AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರ ಹಂಚಿಕೆ ಸ್ಪಷ್ಟತೆ ಬಗ್ಗೆ ದಾಳ ಉರುಳಿಸಿದ ಸಾಹುಕಾರ್: ಯಥಾಸ್ಥಿತಿ ಕಾಯ್ದುಕೊಳ್ಳುವ ಬಗ್ಗೆ ತೆರೆಮರೆಯಲ್ಲಿ ತಂತ್ರಗಾರಿಕೆ

ಅಕ್ಟೋಬರ್ ಶುರುವಾಗಿ ನವೆಂಬರ್ ದಿನಗಳು ಹತ್ತಿರವಾಗುತ್ತಿರುವಂತೆಯೇ ಕರ್ನಾಟಕ ಕಾಂಗ್ರೆಸ್​​ನಲ್ಲಿ ಕ್ರಾಂತಿಯ ಲಕ್ಷಣಗಳೂ ಶುರುವಾಗಿವೆ. ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತಿರುವ ನಾಯಕರ ತಂಡ ತಮ್ಮದೇ ತಂತ್ರಗಾರಿಕೆ ಮೂಲಕ ಹೊಸ ದಾಳ ಉರುಳಿಸಿದೆ. ಆ ಮೂಲಕ, ಯಥಾಸ್ಥಿತಿ ಕಾಯ್ದುಕೊಳ್ಳುವ ಬಗ್ಗೆ ತೆರೆಮರೆಯಲ್ಲಿ ತಂತ್ರಗಾರಿಕೆ ಹೆಣೆಯುತ್ತಿದೆ.

ಅಧಿಕಾರ ಹಂಚಿಕೆ ಸ್ಪಷ್ಟತೆ ಬಗ್ಗೆ ದಾಳ ಉರುಳಿಸಿದ ಸಾಹುಕಾರ್: ಯಥಾಸ್ಥಿತಿ ಕಾಯ್ದುಕೊಳ್ಳುವ ಬಗ್ಗೆ ತೆರೆಮರೆಯಲ್ಲಿ ತಂತ್ರಗಾರಿಕೆ
ಅಧಿಕಾರ ಹಂಚಿಕೆ ಸ್ಪಷ್ಟತೆ ಬಗ್ಗೆ ದಾಳ ಉರುಳಿಸಿದ ಸಾಹುಕಾರ್
Pramod Shastri G
| Edited By: |

Updated on: Oct 09, 2025 | 7:36 AM

Share

ಬೆಂಗಳೂರು, ಅಕ್ಟೋಬರ್ 9: ಕರ್ನಾಟಕ (Karnataka) ರಾಜಕೀಯದಲ್ಲಿ, ಅದರಲ್ಲೂ ಕಾಂಗ್ರೆಸ್​​​ನಲ್ಲಿ (Congress) ನವೆಂಬರ್ ಕ್ರಾಂತಿಗೆ ವೇದಿಕೆ ತೆರೆ ಮರೆಯಲ್ಲಿ ಸಿದ್ದವಾದಂತೆ ಕಾಣುತ್ತಿದೆ. ಕಳೆದ ಕೆಲವು ತಿಂಗಳುಗಳಿಂದ ಕ್ರಾಂತಿಯ ಕಹಳೆ ಪೆಟ್ಟಿಗೆ ಸೇರಿಕೊಂಡಿತ್ತು. ಆದರೆ ಪೆಟ್ಟಿಗೆಯಿಂದ ಕಹಳೆ ಹೊರಗೆ ತೆಗೆದು ಸದ್ದು ಮಾಡುವ ಸಿದ್ದತೆ ಆರಂಭಿಸಿದ್ದು ಸಚಿವ ಸತೀಶ್ ಜಾರಕಿಹೊಳಿ. ಸರ್ಕಾರ ರಚನೆಯಾದ ದಿನದಿಂದಲೂ ಅಧಿಕಾರ ಹಂಚಿಕೆ ಬಗ್ಗೆ ಕಾಂಗ್ರೆಸ್ ನಲ್ಲಿಯೇ ಗೊಂದಲಗಳಿವೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆ ಸೂತ್ರ ಇದೆಯೋ ಇಲ್ಲವೋ ಎಂಬ ಬಗ್ಗೆ ಯಾವುದೇ ಸ್ಪಷ್ಟ ಚಿತ್ರಣ ಇಲ್ಲ. ಹೀಗಾಗಿ ಸಚಿವ ಸತೀಶ್ ಜಾರಕಿಹೊಳಿ ಇದೀಗ ಹೈಕಮಾಂಡ್ ನಾಯಕರನ್ನು ಒತ್ತಾಯ ಮಾಡಿದ್ದಾರೆ. ಪವರ್ ಶೇರಿಂಗ್ ಬಗ್ಗೆ ಹೈಕಮಾಂಡ್ ಸ್ಪಷ್ಟತೆ ಕೊಟ್ಟು ಗೊಂದಲಗಳಿಗೆ ಬ್ರೇಕ್ ಹಾಕಲಿ ಎಂದಿದ್ದಾರೆ. ಸತೀಶ್ ಮಾತಿಗೆ ಗೃಹ ಸಚಿವ ಪರಮೇಶ್ವರ್ ಕೂಡ ದನಿಗೂಡಿಸಿದ್ದಾರೆ.

ಏಕಾಏಕಿ ಶುರುವಾದ ಒತ್ತಡ ಇದಲ್ಲ. ಬದಲಿಗೆ ನಾಯಕತ್ವ ಬದಲಾವಣೆಯ ಮೊಳಕೆಯ‌ನ್ನು ಬುಡದಲ್ಲೇ ಚಿವುಟಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಮಾಡುವ ತಂತ್ರಗಾರಿಕೆ ಇದು ಎನ್ನಲಾಗುತ್ತಿದೆ. ಸದ್ಯ ಸಿಎಂ ಸ್ಥಾನದ ಮೇಲೆ ಕಣ್ಣು ನೆಟ್ಟಿರುವ ಡಿಕೆ ಶಿವಕುಮಾರ್ ತಮ್ಮ ಬತ್ತಳಿಕೆಯಲ್ಲಿ ಯಾವ ಬಾಣ ಇದೆ ಎಂಬ ಗುಟ್ಟು ಬಿಟ್ಟುಕೊಡುತ್ತಿಲ್ಲ. ನವೆಂಬರ್ ಹತ್ತಿರ ಬರುತ್ತಿದ್ದರೂ ಡಿಕೆಶಿ ದಮ್ಮು ಕಟ್ಟಿಕೊಂಡು ಕೂತಿದ್ದಾರೆ. ಇದರ ಆಳ ಅಗಲ ಅರ್ಥ ಮಾಡಿಕೊಳ್ಳಲು ದಾಳ ಉರುಳಿಸಿರುವ ಅಹಿಂದ ನಾಯಕರು ಚೆಂಡು ತೆಗೆದು ಹೈಕಮಾಂಡ್ ಅಂಗಳಕ್ಕೆ ಎಸೆದಿದ್ದಾರೆ‌. ಅಧಿಕಾರ ಹಂಚಿಕೆ ಇದೆಯೋ ಇಲ್ಲೋ ಎಂಬುದನ್ನು ಹೈಕಮಾಂಡ್ ಸ್ಪಷ್ಟಪಡಿಸಲಿ ಎಂಬುದು ತಂತ್ರಗಾರಿಕೆಯ ಭಾಗ ಎನ್ನಲಾಗುತ್ತಿದೆ. ಆದರೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಬಗ್ಗೆ ಯಾವುದೇ ಉತ್ತರ ಕೊಡದೇ ಮೌನಕ್ಕೆ ಶರಣಾಗಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯನವರ ಬಗ್ಗೆಯೇ ಕೆಎನ್ ರಾಜಣ್ಣ ಅಚ್ಚರಿ ಮಾತು: ಕಾಂಗ್ರೆಸ್​​​​ನಲ್ಲಿ ಸಂಚಲನ

ಸದ್ಯ ಮೇಲ್ನೋಟಕ್ಕೆ ರಾಜ್ಯ ರಾಜಕೀಯದ ಮೇಲೆ ಗಮನ ಹರಿಸಿದವರಿಗೆ ಯಾವುದೇ ಬೇರೆ ಸ್ಫೋಟಕ ತಿರುವು ಪಡೆಯುವ ಲಕ್ಷಣಗಳು ಕಂಡು ಬರುತ್ತಿಲ್ಲ. ಆದರೆ ಸತೀಶ್ ಜಾರಕಿಹೊಳಿಯ ಒತ್ತಡ ಸುನಾಮಿಯೊಂದರ ಮುನ್ಸೂಚನೆಯಾ ಎಂಬುದನ್ನು ಕಾಲವೇ ಉತ್ತರಿಸಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ
ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಬರಿದಾದ ಜಲಾಶಯವೇ ಮಕ್ಕಳಿಗೀಗ ಕ್ರಿಕೆಟ್​​ ಮೈದಾನ!
ಬರಿದಾದ ಜಲಾಶಯವೇ ಮಕ್ಕಳಿಗೀಗ ಕ್ರಿಕೆಟ್​​ ಮೈದಾನ!