AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಶಿಷ್ಟ ಜಾತಿ ಒಳ ಮೀಸಲಾತಿ: ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವಂತೆ ಸಿದ್ದರಾಮಯ್ಯಗೆ ಶಾಸಕರ ಒತ್ತಾಯ

ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೆ ಯಾವುದೇ ಗೊಂದಲ ಇಲ್ಲದೆ ಸಹಮತ ಮೂಡಿಸುವ ಉದ್ದೇಶದಿಂದ ಗೃಹ ಸಚಿವ ಜಿ ಪರಮೇಶ್ವರ್​ ನೇತೃತ್ವದಲ್ಲಿ ಸೋಮವಾರ (ಅ.21) ರಂದು ಸದಾಶಿವನಗರದ ಗೃಹ ಕಚೇರಿಯಲ್ಲಿ ಪರಿಶಿಷ್ಟ ಸಮುದಾಯಗಳ ಸಚಿವರು ಹಾಗೂ ಶಾಸಕರ ಸಭೆ ನಡೆಯಿತು. ಸಭೆಯಲ್ಲಿ ಹಲವು ನಿರ್ಣಯ ಕೈಗೊಳ್ಳಲಾಗಿದೆ.

ಪರಿಶಿಷ್ಟ ಜಾತಿ ಒಳ ಮೀಸಲಾತಿ: ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವಂತೆ ಸಿದ್ದರಾಮಯ್ಯಗೆ ಶಾಸಕರ ಒತ್ತಾಯ
ಜಿ ಪರಮೇಶ್ವರ
ವಿವೇಕ ಬಿರಾದಾರ
|

Updated on: Oct 22, 2024 | 11:33 AM

Share

ಬೆಂಗಳೂರು, ಅಕ್ಟೋಬರ್​ 22: ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ (G Parmeshwar) ನೇತೃತ್ವದಲ್ಲಿ ಸೋಮವಾರ ಸಭೆ ನಡೆಯಿತು. ಸಭೆಯಲ್ಲಿ ಉಪ ಜಾತಿಗಳ ಗಣತಿಗೆ ಯಾವ ದತ್ತಾಂಶವನ್ನು ಗಣನೆಗೆ ತೆಗೆದುಕೊಳ್ಳಬೇಕು ಎಂಬುವುದರ ಬಗ್ಗೆ ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಕ್ಕೆ (Union Government) ಪತ್ರ ಬರೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸರ್ಕಾರಕ್ಕೆ ಸೂಚಿಸಲು ನಿರ್ಧರಿಸಲಾಯಿತು.

ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೆ ಯಾವುದೇ ಗೊಂದಲ ಇಲ್ಲದೆ ಸಹಮತ ಮೂಡಿಸುವ ಉದ್ದೇಶದಿಂದ ಗೃಹ ಸಚಿವ ಜಿ ಪರಮೇಶ್ವರ್​ ನೇತೃತ್ವದಲ್ಲಿ ಸೋಮವಾರ (ಅ.21) ರಂದು ಸದಾಶಿವನಗರದ ಗೃಹ ಕಚೇರಿಯಲ್ಲಿ ಪರಿಶಿಷ್ಟ ಸಮುದಾಯಗಳ ಸಚಿವರು ಹಾಗೂ ಶಾಸಕರ ಸಭೆ ನಡೆಯಿತು.

ಒಳ ಮೀಸಲಾತಿ ಜಾರಿಗೊಳಿಸುವ ಸಂಬಂಧ ಆಗಸ್ಟ್​ 1 ರಂದು ಸುಪ್ರೀಂಕೋರ್ಟ್​ ತೀರ್ಪು ನೀಡಿತ್ತು. ಒಳ ಮೀಸಲಾತಿ ಜಾರಿಗೊಳಿಸಲು ರಾಜ್ಯಗಳಿಗೆ ಅಧಿಕಾರವಿದೆ. ಆದರೆ ಅದು ಪರಿಶೀಲಿಸಬಹುದಾದ ಪ್ರಾಯೋಗಿಕ ಡೇಟಾ ಆಧರಿಸಬೇಕು ಎಂದು ಹೇಳಿತ್ತು.

ಇದನ್ನೂ ಓದಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಬಗ್ಗೆ ಮುಖ್ಯಮಂತ್ರಿ ಸ್ಪಷ್ಟತೆ ನೀಡಲಿಲ್ಲ: ಸ್ವಾಮೀಜಿ

ಸೋಮವಾರ ನಡೆದ ಸಭೆಯಲ್ಲಿ ಈ ವಿಚಾರವಾಗಿ ಚರ್ಚಿಸಲಾಗಿದೆ. ಕೇಂದ್ರ ಸರ್ಕಾರದಿಂದ ಸ್ಪಷ್ಟತೆ ಪಡೆದಯದೆ ಎಸ್​ಸಿ ಕೋಟಾದ ವರ್ಗೀಕರಣವನ್ನು ಜಾರಿಗೊಳಿಸುವುದು ಪ್ರತಿಕೂಲವಾಗಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಈ ಸಂಬಂಧ 2011ರ ಜನಗಣತಿ ವರದಿಯನ್ನು ಪರಿಗಣಿಸಬೇಕೇ ಅಥವಾ ಜಾತಿ ಗಣತಿ ಎಂದು ಕರೆಯಲಾಗುವ ಸಾಮಾಜಿಕ-ಆರ್ಥಿಕ ಶೈಕ್ಷಣಿಕ ಸಮೀಕ್ಷೆಯನ್ನು ಪರಿಗಣಿಸಬಹುದೇ ಎಂಬುವುದರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಬೇಕೆಂದು ನಿರ್ಧರಿಸಲಾಗಿದೆ.

ಎಸ್​ಸಿಎಸ್​ಪಿ, ಟಿಎಸ್​ಪಿ ಅನುದಾನ ಬಳಸಿ ಪರಿಶಿಷ್ಟ ಜಾತಿಗಳ ಉಪಜಾತಿಗಳ ಸಮೀಕ್ಷೆ ನಡೆಸುವುದು ಎಂದು ಕೆಲವರು ಸಲಹೆ ನೀಡಿದರು. ಇನ್ನೂ ಕೆಲವುರು ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿಯಲ್ಲಿರುವ ಅಂಕಿಅಂಶಗಳನ್ನು ಪರಿಗಣಿಸುವ ಬಗ್ಗೆ ಸಲಹೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು