Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಳಿಯ ಅಂಬಿರಾವ್ ಪಾಟೀಲ್ ಮಾತನ್ನು ಬಿಟ್ಟು ಬೇರೆ ಯಾರ ಮಾತನ್ನೂ ರಮೇಶ್​ ಕೇಳಲ್ಲ: ಸತೀಶ್​ ಜಾರಕಿಹೊಳಿ

Ramesh Jarkiholi CD Controversy: ವಿಡಿಯೋ ಬಗ್ಗೆ ಮಾತನಾಡಿರುವ ಸತೀಶ್​ ಜಾರಕಿಹೊಳಿ, ಆ ವಿಡಿಯೋ ಓರಿಜನಲ್ ಅಥವಾ ಫೇಕ್ ಎಂಬ ಬಗ್ಗೆ ಪೊಲೀಸರೇ ಸರ್ಟಿಫಿಕೇಟ್ ಕೊಡಬೇಕು. ಪೊಲೀಸರು ವಿಡಿಯೋದಲ್ಲಿದ್ದ ಯುವತಿಗೆ ನೋಟಿಸ್ ಕೊಟ್ಟು ಕರೆಯಿಸಿಕೊಳ್ಳಬೇಕು. ಆ ಯುವತಿಯ ಹೇಳಿಕೆಯೂ ಬಹಳ ಮುಖ್ಯ ಎಂದಿದ್ದಾರೆ.

ಅಳಿಯ ಅಂಬಿರಾವ್ ಪಾಟೀಲ್ ಮಾತನ್ನು ಬಿಟ್ಟು ಬೇರೆ ಯಾರ ಮಾತನ್ನೂ ರಮೇಶ್​ ಕೇಳಲ್ಲ: ಸತೀಶ್​ ಜಾರಕಿಹೊಳಿ
ರಮೇಶ್​ ಜಾರಕಿಹೊಳಿ, ಸತೀಶ್​ ಜಾರಕಿಹೊಳಿ
Follow us
Skanda
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Mar 04, 2021 | 4:27 PM

ಬೆಳಗಾವಿ: ರಾಸಲೀಲೆ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕಾಕ್​ನಲ್ಲಿ ಪ್ರತಿಕ್ರಿಯೆ ನೀಡಿರುವ ರಮೇಶ್ ಜಾರಕಿಹೊಳಿ‌ ಸಹೋದರ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ನಾವು ರಮೇಶ್ ಜಾರಕಿಹೊಳಿ‌ಗೆ ಏನೂ ಹೇಳೋಕೆ ಹೋಗಲ್ಲ. ಅವರು ಯಾರ ಮಾತನ್ನೂ ಕೇಳುವ ಸ್ಥಿತಿಯಲ್ಲಿಲ್ಲ ಎನ್ನುವುದು ನಮಗೆ ಗೊತ್ತಿದೆ. ಜಾರಕಿಹೊಳಿ‌ ಕುಟುಂಬ ಒಂದೇ ಅಂತಾ ಹೇಳಕ್ಕಾಗಲ್ಲ. ಗೋಕಾಕ್‌ದಲ್ಲಿ ಏನು ಪರಿಸ್ಥಿತಿ ಇದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಮಾತು ಕೇಳೋದಾಗಿದ್ರೆ ಹೇಳ್ತಿದ್ವಿ. ಆದರೆ, ಅವರು ಯಾರ ಮಾತೂ ಕೇಳಲ್ಲ ಎಂದು ತಿಳಿಸಿದ್ದಾರೆ.

ಅವರು ಇಂಡಿಪೆಂಡೆಂಟ್ ಇದ್ದಾರೆ, ಇಂಡಿಪೆಂಡೆಂಟ್ ಆಗಿಯೇ ನಡೆಸುತ್ತಾರೆ. ನಮ್ಮ ಪಕ್ಷ ಕೂಡ ಇಂಡಿಪೆಂಡೆಂಟ್, ಹೀಗಾಗಿ ನಮ್ಮ ವಿಚಾರ ಕೂಡ ಇಂಡಿಪೆಂಡೆಂಟ್. ಸದ್ಯಕ್ಕೆ ರಮೇಶ್ ಜಾರಕಿಹೊಳಿ ಅವರ ಅಳಿಯ ಅಂಬಿರಾವ್ ಪಾಟೀಲ್ ಬಿಟ್ಟು ಬೇರೆಯವರ ಮಾತು ಕೇಳೋ ಪರಿಸ್ಥಿತಿಯಲ್ಲಿ ಇಲ್ಲ ಎಂದು ಹೇಳಿದ್ದಾರೆ. ಆ ಮೂಲಕ ರಮೇಶ್ ಅಳಿಯ ಅಂಬಿರಾವ್ ಪಾಟೀಲ್ ಅವರ ಹೆಸರನ್ನು ಮತ್ತೆ ಮುನ್ನಲೆಗೆ ತಂದಿದ್ದಾರೆ.

ವಿಡಿಯೋ ಬಗ್ಗೆ ಮಾತನಾಡಿರುವ ಸತೀಶ್​ ಜಾರಕಿಹೊಳಿ, ಆ ವಿಡಿಯೋ ಓರಿಜನಲ್ ಅಥವಾ ಫೇಕ್ ಎಂಬ ಬಗ್ಗೆ ಪೊಲೀಸರೇ ಸರ್ಟಿಫಿಕೇಟ್ ಕೊಡಬೇಕು. ಪೊಲೀಸರು ವಿಡಿಯೋದಲ್ಲಿದ್ದ ಯುವತಿಗೆ ನೋಟಿಸ್ ಕೊಟ್ಟು ಕರೆಯಿಸಿಕೊಳ್ಳಬೇಕು. ಆ ಯುವತಿಯ ಹೇಳಿಕೆಯೂ ಬಹಳ ಮುಖ್ಯ. ಯಾರೇ ದೂರು ಕೊಟ್ಟರೂ ಯುವತಿ ಮುಂದೆ ಬಂದು ಹೇಳಿಕೆ ಕೊಟ್ಟಾಗ ಅದಕ್ಕೆ ಮಹತ್ವ. ಹೀಗಾಗಿ ಪೊಲೀಸರು ತನಿಖೆ ಮಾಡುವುದೊಂದೇ ಈಗ ಪರಿಹಾರ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ರಮೇಶ್​ ಜಾರಕಿಹೊಳಿ ಬೆಳವಣಿಗೆ ಸಹಿಸಲಾಗದೆ ಬಿಜೆಪಿಯವರೇ ಬ್ರೇಕ್​ ಹಾಕಿರಬಹುದು: ಸತೀಶ್​ ಜಾರಕಿಹೊಳಿ

ಈ ಘಟನೆಯಿಂದ ರಮೇಶ್ ಜಾರಕಿಹೊಳಿ‌ಗೆ ಹೊಡೆತ ಬಿದ್ದಿದೆ, ಸುಧಾರಿಸಿಕೊಳ್ಳಲು ಸಮಯ ಬೇಕು: ಸಹೋದರ ಸತೀಶ್ ಜಾರಕಿಹೊಳಿ‌

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ