AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನೆಯಷ್ಟೇ ದೂರು ದಾಖಲಾಗಿದೆ.. ತಾಳ್ಮೆಯಿಂದ ಕಾಯೋಣ: ಸತೀಶ್​ ಜಾರಕಿಹೊಳಿ

ತಮ್ಮ ವಿರುದ್ಧ ಷಡ್ಯಂತ್ರವಾಗಿದೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಸಂಬಂಧಿಸಿ ಮಾತನಾಡಿದ ಸತೀಶ್​ ಜಾರಕಿಹೊಳಿ, ಕಾನೂನು ಯಾರ ವಿರುದ್ಧವೂ ಅಲ್ಲ. ಯಾವ ಪಕ್ಷದ ಪರವೂ ಕಾನೂನು ಇಲ್ಲ. ಎಲ್ಲರಿಗೂ ಇರೋದು ಒಂದೇ ಕಾನೂನು.

ನಿನ್ನೆಯಷ್ಟೇ ದೂರು ದಾಖಲಾಗಿದೆ.. ತಾಳ್ಮೆಯಿಂದ ಕಾಯೋಣ: ಸತೀಶ್​ ಜಾರಕಿಹೊಳಿ
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
shruti hegde
| Edited By: |

Updated on: Mar 14, 2021 | 3:46 PM

Share

ಧಾರವಾಡ: ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣವು ಏನೆಲ್ಲಾ ತಿರುವು ಪಡೆದರೂ ಅಂತಿಮವಾಗಿ ಪೊಲೀಸರೇ ತನಿಖೆ ನಡೆಸಿ ಇದೆಲ್ಲದಕ್ಕೆ ಮಂಗಳ ಹಾಡಬೇಕು. ನಿನ್ನೆಯಷ್ಟೇ ದೂರು ದಾಖಲಾಗಿದೆ. ತನಿಖೆಗೆ ಇನ್ನೂ 90 ದಿನ ಸಮಯವಿದೆ. ರಮೇಶ್​ ಜಾರಕಿಹೊಳಿ ಜೊತೆ ನಾನು ಈ ಬಗ್ಗೆ ಮಾತನಾಡಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ ಹೇಳಿದ್ದಾರೆ.

ರಮೇಶ್​ ಮೇಲೆ ಯುವತಿಯ ಆರೋಪಗಳ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ಇದೆಲ್ಲವನ್ನು ಪರಿಹಾರ ಮಾಡೋದು ಪೊಲೀಸರಿಗೆ ಮಾತ್ರವೇ ಸಾಧ್ಯ. ನಾವು ಏನೇ ಹೇಳಿದರೂ ನಮ್ಮ ಪರವಾಗಿ ಹೇಳುತ್ತೇವೆ. ಈ ಪ್ರಕರಣದಲ್ಲಿ ಭಾಗಿಯಾದವರೆನ್ನೆಲ್ಲ ತನಿಖೆಯ ಮೂಲಕ ಪೊಲೀಸರೇ ಪತ್ತೆಹಚ್ಚುತ್ತಾರೆ. ಯುವತಿಯನ್ನೂ ಪೋಲೀಸರೇ ಹುಡುಕುತ್ತಾರೆ. ವಿಡಿಯೋ‌ ನಕಲಿಯೋ ಅಥವಾ ಅಸಲಿಯೋ ಎಂಬ ವಿಚಾರಕ್ಕೆ ಸಂಬಂಧಿಸಿ, ತಾಂತ್ರಿಕವಾಗಿ ಮತ್ತು ಕಾನೂನಾತ್ಮಕವಾಗಿ ಏನೂ ಹೇಳೋಕೆ ಆಗುವುದಿಲ್ಲ ಎಂದು ಹೇಳಿದ್ದಾರೆ.

ತಮ್ಮ ವಿರುದ್ಧ ಷಡ್ಯಂತ್ರವಾಗಿದೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಸಂಬಂಧಿಸಿ ಮಾತನಾಡಿದ ಸತೀಶ್​ ಜಾರಕಿಹೊಳಿ, ಕಾನೂನು ಯಾರ ವಿರುದ್ಧವೂ ಅಲ್ಲ. ಯಾವ ಪಕ್ಷದ ಪರವೂ ಕಾನೂನು ಇಲ್ಲ. ಎಲ್ಲರಿಗೂ ಇರೋದು ಒಂದೇ ಕಾನೂನು. ಸತ್ಯಾಂಶ ಹೊರಗೆ ಬಂದೇ ಬರುತ್ತದೆ. ಯಾರೇ ಷಡ್ಯಂತ್ರ ಮಾಡಿದರೂ ಅದಕ್ಕೆಲ್ಲ ಕಾನೂನು ಇದ್ದೇ ಇದೆ. ಈ ಪ್ರಕರಣದಲ್ಲಿ ಅವಸರ ಮಾಡುವುದು ಬೇಡ. ಈಗಷ್ಟೇ ದೂರು ದಾಖಲಾಗಿದೆ. ತಾಳ್ಮೆಯಿಂದ ಕಾಯೋಣ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಅಳಿಯ ಅಂಬಿರಾವ್ ಪಾಟೀಲ್ ಮಾತನ್ನು ಬಿಟ್ಟು ಬೇರೆ ಯಾರ ಮಾತನ್ನೂ ರಮೇಶ್​ ಕೇಳಲ್ಲ: ಸತೀಶ್​ ಜಾರಕಿಹೊಳಿ

ಇದನ್ನೂ ಓದಿ: ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂಬ ಡಿಕೆಶಿ ಹೇಳಿಕೆಗೆ ಸತೀಶ್ ಜಾರಕಿಹೊಳಿ ತಿರುಗೇಟು

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!