AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಭ್ರಷ್ಟರೆಲ್ಲರೂ ಸತೀಶ್ ಸೈಲ್ ಹಾದಿ ಹಿಂಬಾಲಿಸಬೇಕಾದ ಸ್ಥಿತಿ ಎದುರಾಗಲಿದೆ: ವಿಜಯೇಂದ್ರ

ಕಾಂಗ್ರೆಸ್ ಶಾಸಕ ಸತೀಶ್ ಶೈಲ್ ಅವರು ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ತಪ್ಪಿತಸ್ಥರೆಂದು ನ್ಯಾಯಾಲಯ ತೀರ್ಪು ನೀಡಿದ ಬೆನ್ನಲ್ಲೇ ಕಾಂಗ್ರೆಸ್‌ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. ಮುಡಾ ಮತ್ತು ಇತರ ಹಗರಣಗಳನ್ನು ಉಲ್ಲೇಖಿಸಿ, ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರವನ್ನು ಬಿಜೆಪಿ ಖಂಡಿಸಿದೆ. ಈ ತೀರ್ಪು ರಾಜ್ಯದಲ್ಲಿನ ಭ್ರಷ್ಟಾಚಾರ ವಿರುದ್ಧದ ಹೋರಾಟಕ್ಕೆ ಹೊಸ ತಿರುವು ನೀಡಿದೆ ಎಂದು ಬಿಜೆಪಿ ಪ್ರತಿಪಾದಿಸಿದೆ.

ಕಾಂಗ್ರೆಸ್ ಭ್ರಷ್ಟರೆಲ್ಲರೂ ಸತೀಶ್ ಸೈಲ್ ಹಾದಿ ಹಿಂಬಾಲಿಸಬೇಕಾದ ಸ್ಥಿತಿ ಎದುರಾಗಲಿದೆ: ವಿಜಯೇಂದ್ರ
ಬಿವೈ ವಿಜಯೇಂದ್ರ
ಗಣಪತಿ ಶರ್ಮಾ
|

Updated on: Oct 25, 2024 | 12:09 PM

Share

ಬೆಂಗಳೂರು, ಅಕ್ಟೋಬರ್ 25: ಅಕ್ರಮವಾಗಿ ಅದಿರು ಸಾಗಾಟ ಮಾಡಿದ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ತಪ್ಪಿತಸ್ಥ ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪಿತ್ತ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ‘ಕೈ’ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್​​ ಮೂಲಕ ಕಾಂಗ್ರೆಸ್ ವಿರುದ್ಧ ಗುಡುಗಿರುವ ಅವರು, ಸತೀಶ್ ಸೈಲ್ ವಿರುದ್ಧದ ತೀರ್ಪು ಕಾಂಗ್ರೆಸ್ ಸರ್ಕಾರದ ಭ್ರಷ್ಟರೆಲ್ಲರೂ ಅವರ ಹಾದಿಯನ್ನು ಹಿಂಬಾಲಿಸಬೇಕಾದ ಸ್ಥಿತಿ ಎದುರಾಗಲಿದೆ ಎಂಬುದರ ಸ್ಪಷ್ಟ ಸೂಚನೆಯಾಗಿದೆ ಎಂದಿದ್ದಾರೆ.

ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ತಪ್ಪಿತಸ್ಥರೆಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪು ಈ ನೆಲದ ಕಾನೂನು ಅದೆಷ್ಟು ಗಟ್ಟಿಯಾಗಿದೆ ಎನ್ನುವುದನ್ನು ನಿರೂಪಿಸಿದೆ. ಈ ತೀರ್ಪು ಮುಡಾ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಗಳಂತಹ ಲೂಟಿಕೋರತನ ಹಾಗೂ ಭ್ರಷ್ಟತೆಯ ಆರೋಪ ಎದುರಿಸುತ್ತಿರುವವರ ಮುಖಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ವಿಜಯೇಂದ್ರ ಉಲ್ಲೇಖಿಸಿದ್ದಾರೆ.

ಅಕ್ರಮ ಅದಿರು ಸಾಗಣೆ ಮಾಡಿ ರಾಜ್ಯದ ಬೊಕ್ಕಸಕ್ಕೆ 200 ಕೋಟಿ ರೂಪಾಯಿಗೂ ಹೆಚ್ಚಿನ ನಷ್ಟ ಉಂಟು ಮಾಡಿದ, ಆರು ಕ್ರಿಮಿನಲ್ ಆರೋಪಗಳಲ್ಲಿ ದೋಷಿಯಾಗಿ ಜೈಲು ಸೇರಿರುವ ಸತೀಶ್ ಸೈಲ್ ಅವರ ವಿರುದ್ಧ ಬಂದಿರುವ ತೀರ್ಪು ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಆರೋಪಿತರಾಗಿರುವ ಕಾಂಗ್ರೆಸ್ ಸರ್ಕಾರದ ಭ್ರಷ್ಟರೆಲ್ಲರೂ ಸತೀಶ್ ಸೈಲ್ ರವರ ಹಾದಿಯನ್ನು ಹಿಂಬಾಲಿಸಬೇಕಾದ ಸ್ಥಿತಿ ಎದುರಾಗಲಿದೆ ಎಂಬುದರ ಸ್ಪಷ್ಟ ಸೂಚನೆಯಾಗಿದೆ. ಮುಡಾ ಹಗರಣದ ಕುರಿತು ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿಯನ್ನು ಎತ್ತಿ ಹಿಡಿದಿರುವ ಉಚ್ಛ ನ್ಯಾಯಾಲಯದ ಸುದೀರ್ಘ ತೀರ್ಪಿನಲ್ಲಿ ಹಗರಣದ ಕುರಿತಾದ ಉಲ್ಲೇಖಗಳು ಸ್ಪಷ್ಟವಾಗಿ ನಮೂದಾಗಿವೆ. ಈ ನಿಟ್ಟಿನಲ್ಲಿ ಇಡಿ ಹಾಗೂ ಲೋಕಾಯುಕ್ತದಲ್ಲಿ ತನಿಖೆಯೂ ಸಾಗಿದೆ, ಹೀಗಾಗಿಯೂ ಭಂಡತನ ಮೆರೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕ ಸತೀಶ್ ಸೈಲ್ ವಿರುದ್ಧದ ತೀರ್ಪಿನಿಂದಾದರೂ ಎಚ್ಚೆತ್ತುಕೊಂಡು ನೈತಿಕತೆ ಮೆರೆದರೆ ಭವಿಷ್ಯತ್ತಿನಲ್ಲಿ ಅವರು ಕಿಂಚಿತ್ತಾದರೂ ಗೌರವ ಉಳಿಸಿಕೊಳ್ಳಬಹುದು. ಇಲ್ಲದಿದ್ದರೆ ನ್ಯಾಯಾಲಯವೇ ಅವರಿಗೆ ಹಾದಿ ತೋರುವ ಪರಿಸ್ಥಿತಿ ಉದ್ಭವಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂಬುದು ಸತೀಶ್ ಸೈಲ್ ಪ್ರಕರಣದ ತೀರ್ಪು ತಿಳಿಸಿಕೊಟ್ಟಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್‌ ಶಾಸಕ ಸತೀಶ್ ಸೈಲ್ ಇನ್​ ಜೈಲ್: ಶಾಸಕ ಸ್ಥಾನ ಅನರ್ಹ ಭೀತಿ!

ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಾಟ ಮಾಡಿದ ಪ್ರಕರಣದಲ್ಲಿ ಸುಮಾರು 14 ವರ್ಷಗಳ ನಂತರ ತೀರ್ಪು ಪ್ರಕಟವಾಗಿದೆ. ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ತಪ್ಪಿತಸ್ಥರು ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ಗುರುವಾರ ಆದೇಶ ಪ್ರಕಟಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ
ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಹೆಚ್​​ಡಿಕೆ
ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಹೆಚ್​​ಡಿಕೆ