AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಸೇರಲು ಸತೀಶ್ ಸೌಜನ್ಯದ ಆಹ್ವಾನ ಕೊಟ್ಟಿದ್ದಾರೆ: ಜೆಡಿಎಸ್ ಮುಖಂಡ ಅಶೋಕ್ ಪೂಜಾರಿ

Ashok Pujari: ಕಾಂಗ್ರೆಸ್ ಸೇರಲು ಸತೀಶ್ ಸೌಜನ್ಯದ ಆಹ್ವಾನ ಕೊಟ್ಟಿದ್ದಾರೆ. ಈ ಬಗ್ಗೆ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಜತೆ ಮಾತಾಡುತ್ತೇನೆ. ಅವರ ಜತೆ ಚರ್ಚಿಸಿ ನನ್ನ ನಡೆ ತಿಳಿಸುವುದಾಗಿ ಹೇಳಿದ್ದೇನೆ ಎಂದು ಜೆಡಿಎಸ್ ಪಕ್ಷ ಮುಖಂಡ ಅಶೋಕ್ ಪೂಜಾರಿ ತಿಳಿಸಿದರು.

ಕಾಂಗ್ರೆಸ್ ಸೇರಲು ಸತೀಶ್ ಸೌಜನ್ಯದ ಆಹ್ವಾನ ಕೊಟ್ಟಿದ್ದಾರೆ: ಜೆಡಿಎಸ್ ಮುಖಂಡ ಅಶೋಕ್ ಪೂಜಾರಿ
ಜೆಡಿಎಸ್ ಮುಖಂಡ ಅಶೋಕ್ ಪೂಜಾರಿ
sandhya thejappa
| Edited By: |

Updated on: Feb 17, 2021 | 5:26 PM

Share

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಮ್ಮ ಮನೆಗೆ ಭೇಟಿ ನೀಡಿರುವ ವಿಚಾರದ ಬಗ್ಗೆ ಸ್ಪಷ್ಟನೆ ನೀಡಿರುವ ಜೆಡಿಎಸ್ ಮುಖಂಡ ಅಶೋಕ್ ಪೂಜಾರಿ ನಿನ್ನೆ (ಫೆಬ್ರವರಿ 16) ನಮ್ಮ ಮನೆಗೆ ಸತೀಶ್ ಜಾರಕಿಹೊಳಿ ಬಂದಿದ್ದರು. ಅಧಿಕೃತವಾಗಿಯೇ ಕಾಂಗ್ರೆಸ್ ಪಕ್ಷದ ವತಿಯಿಂದ ಭೇಟಿಗೆ ಬಂದಿದ್ದಾಗಿ ಹೇಳಿದ್ದರು. ಎಲ್ಲರೂ ಸೇರಿ ಹೊಸ ಅಧ್ಯಾಯ ಆರಂಭಿಸೋಣ ಎಂದೂ ತಿಳಿಸಿದರು ಎಂಬುದಾಗಿ ಹೇಳಿದ್ದಾರೆ.

ಕಾಂಗ್ರೆಸ್ ಸೇರಲು ಸತೀಶ್ ಸೌಜನ್ಯದ ಆಹ್ವಾನ ಕೊಟ್ಟಿದ್ದಾರೆ. ಈ ಬಗ್ಗೆ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಜತೆ ಮಾತಾಡುತ್ತೇನೆ. ಅವರ ಜತೆ ಚರ್ಚಿಸಿ ನನ್ನ ನಡೆ ತಿಳಿಸುವುದಾಗಿ ಹೇಳಿದ್ದೇನೆ. ಅಲ್ಲದೇ ಸದ್ಯ ಗೋಕಾಕ್ ವ್ಯವಸ್ಥೆ ವಿರುದ್ಧ ಹೋರಾಟ ನಡೆದಿದೆ. ನಿಮ್ಮ ವಿಚಾರಧಾರೆ ನಮ್ಮ ವಿಚಾರಧಾರೆ ಒಂದೇ ಇದೆ ಎಂದರು. ಎಲ್ಲರೂ ಸೇರಿ ಹೊಸ ಅಧ್ಯಾಯ ಆರಂಭ ಮಾಡೋಣ ಎಂದಿದ್ದಾರೆ. ಆದರೆ ನನ್ಮ ರಾಜಕೀಯ ಗಾಡ್ ಫಾದರ್ ಹೆಚ್.ಡಿ.ದೇವೇಗೌಡ. ಹೀಗಾಗಿ ಅವರ ಬಳಿ ಕೇಳಿ ಅದಕ್ಕೆ ಪೂರಕವಾಗಿ ನನ್ನ ನಡೆ ತಿಳಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದೇನೆ ಎಂಬುದಾಗಿ ಹೇಳಿದ್ದಾರೆ.

ಬೆಳಗಾವಿ ಲೋಕಸಭೆ ಎಲೆಕ್ಷನ್ ಟಿಕೆಟ್ ಆಫರ್ ಏನೂ ಮಾಡಿಲ್ಲ. ನಾನು ಕಾಂಗ್ರೆಸ್ ಪಕ್ಷದಲ್ಲಿಲ್ಲ. ಜೆಡಿಎಸ್ ಪಕ್ಷದಲ್ಲಿ ಅಧಿಕೃತವಾಗಿ ಇದ್ದೇನೆ. ಈ ವೇಳೆ ಕಾಂಗ್ರೆಸ್ ಪಕ್ಷ ನನಗೆ ಎಂಪಿ ಟಿಕೆಟ್ ನೀಡುವ ಪ್ರಶ್ನೆಯೇ ಇಲ್ಲ ಎಂದೂ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಮಂದಿರಕ್ಕೆ ದೇಣಿಗೆ ಸಂಗ್ರಹ, ಟೂಲ್ ಕಿಟ್, ಪೆಟ್ರೋಲ್​ ದರ ಏರಿಕೆ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಹೆಚ್​.ಡಿ. ಕುಮಾರಸ್ವಾಮಿ ಹೇಳಿದ್ದೇನು?

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!