಲ ವಿಚಾರಗಳಲ್ಲಿ ತಾರತಮ್ಯ ಮಾಡುತ್ತಿದ್ದರು ಎಂಬ ಗಂಭೀರ ಆರೋಪವನ್ನು ಸಹ ಹೊರಿಸಿದ್ದರು.

ಬಳಿಕ ಐಜಿಪಿಯಾಗಿ ಬಡ್ತಿ ಪಡೆದ ಅವರು ಕೆಲ ಸಮಯ ಪೊಲೀಸ್​ ನೇಮಕಾತಿ ವಿಭಾಗದ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿದರು. ನಂತರ ಕೆಲವೇ ದಿನಗಳಲ್ಲಿ ಕೇಂದ್ರ ಸೇವೆಗೆ ತೆರಳಿದ ಅವರು ಸರ್ದಾರ್​ ವಲ್ಲಭಭಾಯ್​ ಪಟೇಲ್​ ರಾಷ್ಟ್ರೀಯ ಪೊಲೀಸ್​ ಅಕಾಡೆಮಿಯಲ್ಲಿ ಉಪ ನಿರ್ದೇಶಕರಾಗಿ ನೇಮಕಗೊಂಡಿದ್ದರು. ಹಿರಿಯ ಪತ್ರಕರ್ತ ದಿವಂಗತ ವಡ್ಡರ್ಸೆ ರಘುರಾಮ್ ಶೆಟ್ಟಿ ಅವರ ಮಗನಾದ ಮಧುಕರ್ ಶೆಟ್ಟಿ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಎಸ್​ಪಿಯಾಗಿ ಕೆಲಸ ಮಾಡಿದ್ದರು. ವೀರಪ್ಪನ್ ಬಂಧನಕ್ಕೆ ರಚಿಸಿದ್ದ ಸ್ಪೆಷಲ್ ಟಾಸ್ಕ್ ಫೋರ್ಸ್​ನಲ್ಲೂ ಎಸ್​ಪಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ನ್ಯೂಯಾರ್ಕ್​ನ ವಿವಿಯೊಂದರಲ್ಲಿ ಸಾರ್ವಜನಿಕ ಆಡಳಿತ ವಿಷಯದಲ್ಲಿ ಪಿಹೆಚ್​ಡಿ ಪಡೆದಿದ್ದ ಅವರು 2017ರ ಮಾರ್ಚ್​ನಲ್ಲಿ ಹೈದರಾಬಾದ್​ನ ಐಪಿಎಗೆ ಸೇರ್ಪಡೆಗೊಂಡಿದ್ದರು.

ದಕ್ಷ ಅಧಿಕಾರಿಯಾಗಿದ್ದ ಮಧುಕರ್ ಶೆಟ್ಟಿ ಅವರನ್ನು ಅನಾರೋಗ್ಯ ಹಿನ್ನೆಲೆಯಲ್ಲಿ 2018ರ ಡಿಸೆಂಬರ್ 25ರಂದು ಹೈದರಾಬಾದ್​ನ ಕಾಂಟಿನೆಂಟಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಡಿಸೆಂಬರ್ 28ರಂದು ಮಧುಕರ್ ಶೆಟ್ಟಿ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದರು. ಅವರ ಸಾವಿಗೆ ಹೆಚ್1ಎನ್1 ಕಾರಣ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದರು.

ಇದನ್ನೂ ಓದಿ: ವರ್ತೂರು ಕೋಡಿ ವೃತ್ತಕ್ಕೆ ಮಧುಕರ್ ಶೆಟ್ಟಿ ಹೆಸರಿಡಲು ನಿರಾಕರಣೆ: ಶಂಕರ್​ ಬಿದರಿ ಆಕ್ರೋಶ

ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ