AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಶಿಷ್ಟ ಜಾತಿ ಒಳ ಮೀಸಲಾತಿ: ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವಂತೆ ಸಿದ್ದರಾಮಯ್ಯಗೆ ಶಾಸಕರ ಒತ್ತಾಯ

ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೆ ಯಾವುದೇ ಗೊಂದಲ ಇಲ್ಲದೆ ಸಹಮತ ಮೂಡಿಸುವ ಉದ್ದೇಶದಿಂದ ಗೃಹ ಸಚಿವ ಜಿ ಪರಮೇಶ್ವರ್​ ನೇತೃತ್ವದಲ್ಲಿ ಸೋಮವಾರ (ಅ.21) ರಂದು ಸದಾಶಿವನಗರದ ಗೃಹ ಕಚೇರಿಯಲ್ಲಿ ಪರಿಶಿಷ್ಟ ಸಮುದಾಯಗಳ ಸಚಿವರು ಹಾಗೂ ಶಾಸಕರ ಸಭೆ ನಡೆಯಿತು. ಸಭೆಯಲ್ಲಿ ಹಲವು ನಿರ್ಣಯ ಕೈಗೊಳ್ಳಲಾಗಿದೆ.

ಪರಿಶಿಷ್ಟ ಜಾತಿ ಒಳ ಮೀಸಲಾತಿ: ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವಂತೆ ಸಿದ್ದರಾಮಯ್ಯಗೆ ಶಾಸಕರ ಒತ್ತಾಯ
ಜಿ ಪರಮೇಶ್ವರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Oct 22, 2024 | 11:33 AM

Share

ಬೆಂಗಳೂರು, ಅಕ್ಟೋಬರ್​ 22: ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ (G Parmeshwar) ನೇತೃತ್ವದಲ್ಲಿ ಸೋಮವಾರ ಸಭೆ ನಡೆಯಿತು. ಸಭೆಯಲ್ಲಿ ಉಪ ಜಾತಿಗಳ ಗಣತಿಗೆ ಯಾವ ದತ್ತಾಂಶವನ್ನು ಗಣನೆಗೆ ತೆಗೆದುಕೊಳ್ಳಬೇಕು ಎಂಬುವುದರ ಬಗ್ಗೆ ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಕ್ಕೆ (Union Government) ಪತ್ರ ಬರೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸರ್ಕಾರಕ್ಕೆ ಸೂಚಿಸಲು ನಿರ್ಧರಿಸಲಾಯಿತು.

ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೆ ಯಾವುದೇ ಗೊಂದಲ ಇಲ್ಲದೆ ಸಹಮತ ಮೂಡಿಸುವ ಉದ್ದೇಶದಿಂದ ಗೃಹ ಸಚಿವ ಜಿ ಪರಮೇಶ್ವರ್​ ನೇತೃತ್ವದಲ್ಲಿ ಸೋಮವಾರ (ಅ.21) ರಂದು ಸದಾಶಿವನಗರದ ಗೃಹ ಕಚೇರಿಯಲ್ಲಿ ಪರಿಶಿಷ್ಟ ಸಮುದಾಯಗಳ ಸಚಿವರು ಹಾಗೂ ಶಾಸಕರ ಸಭೆ ನಡೆಯಿತು.

ಒಳ ಮೀಸಲಾತಿ ಜಾರಿಗೊಳಿಸುವ ಸಂಬಂಧ ಆಗಸ್ಟ್​ 1 ರಂದು ಸುಪ್ರೀಂಕೋರ್ಟ್​ ತೀರ್ಪು ನೀಡಿತ್ತು. ಒಳ ಮೀಸಲಾತಿ ಜಾರಿಗೊಳಿಸಲು ರಾಜ್ಯಗಳಿಗೆ ಅಧಿಕಾರವಿದೆ. ಆದರೆ ಅದು ಪರಿಶೀಲಿಸಬಹುದಾದ ಪ್ರಾಯೋಗಿಕ ಡೇಟಾ ಆಧರಿಸಬೇಕು ಎಂದು ಹೇಳಿತ್ತು.

ಇದನ್ನೂ ಓದಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಬಗ್ಗೆ ಮುಖ್ಯಮಂತ್ರಿ ಸ್ಪಷ್ಟತೆ ನೀಡಲಿಲ್ಲ: ಸ್ವಾಮೀಜಿ

ಸೋಮವಾರ ನಡೆದ ಸಭೆಯಲ್ಲಿ ಈ ವಿಚಾರವಾಗಿ ಚರ್ಚಿಸಲಾಗಿದೆ. ಕೇಂದ್ರ ಸರ್ಕಾರದಿಂದ ಸ್ಪಷ್ಟತೆ ಪಡೆದಯದೆ ಎಸ್​ಸಿ ಕೋಟಾದ ವರ್ಗೀಕರಣವನ್ನು ಜಾರಿಗೊಳಿಸುವುದು ಪ್ರತಿಕೂಲವಾಗಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಈ ಸಂಬಂಧ 2011ರ ಜನಗಣತಿ ವರದಿಯನ್ನು ಪರಿಗಣಿಸಬೇಕೇ ಅಥವಾ ಜಾತಿ ಗಣತಿ ಎಂದು ಕರೆಯಲಾಗುವ ಸಾಮಾಜಿಕ-ಆರ್ಥಿಕ ಶೈಕ್ಷಣಿಕ ಸಮೀಕ್ಷೆಯನ್ನು ಪರಿಗಣಿಸಬಹುದೇ ಎಂಬುವುದರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಬೇಕೆಂದು ನಿರ್ಧರಿಸಲಾಗಿದೆ.

ಎಸ್​ಸಿಎಸ್​ಪಿ, ಟಿಎಸ್​ಪಿ ಅನುದಾನ ಬಳಸಿ ಪರಿಶಿಷ್ಟ ಜಾತಿಗಳ ಉಪಜಾತಿಗಳ ಸಮೀಕ್ಷೆ ನಡೆಸುವುದು ಎಂದು ಕೆಲವರು ಸಲಹೆ ನೀಡಿದರು. ಇನ್ನೂ ಕೆಲವುರು ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿಯಲ್ಲಿರುವ ಅಂಕಿಅಂಶಗಳನ್ನು ಪರಿಗಣಿಸುವ ಬಗ್ಗೆ ಸಲಹೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ