AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಸಾಕುನಾಯಿ ಹೊತ್ತೊಯ್ದ ಚಿರತೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

ಗ್ರಾಮದ ಮಲ್ಲೆಗೌಡ ಎಂಬುವವರ ಸಾಕುನಾಯಿಯನ್ನ ಚಿರತೆಯೊಂದು ರಾತ್ರಿ ಹೊತ್ತೊಯ್ದಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮನೆಯ ಸುರಕ್ಷತೆಗಾಗಿ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಚಿರತೆಯ ಕರಾಮತ್ತು ದಾಖಲಾಗಿದೆ.

ಹಾಸನ: ಸಾಕುನಾಯಿ ಹೊತ್ತೊಯ್ದ ಚಿರತೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ
ಸಿಸಿ ಕ್ಯಾಮರಾದಲ್ಲಿ ಸೆರೆಯಾದ ಚಿರತೆ ಓಡಾಟ
TV9 Web
| Edited By: |

Updated on: Jun 16, 2021 | 2:05 PM

Share

ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆ ಕಾಟ ಜನರನ್ನು ಬೆಂಬಿಡದಂತೆ ಕಾಡುತ್ತಿದ್ದರೆ, ಇತ್ತ ಬಯಲು ಸೀಮೆಯಲ್ಲಿ ಚಿರತೆಗಳು ಜನರಲ್ಲಿ ಜೀವ ಭಯ ಸೃಷ್ಟಿ ಮಾಡುತ್ತಿವೆ. ಹೊಲ ಗದ್ದೆಗಳಲ್ಲಿ ಕಾಣಿಸಿಕೊಂಡು ಭೀತಿ ತರುತ್ತಿದ್ದ ಚಿರತೆಗಳು ಈಗೀಗ ಊರೊಳಗೆ ಬರುವುದಕ್ಕೆ ಶುರುಮಾಡಿವೆ. ಅಹಾರಕ್ಕಾಗಿ ಮನೆಯೊಳಗೆ ನುಗ್ಗುತ್ತಿರುವ ಹಲವು ಪ್ರಕರಣಗಳು ವರದಿಯಾಗುತ್ತಿದ್ದು, ನಿನ್ನೆ (ಜೂನ್ 15) ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಬೈರನಾಯಕನಹಳ್ಳಿ ಗ್ರಾಮದಲ್ಲಿ ಸಾಕು ನಾಯಿಯನ್ನು ಹೊತ್ತೊಯ್ದಿರುವ ಘಟನೆ ನಡೆದಿದೆ.

ಗ್ರಾಮದ ಮಲ್ಲೆಗೌಡ ಎಂಬುವವರ ಸಾಕುನಾಯಿಯನ್ನ ಚಿರತೆಯೊಂದು ರಾತ್ರಿ ಹೊತ್ತೊಯ್ದಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮನೆಯ ಸುರಕ್ಷತೆಗಾಗಿ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಚಿರತೆಯ ಕರಾಮತ್ತು ದಾಖಲಾಗಿದೆ. ಮಧ್ಯರಾತ್ರಿ 2 ಗಂಟೆ 38 ನಿಮಿಷದಲ್ಲಿ ಮನೆ ಬಳಿ ಬಂದಿರುವ ಚಿರತೆ ಮನೆಯ ಸುತ್ತ ಒಂದು ಸುತ್ತು ಹಾಕಿ ಏನಾದರೂ ಅಹಾರ ಸಿಗುತ್ತಾ ಎಂದು ಹುಡುಕಾಡಿದೆ. ಕೊನೆಗೆ ಮನೆಯ ಕಾಂಪೌಂಡ್ ಒಳಗೆ ನಾಯಿಯೊಂದು ನಿದ್ರೆಗೆ ಜಾರಿರುವುದು ಗೊತ್ತಾಗುತ್ತಲೆ ಸದ್ದಿಲ್ಲದೆ ನಾಯಿಯ ಕುತ್ತಿಗೆಗೆ ಬಾಯಿ ಹಾಕಿ ಶ್ವಾನವನ್ನ ಹೊತ್ತೊಯ್ದಿದೆ. ಬೆಳಿಗ್ಗೆ ಎದ್ದು ಮನೆಯ ಮುಂದೆ ನಾಯಿ ಇಲ್ಲದಿರೋದನ್ನ ಗಮನಿಸಿದ ಮನೆಯವರು ಸುತ್ತ ಮುತ್ತ ಹುಡುಕಾಡಿದ್ದಾರೆ.

ಯಾರೋ ಕಳ್ಳರು ನಾಯಿ ಹೊತ್ತೊಯ್ದಿದ್ದಾರಾ ಎಂದು ಮನೆಯಲ್ಲಿದ್ದ ಸಿಸಿ ಟಿವಿ ಪರಿಶೀಲನೆ ನಡೆಸಿದಾಗ ಚಿರತೆ ದೃಶ್ಯ ಸೆರೆಯಾಗಿದೆ. ಮನೆಯ ಸಮೀಪವೇ ಚಿರತೆ ಬಂದು ಹೋಗಿರುವ ವಿಚಾರ ತಿಳಿಯುತ್ತಲೆ ಗ್ರಾಮದಲ್ಲಿ ಆತಂಕ ಹೆಚ್ಚಾಗಿದ್ದು, ಕೂಡಲೆ ಚಿರತೆ ಸೆರೆಗೆ ಜನರು ಒತ್ತಾಯಿಸಿದ್ದಾರೆ.

ಚಿರತೆ ಬಗ್ಗೆ ಮಾಹಿತಿ ಇದ್ದು ಪರಿಶೀಲನೆಗಾಗಿ ನಮ್ಮ ಸಿಬ್ಬಂದಿ ಯನ್ನು ಸ್ಥಳಕ್ಕೆ ಕಳುಹಿಸಿದ್ದೇವೆ. ಮಾಹಿತಿ ಖಚಿತಪಡಿಸಿಕೊಂಡ ಮುಂದಿನ ಕ್ರಮ ವಹಿಸುತ್ತೇವೆ ಎಂದು ಹಾಸನ ಡಿಸಿಎಫ್ ಡಾ.ಬಸವರಾಜ್ ತಿಳಿಸಿದ್ದಾರೆ.

ಇದನ್ನೂ ಓದಿ

Covid Diary : ಕವಲಕ್ಕಿ ಮೇಲ್ ; ಕ್ಷಮಿಸಿ, ತರುಣ ಭಾರತದ ಕಥೆಯಲ್ಲಿ ‘…….‘ ಪದ ಬಹಳಸಲ ಪ್ರಯೋಗಿಸಿದೆ

ಬಾಲ್ಯ ವಿವಾಹ ತಡೆಗೆ ಸುರಕ್ಷಿಣಿ ವೆಬ್​ಸೈಟ್ ಆರಂಭ; ಮೌಢ್ಯ ಪದ್ಧತಿ ನಿವಾರಣೆಗೆ ಬಾಗಲಕೋಟೆ ಜಿಲ್ಲಾಡಳಿತದಿಂದ ನೂತನ ಪ್ರಯೋಗ

(scene where the leopard attacks a dog is captured in cc camera at hassan)

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?