AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಸಾಕುನಾಯಿ ಹೊತ್ತೊಯ್ದ ಚಿರತೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

ಗ್ರಾಮದ ಮಲ್ಲೆಗೌಡ ಎಂಬುವವರ ಸಾಕುನಾಯಿಯನ್ನ ಚಿರತೆಯೊಂದು ರಾತ್ರಿ ಹೊತ್ತೊಯ್ದಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮನೆಯ ಸುರಕ್ಷತೆಗಾಗಿ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಚಿರತೆಯ ಕರಾಮತ್ತು ದಾಖಲಾಗಿದೆ.

ಹಾಸನ: ಸಾಕುನಾಯಿ ಹೊತ್ತೊಯ್ದ ಚಿರತೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ
ಸಿಸಿ ಕ್ಯಾಮರಾದಲ್ಲಿ ಸೆರೆಯಾದ ಚಿರತೆ ಓಡಾಟ
Follow us
TV9 Web
| Updated By: sandhya thejappa

Updated on: Jun 16, 2021 | 2:05 PM

ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆ ಕಾಟ ಜನರನ್ನು ಬೆಂಬಿಡದಂತೆ ಕಾಡುತ್ತಿದ್ದರೆ, ಇತ್ತ ಬಯಲು ಸೀಮೆಯಲ್ಲಿ ಚಿರತೆಗಳು ಜನರಲ್ಲಿ ಜೀವ ಭಯ ಸೃಷ್ಟಿ ಮಾಡುತ್ತಿವೆ. ಹೊಲ ಗದ್ದೆಗಳಲ್ಲಿ ಕಾಣಿಸಿಕೊಂಡು ಭೀತಿ ತರುತ್ತಿದ್ದ ಚಿರತೆಗಳು ಈಗೀಗ ಊರೊಳಗೆ ಬರುವುದಕ್ಕೆ ಶುರುಮಾಡಿವೆ. ಅಹಾರಕ್ಕಾಗಿ ಮನೆಯೊಳಗೆ ನುಗ್ಗುತ್ತಿರುವ ಹಲವು ಪ್ರಕರಣಗಳು ವರದಿಯಾಗುತ್ತಿದ್ದು, ನಿನ್ನೆ (ಜೂನ್ 15) ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಬೈರನಾಯಕನಹಳ್ಳಿ ಗ್ರಾಮದಲ್ಲಿ ಸಾಕು ನಾಯಿಯನ್ನು ಹೊತ್ತೊಯ್ದಿರುವ ಘಟನೆ ನಡೆದಿದೆ.

ಗ್ರಾಮದ ಮಲ್ಲೆಗೌಡ ಎಂಬುವವರ ಸಾಕುನಾಯಿಯನ್ನ ಚಿರತೆಯೊಂದು ರಾತ್ರಿ ಹೊತ್ತೊಯ್ದಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮನೆಯ ಸುರಕ್ಷತೆಗಾಗಿ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಚಿರತೆಯ ಕರಾಮತ್ತು ದಾಖಲಾಗಿದೆ. ಮಧ್ಯರಾತ್ರಿ 2 ಗಂಟೆ 38 ನಿಮಿಷದಲ್ಲಿ ಮನೆ ಬಳಿ ಬಂದಿರುವ ಚಿರತೆ ಮನೆಯ ಸುತ್ತ ಒಂದು ಸುತ್ತು ಹಾಕಿ ಏನಾದರೂ ಅಹಾರ ಸಿಗುತ್ತಾ ಎಂದು ಹುಡುಕಾಡಿದೆ. ಕೊನೆಗೆ ಮನೆಯ ಕಾಂಪೌಂಡ್ ಒಳಗೆ ನಾಯಿಯೊಂದು ನಿದ್ರೆಗೆ ಜಾರಿರುವುದು ಗೊತ್ತಾಗುತ್ತಲೆ ಸದ್ದಿಲ್ಲದೆ ನಾಯಿಯ ಕುತ್ತಿಗೆಗೆ ಬಾಯಿ ಹಾಕಿ ಶ್ವಾನವನ್ನ ಹೊತ್ತೊಯ್ದಿದೆ. ಬೆಳಿಗ್ಗೆ ಎದ್ದು ಮನೆಯ ಮುಂದೆ ನಾಯಿ ಇಲ್ಲದಿರೋದನ್ನ ಗಮನಿಸಿದ ಮನೆಯವರು ಸುತ್ತ ಮುತ್ತ ಹುಡುಕಾಡಿದ್ದಾರೆ.

ಯಾರೋ ಕಳ್ಳರು ನಾಯಿ ಹೊತ್ತೊಯ್ದಿದ್ದಾರಾ ಎಂದು ಮನೆಯಲ್ಲಿದ್ದ ಸಿಸಿ ಟಿವಿ ಪರಿಶೀಲನೆ ನಡೆಸಿದಾಗ ಚಿರತೆ ದೃಶ್ಯ ಸೆರೆಯಾಗಿದೆ. ಮನೆಯ ಸಮೀಪವೇ ಚಿರತೆ ಬಂದು ಹೋಗಿರುವ ವಿಚಾರ ತಿಳಿಯುತ್ತಲೆ ಗ್ರಾಮದಲ್ಲಿ ಆತಂಕ ಹೆಚ್ಚಾಗಿದ್ದು, ಕೂಡಲೆ ಚಿರತೆ ಸೆರೆಗೆ ಜನರು ಒತ್ತಾಯಿಸಿದ್ದಾರೆ.

ಚಿರತೆ ಬಗ್ಗೆ ಮಾಹಿತಿ ಇದ್ದು ಪರಿಶೀಲನೆಗಾಗಿ ನಮ್ಮ ಸಿಬ್ಬಂದಿ ಯನ್ನು ಸ್ಥಳಕ್ಕೆ ಕಳುಹಿಸಿದ್ದೇವೆ. ಮಾಹಿತಿ ಖಚಿತಪಡಿಸಿಕೊಂಡ ಮುಂದಿನ ಕ್ರಮ ವಹಿಸುತ್ತೇವೆ ಎಂದು ಹಾಸನ ಡಿಸಿಎಫ್ ಡಾ.ಬಸವರಾಜ್ ತಿಳಿಸಿದ್ದಾರೆ.

ಇದನ್ನೂ ಓದಿ

Covid Diary : ಕವಲಕ್ಕಿ ಮೇಲ್ ; ಕ್ಷಮಿಸಿ, ತರುಣ ಭಾರತದ ಕಥೆಯಲ್ಲಿ ‘…….‘ ಪದ ಬಹಳಸಲ ಪ್ರಯೋಗಿಸಿದೆ

ಬಾಲ್ಯ ವಿವಾಹ ತಡೆಗೆ ಸುರಕ್ಷಿಣಿ ವೆಬ್​ಸೈಟ್ ಆರಂಭ; ಮೌಢ್ಯ ಪದ್ಧತಿ ನಿವಾರಣೆಗೆ ಬಾಗಲಕೋಟೆ ಜಿಲ್ಲಾಡಳಿತದಿಂದ ನೂತನ ಪ್ರಯೋಗ

(scene where the leopard attacks a dog is captured in cc camera at hassan)

ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ಜಮೀರ್ ಅಹ್ಮದ್ ಕರೆದರೆ ಹೋಗಿ ಮಾತಾಡುತ್ತೇನೆ: ಬಿಆರ್ ಪಾಟೀಲ್
ಜಮೀರ್ ಅಹ್ಮದ್ ಕರೆದರೆ ಹೋಗಿ ಮಾತಾಡುತ್ತೇನೆ: ಬಿಆರ್ ಪಾಟೀಲ್