AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವರ್ಕರ್​​ ಫ್ಲೆಕ್ಸ್ ವಿವಾದ: ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ನಿಷೇಧಾಜ್ಞೆ ಮುಂದುವರಿಕೆ

ವೀರ ಸಾವರ್ಕರ್​​ ಫ್ಲೆಕ್ಸ್ ವಿಚಾರದಲ್ಲಿ ನಡೆದ ಗಲಾಟೆ ಹಾಗೂ ಪ್ರೇಮ್​ಸಿಂಗ್​ಗೆ ಚಾಕು ಇರಿತ ಪ್ರಕರಣ ಸಂಬಂಧ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ಜಾರಿ ಮಾಡಲಾದ ನಿಷೇಧಾಜ್ಞೆಯನ್ನು ಮುಂದುವರಿಕೆ ಮಾಡಲಾಗಿದೆ.

ಸಾವರ್ಕರ್​​ ಫ್ಲೆಕ್ಸ್ ವಿವಾದ: ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ನಿಷೇಧಾಜ್ಞೆ ಮುಂದುವರಿಕೆ
ಶಿವಮೊಗ್ಗದಲ್ಲಿ ನಿಷೇದಾಜ್ಞೆ
TV9 Web
| Edited By: Rakesh Nayak Manchi|

Updated on:Aug 18, 2022 | 10:44 AM

Share

ಶಿವಮೊಗ್ಗ: ವೀರ ಸಾವರ್ಕರ್​​ ಫ್ಲೆಕ್ಸ್ ವಿಚಾರದಲ್ಲಿ ನಡೆದ ಗಲಾಟೆ ಹಾಗೂ ಪ್ರೇಮ್​ಸಿಂಗ್​ಗೆ ಚಾಕು ಇರಿತ ಪ್ರಕರಣ ಸಂಬಂಧ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ಜಾರಿ ಮಾಡಲಾದ ನಿಷೇಧಾಜ್ಞೆಯನ್ನು ಮುಂದುವರಿಕೆ ಮಾಡಲಾಗಿದೆ. ಇಂದು ರಾತ್ರಿ 10 ಗಂಟೆವರೆಗೂ ನಿಷೇಧಾಜ್ಞೆ ಮುಂದುವರಿಕೆ ಮಾಡಿ ಜಿಲ್ಲಾಧಿಕಾರಿ ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಅಲ್ಲದೆ ಶಿವಮೊಗ್ಗದ ಅಮೀರ್ ಅಹ್ಮದ್ ವೃತ್ತದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಡೆಸಲಾಗಿದ್ದು, ಪೊಲೀಸ್ ಸಿಬ್ಬಂದಿಗಳು ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ.

ಅ. 15 ರಂದು ನಡೆದ ಗಲಾಟೆ ಬಳಿಕ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಶಾಲಾ ಕಾಲೇಜುಗಳು ಬುಧವಾರದಿಂದ ಪುನರಾರಂಭವಾಗಿವೆ, ಅದಾಗ್ಯೂ ನಗರದಲ್ಲಿ ಬಿಗುವಿನ ವಾತಾವರಣ ಮುಂದುವರಿದಿದೆ. ಈ ನಿಟ್ಟಿನಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟು ನಿಟ್ಟಿನ ಕ್ರಮಗೊಳ್ಳಲಾಗುತ್ತಿದ್ದು, ಬೈಕ್ ಮತ್ತು ಕಾರುಗಳು ಸೇರಿದಂಯೆ ಇನ್ನಿತರ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ.

ನಿಷೇಧಾಜ್ಞೆಗೆ ವ್ಯಾಪಾರ ತತ್ತರ

ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಮುಂದುವರಿಸಿ ಆದೇಶಿಸಲಾಗಿದ್ದು, ವ್ಯಾಪಾರ ವಹಿವಾಟುಗಳು ನಡೆಯದೆ ವ್ಯಾಪಾರಸ್ಥರು ಕಂಗಾಲಾಗಿದ್ದಾರೆ. ಶಿವಮೊಗ್ಗ ಗಾಂಧಿ ಬಜಾರ್​ನಲ್ಲಿ ಮೂರು ದಿನಗಳಿಂದ ವ್ಯಾಪಾರ ವಹಿವಾಟು ಇಲ್ಲದೇ ವ್ಯಾಪಾರಸ್ಥರು ನಷ್ಟ ಅನುಭವಿಸುತ್ತಿದ್ದಾರೆ. ಹಬ್ಬ ಹರಿದಿನಗಳ ದಿನದಲ್ಲಿ ಮಾರುಕಟ್ಟೆ ಬಂದ್ ಮಾಡಿದರೆ ಏನು ಮಾಡಬೇಕು, ತಪ್ಪು ಮಾಡಿದವರ ಮೇಲೆ ಗುಂಡು ಹಾರಿಸಿ. ಅವರನ್ನು ಗಲ್ಲಿಗೇರಿಸಿ. ಯಾರೋ ಮಾಡಿದ ತಪ್ಪಿಗೆ ನಮಗೆ ಶಿಕ್ಷೆ ಆಗುತ್ತಿದೆ, ವ್ಯಾಪಾರ ಇಲ್ಲದೆ ದೊಡ್ಡ ನಷ್ಟ ಆಗಿದೆ ಎಂದು ಟಿವಿ9 ಮೂಲಕ ವ್ಯಾಪಾರಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಗಾಂಧಿ ಬಜಾರ್​ನಲ್ಲೂ ಬಿಗುವಿನ ವಾತಾವರಣದ ನಡುವೆ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಐಜಿಪಿ ಪೂರ್ಣ ವಲಯ ತ್ಯಾಗರಾಜನ್ ಅವರು ಭೇಟಿ ನೀಡಿ ಭದ್ರತೆ ಪರಿಶೀಲನೆ ನಡೆಸಿದ್ದಾರೆ. ಶಿವಪ್ಪ ನಾಯಕ ವೃತ್ತದಲ್ಲಿಯೂ ಬಿಗಿ ಬಂದೋಬಸ್ತ್ ವಹಿಸಲಾಗಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:44 am, Thu, 18 August 22

Follow Us
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್
ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಡಿಕೆ ಶಿವಕುಮಾರ್
ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಡಿಕೆ ಶಿವಕುಮಾರ್
ಅಕ್ರಮವಾಗಿ ಸ್ಫೋಟಕಗಳ ಸಾಗಾಟ: 600 ಜಿಲೆಟಿನ್, 100 ಡಿಟೋನೇಟರ್ ಜಪ್ತಿ
ಅಕ್ರಮವಾಗಿ ಸ್ಫೋಟಕಗಳ ಸಾಗಾಟ: 600 ಜಿಲೆಟಿನ್, 100 ಡಿಟೋನೇಟರ್ ಜಪ್ತಿ
ಭಾರಿ ಮಳೆಯಿಂದ ದೆಹಲಿ ವಿಮಾನ ನಿಲ್ದಾಣ ಜಲಾವೃತ; ಪ್ರಯಾಣಿಕರ ಪರದಾಟ
ಭಾರಿ ಮಳೆಯಿಂದ ದೆಹಲಿ ವಿಮಾನ ನಿಲ್ದಾಣ ಜಲಾವೃತ; ಪ್ರಯಾಣಿಕರ ಪರದಾಟ
ಬೆಂಗಳೂರಿಗರೇ ಎಚ್ಚರ: ನಗರದಲ್ಲಿ ಟೋಯಿಂಗ್ ಕಾರ್ಯಾಚರಣೆ ಪುನರಾರಂಭ!
ಬೆಂಗಳೂರಿಗರೇ ಎಚ್ಚರ: ನಗರದಲ್ಲಿ ಟೋಯಿಂಗ್ ಕಾರ್ಯಾಚರಣೆ ಪುನರಾರಂಭ!
‘ಮೈಮೇಲೆ ಪ್ರಜ್ಞೆ ಇರಬೇಕು’: ಮಗ ಮಾಡಿದ ಕೃತ್ಯದ ಬಗ್ಗೆ ವಿಜಯ್ ಸಿಟ್ಟು
‘ಮೈಮೇಲೆ ಪ್ರಜ್ಞೆ ಇರಬೇಕು’: ಮಗ ಮಾಡಿದ ಕೃತ್ಯದ ಬಗ್ಗೆ ವಿಜಯ್ ಸಿಟ್ಟು
ಮೈಸೂರು ಯುವ ದಸರಾ ಉದ್ಘಾಟಕರಾಗಿ ನೃತ್ಯ ನಿರ್ದೇಶಕ ಪ್ರಭುದೇವ್ ಆಯ್ಕೆ
ಮೈಸೂರು ಯುವ ದಸರಾ ಉದ್ಘಾಟಕರಾಗಿ ನೃತ್ಯ ನಿರ್ದೇಶಕ ಪ್ರಭುದೇವ್ ಆಯ್ಕೆ