AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾಭಾವಿಕವಾಗಿ ಸಿಎಂ ಕಚೇರಿಯಲ್ಲಿ ವರ್ಗಾವಣೆಗಳು ನಡೆಯುತ್ತವೆ; ಸತೀಶ್ ಜಾರಕಿಹೊಳಿ ಅಚ್ಚರಿ ಹೇಳಿಕೆ

ನನ್ನ ಇಲಾಖೆಯಲ್ಲಿಯೇ ಒಂದೇ ಹುದ್ದೆಗೆ ಎರಡು ವರ್ಗಾವಣೆ ನಡೆದಿದೆ. ತಾಂತ್ರಿಕ ಸಮಸ್ಯೆಗಳಿಂದ ಅಥವಾ ಕಣ್ತಪ್ಪಿನಿಂದ ಈ ರೀತಿ ಆಗುತ್ತಿರುತ್ತದೆ. ಇಂತಹ ತಪ್ಪುಗಳನ್ನು ದೊಡ್ಡದು ಆಗುವ ರೀತಿ ಬಿಡಬಾರದು. ಈ ವಿಷಯಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರು ಮಧ್ಯಪ್ರವೇಶ ಮಾಡಿ ಸಮಸ್ಯೆ ಬಗೆಹರಿಸುತ್ತಾರೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಸ್ವಾಭಾವಿಕವಾಗಿ ಸಿಎಂ ಕಚೇರಿಯಲ್ಲಿ ವರ್ಗಾವಣೆಗಳು ನಡೆಯುತ್ತವೆ; ಸತೀಶ್ ಜಾರಕಿಹೊಳಿ ಅಚ್ಚರಿ ಹೇಳಿಕೆ
ಸತೀಶ್​ ಜಾರಕಿಹೊಳಿ
ಪ್ರಸನ್ನ ಗಾಂವ್ಕರ್​
| Edited By: |

Updated on:Nov 16, 2023 | 3:29 PM

Share

ಬೆಂಗಳೂರು, ನ.16: ಮುಖ್ಯಮಂತ್ರಿ ಕಚೇರಿಯಲ್ಲಿ ವರ್ಗಾವಣೆ ದಂಧೆ ಆರೋಪ ವಿಚಾರ ‘ಸ್ವಾಭಾವಿಕವಾಗಿ ಸಿಎಂ ಕಚೇರಿಯಲ್ಲಿ ವರ್ಗಾವಣೆಗಳು ನಡೆಯುತ್ತವೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ(Satish Jarkiholi)ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ನಾವು, ಉಸ್ತುವಾರಿಗಳು ಹಾಗೂ ಶಾಸಕರು ಕೂಡ ಪತ್ರ ಕೊಟ್ಟಿರುತ್ತಾರೆ. ವರ್ಗಾವಣೆ ನಡೆಯುತ್ತಿರುತ್ತದೆ. ಇದು ಹಿಂದಿನ ಸರ್ಕಾರದಲ್ಲೂ ಆಗುತ್ತಿತ್ತು, ಈಗಲೂ ಕೆಲವು ಸಮಸ್ಯೆ ಆಗುತ್ತಿದೆ ಎಂದು ಹೇಳಿದರು.

ಒಂದೇ ಹುದ್ದೆಗೆ ಎರಡು ವರ್ಗಾವಣೆ

ಹೌದು, ನನ್ನ ಇಲಾಖೆಯಲ್ಲಿಯೇ ಒಂದೇ ಹುದ್ದೆಗೆ ಎರಡು ವರ್ಗಾವಣೆ ನಡೆದಿದೆ. ತಾಂತ್ರಿಕ ಸಮಸ್ಯೆಗಳಿಂದ ಅಥವಾ ಕಣ್ತಪ್ಪಿನಿಂದ ಈ ರೀತಿ ಆಗುತ್ತಿರುತ್ತದೆ. ಇಂತಹ ತಪ್ಪುಗಳನ್ನು ದೊಡ್ಡದು ಆಗುವ ರೀತಿ ಬಿಡಬಾರದು. ಈ ವಿಷಯಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರು ಮಧ್ಯಪ್ರವೇಶ ಮಾಡಿ ಸಮಸ್ಯೆ ಬಗೆಹರಿಸುತ್ತಾರೆ ಎಂದರು.

ಇದನ್ನೂ ಓದಿ:ವರ್ಗಾವಣೆ ದಂಧೆಯಲ್ಲಿ ಶಾಸಕ ಜೆಟಿ ಪಾಟೀಲ್ ಪಿಎ ಭಾಗಿ ಆರೋಪ; ಸಚಿವ ದಿನೇಶ್ ಗುಂಡೂರಾವ್ ಆಪ್ತ ಕಾರ್ಯದರ್ಶಿ ದೂರು

ಇನ್ನು ವರ್ಗಾವಣೆ ದಂಧೆ ಕುರಿತು ಕಾಂಗ್ರೆಸ್​ ವಿರುದ್ದ ಇತರ ಪಕ್ಷಗಳು ಟೀಕೆ ಮಾಡುತ್ತಿರುವ ಬೆನ್ನಲ್ಲೇ ಇದೀಗ ಸಿಎಂ ಹಾಗೂ ಅವರ ಪುತ್ರ, ಮಾಜಿ ಶಾಸಕ ಡಾ. ಯತೀಂದ್ರ ಅವರ ನಡುವಿನ ಆಡಿಯೋ ವೈರಲ್​ ಆಗಿದೆ. ‘ನಾನು ನೀಡಿದ ಲಿಸ್ಟ್​​ನದ್ದು ಮಾತ್ರ ಮಾಡಿ ಎಂದು ಸಿಎಂ ವಿಶೇಷ ಕರ್ತವ್ಯಾಧಿಕಾರಿ ಮಹದೇವ್ ಅವರಿಗೆ ಯತೀಂದ್ರ ಅವರು ಸೂಚಿಸಿರುವ ವಿಡಿಯೋ ವೈರಲ್ ಆಗಿದೆ. ಇದಕ್ಕೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರು ಟೀಕೆ ಮಾಡಿದ್ದಾರೆ.

ಸಿಎ ಸ್ಪಷ್ಟನೆ

ಇನ್ನು ಈ ವಿಷಯ ದೊಡ್ಡದಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯನವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ‘ಯತೀಂದ್ರ ಅವರು ವರ್ಗಾವಣೆ ಬಗ್ಗೆ ಮಾತಾಡಿಲ್ಲ. ಸಿಎಸ್​ಆರ್ ಫಂಡ್​ ವಿಚಾರವಾಗಿ ಯತೀಂದ್ರ ಮಾತಾಡಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ. ‘ನನ್ನ ರಾಜಕೀಯ ಜೀವನದಲ್ಲಿ ವರ್ಗಾವಣೆ ದಂಧೆ ಮಾಡಿಲ್ಲ, ಹಾಗೆನಾದರೂ ವರ್ಗಾವಣೆ ದಂಧೆ ಮಾಡಿದ್ದಾದರೆ ರಾಜಕೀಯದಿಂದ ನಿವೃತ್ತಿ ಆಗುತ್ತೇನೆ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:49 pm, Thu, 16 November 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!