AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಸಾಕುನಾಯಿ ಹೊತ್ತೊಯ್ದ ಚಿರತೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

ಗ್ರಾಮದ ಮಲ್ಲೆಗೌಡ ಎಂಬುವವರ ಸಾಕುನಾಯಿಯನ್ನ ಚಿರತೆಯೊಂದು ರಾತ್ರಿ ಹೊತ್ತೊಯ್ದಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮನೆಯ ಸುರಕ್ಷತೆಗಾಗಿ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಚಿರತೆಯ ಕರಾಮತ್ತು ದಾಖಲಾಗಿದೆ.

ಹಾಸನ: ಸಾಕುನಾಯಿ ಹೊತ್ತೊಯ್ದ ಚಿರತೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ
ಸಿಸಿ ಕ್ಯಾಮರಾದಲ್ಲಿ ಸೆರೆಯಾದ ಚಿರತೆ ಓಡಾಟ
Follow us
TV9 Web
| Updated By: sandhya thejappa

Updated on: Jun 16, 2021 | 2:05 PM

ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆ ಕಾಟ ಜನರನ್ನು ಬೆಂಬಿಡದಂತೆ ಕಾಡುತ್ತಿದ್ದರೆ, ಇತ್ತ ಬಯಲು ಸೀಮೆಯಲ್ಲಿ ಚಿರತೆಗಳು ಜನರಲ್ಲಿ ಜೀವ ಭಯ ಸೃಷ್ಟಿ ಮಾಡುತ್ತಿವೆ. ಹೊಲ ಗದ್ದೆಗಳಲ್ಲಿ ಕಾಣಿಸಿಕೊಂಡು ಭೀತಿ ತರುತ್ತಿದ್ದ ಚಿರತೆಗಳು ಈಗೀಗ ಊರೊಳಗೆ ಬರುವುದಕ್ಕೆ ಶುರುಮಾಡಿವೆ. ಅಹಾರಕ್ಕಾಗಿ ಮನೆಯೊಳಗೆ ನುಗ್ಗುತ್ತಿರುವ ಹಲವು ಪ್ರಕರಣಗಳು ವರದಿಯಾಗುತ್ತಿದ್ದು, ನಿನ್ನೆ (ಜೂನ್ 15) ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಬೈರನಾಯಕನಹಳ್ಳಿ ಗ್ರಾಮದಲ್ಲಿ ಸಾಕು ನಾಯಿಯನ್ನು ಹೊತ್ತೊಯ್ದಿರುವ ಘಟನೆ ನಡೆದಿದೆ.

ಗ್ರಾಮದ ಮಲ್ಲೆಗೌಡ ಎಂಬುವವರ ಸಾಕುನಾಯಿಯನ್ನ ಚಿರತೆಯೊಂದು ರಾತ್ರಿ ಹೊತ್ತೊಯ್ದಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮನೆಯ ಸುರಕ್ಷತೆಗಾಗಿ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಚಿರತೆಯ ಕರಾಮತ್ತು ದಾಖಲಾಗಿದೆ. ಮಧ್ಯರಾತ್ರಿ 2 ಗಂಟೆ 38 ನಿಮಿಷದಲ್ಲಿ ಮನೆ ಬಳಿ ಬಂದಿರುವ ಚಿರತೆ ಮನೆಯ ಸುತ್ತ ಒಂದು ಸುತ್ತು ಹಾಕಿ ಏನಾದರೂ ಅಹಾರ ಸಿಗುತ್ತಾ ಎಂದು ಹುಡುಕಾಡಿದೆ. ಕೊನೆಗೆ ಮನೆಯ ಕಾಂಪೌಂಡ್ ಒಳಗೆ ನಾಯಿಯೊಂದು ನಿದ್ರೆಗೆ ಜಾರಿರುವುದು ಗೊತ್ತಾಗುತ್ತಲೆ ಸದ್ದಿಲ್ಲದೆ ನಾಯಿಯ ಕುತ್ತಿಗೆಗೆ ಬಾಯಿ ಹಾಕಿ ಶ್ವಾನವನ್ನ ಹೊತ್ತೊಯ್ದಿದೆ. ಬೆಳಿಗ್ಗೆ ಎದ್ದು ಮನೆಯ ಮುಂದೆ ನಾಯಿ ಇಲ್ಲದಿರೋದನ್ನ ಗಮನಿಸಿದ ಮನೆಯವರು ಸುತ್ತ ಮುತ್ತ ಹುಡುಕಾಡಿದ್ದಾರೆ.

ಯಾರೋ ಕಳ್ಳರು ನಾಯಿ ಹೊತ್ತೊಯ್ದಿದ್ದಾರಾ ಎಂದು ಮನೆಯಲ್ಲಿದ್ದ ಸಿಸಿ ಟಿವಿ ಪರಿಶೀಲನೆ ನಡೆಸಿದಾಗ ಚಿರತೆ ದೃಶ್ಯ ಸೆರೆಯಾಗಿದೆ. ಮನೆಯ ಸಮೀಪವೇ ಚಿರತೆ ಬಂದು ಹೋಗಿರುವ ವಿಚಾರ ತಿಳಿಯುತ್ತಲೆ ಗ್ರಾಮದಲ್ಲಿ ಆತಂಕ ಹೆಚ್ಚಾಗಿದ್ದು, ಕೂಡಲೆ ಚಿರತೆ ಸೆರೆಗೆ ಜನರು ಒತ್ತಾಯಿಸಿದ್ದಾರೆ.

ಚಿರತೆ ಬಗ್ಗೆ ಮಾಹಿತಿ ಇದ್ದು ಪರಿಶೀಲನೆಗಾಗಿ ನಮ್ಮ ಸಿಬ್ಬಂದಿ ಯನ್ನು ಸ್ಥಳಕ್ಕೆ ಕಳುಹಿಸಿದ್ದೇವೆ. ಮಾಹಿತಿ ಖಚಿತಪಡಿಸಿಕೊಂಡ ಮುಂದಿನ ಕ್ರಮ ವಹಿಸುತ್ತೇವೆ ಎಂದು ಹಾಸನ ಡಿಸಿಎಫ್ ಡಾ.ಬಸವರಾಜ್ ತಿಳಿಸಿದ್ದಾರೆ.

ಇದನ್ನೂ ಓದಿ

Covid Diary : ಕವಲಕ್ಕಿ ಮೇಲ್ ; ಕ್ಷಮಿಸಿ, ತರುಣ ಭಾರತದ ಕಥೆಯಲ್ಲಿ ‘…….‘ ಪದ ಬಹಳಸಲ ಪ್ರಯೋಗಿಸಿದೆ

ಬಾಲ್ಯ ವಿವಾಹ ತಡೆಗೆ ಸುರಕ್ಷಿಣಿ ವೆಬ್​ಸೈಟ್ ಆರಂಭ; ಮೌಢ್ಯ ಪದ್ಧತಿ ನಿವಾರಣೆಗೆ ಬಾಗಲಕೋಟೆ ಜಿಲ್ಲಾಡಳಿತದಿಂದ ನೂತನ ಪ್ರಯೋಗ

(scene where the leopard attacks a dog is captured in cc camera at hassan)

ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ