AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ಳಾಟವಾಡ್ತಿದ್ದ ಬ್ಯಾಂಕ್​ಗಳಿಗೆ ಬಿಸಿ ಮುಟ್ಟಿಸಿದ್ದ ಸಿಎಂ, ಸರ್ಕಾರದ ಖಜಾನೆಗೆ ವಾಪಸ್ ಬಂತು 22 ಕೋಟಿ ರೂ.

ನಿಶ್ಚಿತ ಠೇವಣಿಯನ್ನು ಮರುಪಾವತಿಸದೇ ಸರ್ಕಾರದ ಜೊತೆ ಕಳ್ಳಾಟವಾಡುತ್ತಿದ್ದ ಭಾರತೀಯ ಸ್ಟೇಟ್ ಬ್ಯಾಂಕ್ ಮತ್ತು ಪಂಜಾಬ್ ನ್ಯಾಶನಲ್ ಬ್ಯಾಂಕ್ ಸಿದ್ದರಾಮಯ್ಯ ಬಿಸಿ ಮುಟ್ಟಿಸಿದ್ದು, ಇದರ ಬೆನ್ನಲ್ಲೇ ಈ ಎರಡೂ ಬ್ಯಾಂಕ್​ಗಳು, ಸರ್ಕಾರಕ್ಕೆ ನಿಶ್ಚಿತ ಠೇವಣಿಯನ್ನು ಮರುಪಾವತಿಸಿವೆ. ಸರ್ಕಾರದ ಒಂದೇ ಆದೇಶಕ್ಕೆ ಬ್ಯಾಂಕ್​ಗಳಿಂದ ವಾಪಸ್ ಬಂತು 22 ಕೋಟಿ ರೂಪಾಯಿ ಬಂದಿದೆ.

ಕಳ್ಳಾಟವಾಡ್ತಿದ್ದ ಬ್ಯಾಂಕ್​ಗಳಿಗೆ ಬಿಸಿ ಮುಟ್ಟಿಸಿದ್ದ ಸಿಎಂ, ಸರ್ಕಾರದ ಖಜಾನೆಗೆ ವಾಪಸ್ ಬಂತು 22 ಕೋಟಿ ರೂ.
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Sep 03, 2024 | 7:10 PM

Share

ಬೆಂಗಳೂರು, (ಸೆಪ್ಟೆಂಬರ್ 03): ಸಿದ್ದರಾಮಯ್ಯ ಬಿಸಿಮುಟ್ಟಿಸಿದ ಬೆನ್ನಲ್ಲೇ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ ಬಿಐ) ಹಾಗೂ ಪಂಜಾಬ್ ನ್ಯಾಶನಲ್ ಬ್ಯಾಂಕ್ (ಪಿಎನ್ ಬಿ)ನಿಂದ ಸರ್ಕಾರಕ್ಕೆ ವಾಪಸ್ 22 ಕೋಟಿ ರೂಪಾಯಿ ಬಂದಿದೆ. ಈ ಹಿಂದೆ ಮಾಡಿದ್ದ ಎರಡು ಪ್ರತ್ಯೇಕ ನಿಶ್ಚಿತ ಠೇವಣಿಗಳನ್ನು ಹಿಂದಿರುಗಿಸಲು ಎಸ್ ಬಿಐ ಹಾಗೂ ಪಿಎನ್ ಬಿ ನಿರಾಕರಿಸಿದ್ದವು. ಇದರ ಬೆನ್ನಲ್ಲೇ ಈ ಎರಡೂ ಬ್ಯಾಂಕಿನಲ್ಲಿ ಇರಿಸಿರುವ ಸರ್ಕಾರದ ಎಲ್ಲ ಠೇವಣಿಗಳನ್ನು ಹಿಂಪಡೆಯುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಇದರ ಬೆನ್ನಲ್ಲೇ ಬ್ಯಾಂಕ್​ಗಳು ಸರ್ಕಾರಕ್ಕೆ ನಿಶ್ಚಿತ ಠೇವಣಿಯನ್ನು ಮರುಪಾವತಿಸಿವೆ. ಈ ಮೂಲಕ ಸರ್ಕಾರಕ್ಕೆ 22 ಕೋಟಿ ರೂಪಾಯಿ ಬಂದಿದೆ.

ರಾಜ್ಯ ಸರ್ಕಾರದ ಒಂದೇ ಒಂದು ಆದೇಶಕ್ಕೆ ಬೆದರಿದ ಬ್ಯಾಂಕ್​ಗಳು ವರ್ಷಗಟ್ಟಲೇ ಬಾಕಿಯಿದ್ದ 22 ಕೋಟಿ ರೂ. ಹಣ ಸರ್ಕಾರದ ಖಜಾನೆಗೆ ಜಮೆ ಮಾಡಿವೆ. ಎಸ್‌ಬಿಐನಿಂದ 9.67 ಕೋಟಿ ರೂಪಾಯಿ ಸರ್ಕಾರದ ಖಜಾನೆಗೆ ಜಮೆಯಾಗಿದೆ. ಇನ್ನು ಪಿಎನ್‌ಬಿನಿಂದ ಒಂದು ವರ್ಷದ ಬಡ್ಡಿ ಸಹಿತ 13.9 ಕೋಟಿ ರೂ. ಜಮೆಯಾಗಿದೆ.

ಇದನ್ನೂ ಓದಿ: ಖಾತೆಗಳ ಸ್ಥಗಿತಕ್ಕೆ ಬೆಚ್ಚಿದ ಎಸ್‌ಬಿಐ, ಪಂಜಾಬ್‌ ಬ್ಯಾಂಕ್‌: ಸಿಎಂ ಜತೆಗಿನ ಸಂಧಾನ ಸಭೆ ಯಶಸ್ವಿ

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಸರ್ಕಾರಕ್ಕೆ ಬರಬೇಕಿದ್ದ 22 ಕೋಟಿ ರೂ. ಹಣವನ್ನು ನೀಡಿದೆ ವರ್ಷಗಟ್ಟಲೇ ಬಾಕಿ ಉಳಿಸಿಕೊಂಡಿದ್ದವು. ಈ ಬಗ್ಗೆ ಸರ್ಕಾರ ಎಷ್ಟೇ ಪತ್ರ ಬರೆದರೂ ಸಹ ನಿಶ್ಚಿತ ಠೇವಣಿಗಳನ್ನು ಹಿಂದಿರುಗಿಸಲು ಬ್ಯಾಂಕ್​ಗಳು ನಿರಾಕರಿಸಿದ್ದವು. ಇದರಿಂದ ಸಿಡಿಮಿಡಿಗೊಂಡಿದ್ದ ಸಿದ್ದರಾಮಯ್ಯ, ಈ 2 ಬ್ಯಾಂಕ್‌ಗಳಲ್ಲಿದ್ದ ಸರ್ಕಾರದ ಎಲ್ಲಾ ಖಾತೆ ಕ್ಲೋಸ್‌ ಮಾಡುವಂತೆ ಸುತ್ತೋಲೆ ಹೊರಡಿಸಿದ್ದರು. ಸರ್ಕಾರದ ಈ ನಿರ್ಧಾರಕ್ಕೆ ಕಂಗೆಟ್ಟು ಎರಡೂ ಬ್ಯಾಂಕಿನ ಅಧಿಕಾರಿಗಳು, ಸಿದ್ದರಾಮಯ್ಯನವರ ಬಳಿ ಓಡೋಡಿ ಬಂದು ಶೀಘ್ರದಲ್ಲೇ ಶ್ಚಿತ ಠೇವಣಿ ಮರುಪಾವತಿಸುವುದಾಗಿ ಹೇಳಿದ್ದರು. ಅದರಂತೆ ಇದೀಗ ಎರಡು ಬ್ಯಾಂಕ್​ಗಳಿಂದ ಸರ್ಕಾರದ ಖಜಾನೆಗೆ ಬರೋಬ್ಬರಿ 22 ಕೋಟಿ ರೂಪಾಯಿ ವಾಪಸ್ ಬಂದಿದೆ.

ಖಾತೆ ಸ್ಥಗಿತಕ್ಕೆ ಆದೇಶಿಸಿದ್ದ ಸರ್ಕಾರ

ರಾಜ್ಯ ಸರ್ಕಾರದ ಇಲಾಖೆಗಳು, ಸಾರ್ವಜನಿಕ ಉದ್ದಿಮೆಗಳು, ನಿಗಮಗಳು, ಮಂಡಳಿಗಳು, ಸ್ಥಳೀಯ ಸಂಸ್ಥೆಗಳು ವಿಶ್ವವಿದ್ಯಾಲಯಗಳು, ಮತ್ತಿತರ ಸಂಸ್ಥೆಗಳು ಮಾಡಿರುವ ಎಲ್ಲಾ ರೀತಿಯ ಠೇವಣಿಗಳನ್ನು/ಹೂಡಿಕೆಗಳನ್ನು ತಕ್ಷಣದಿಂದ ಹಿಂಪಡೆಯುವಂತೆ ಹಾಗೂ ಇನ್ನು ಮುಂದೆ ಈ ಬ್ಯಾಂಕುಗಳಲ್ಲಿ ಯಾವುದೇ ರೀತಿಯ ಠೇವಣಿಗಳನ್ನು/ ಹೂಡಿಕೆಗಳನ್ನು ಮಾಡಬಾರದು ಎಂದು ಸುತ್ತೋಲೆಯಲ್ಲಿ ಆದೇಶಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?