AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಜನ ಸಂಕಲ್ಪ ಯಾತ್ರೆಗಾಗಿ ಶಾಲಾ ಕಾಂಪೌಂಡ್ ಧ್ವಂಸ

ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆಯುತ್ತಿರುವ ಜನ ಸಂಕಲ್ಪ ಯಾತ್ರೆಗಾಗಿ ರಾಯಚೂರಿನಲ್ಲಿ ಶಾಲಾಯೊಂದರ ಕಾಂಪೌಂಡ್​ ಅನ್ನು ನೆಲಸಮ ಮಾಡಲಾಗಿದೆ.

ಬಿಜೆಪಿ ಜನ ಸಂಕಲ್ಪ ಯಾತ್ರೆಗಾಗಿ ಶಾಲಾ ಕಾಂಪೌಂಡ್ ಧ್ವಂಸ
ಬಿಜೆಪಿ ಜನ ಸಂಕಲ್ಪ ಯಾತ್ರೆಗಾಗಿ ಶಾಲಾ ಕಾಂಪೌಂಡ್ ಧ್ವಂಸ
TV9 Web
| Edited By: |

Updated on:Oct 11, 2022 | 11:23 AM

Share

ರಾಯಚೂರು: ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ನೇತೃತ್ವದಲ್ಲಿ ನಡೆಯುತ್ತಿರುವ ಜನ ಸಂಕಲ್ಪ ಯಾತ್ರೆಗಾಗಿ ತಾಲ್ಲೂಕಿನ ಗಿಲ್ಲೆಸುಗೂರು ಸರ್ಕಾರಿ ಶಾಲೆಯ ಕಾಂಪೌಂಡ್ ಅನ್ನು ನೆಲಸಮಗೊಳಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆ ಹಿನ್ನೆಲೆ 7 ಅಡಿ ಎತ್ತರ 80 ಅಡಿ ಉದ್ದದ ಸುಸಜ್ಜಿತ ಶಾಲಾ ಗೋಡೆಯನ್ನು ಜೆಸಿಬಿ ಮೂಲಕ ಕೆಡವಿ ಹಾಕಲಾಗಿದ್ದು, ಸುಸಜ್ಜಿತವಾದ ಶಾಲೆಯ ತಡೆಗೋಡೆ ಕೆಡವಿದ್ದಕ್ಕೆ ಸ್ಥಳೀಯರಿಂದ ಆಕ್ರೋಶ ವ್ಯಕ್ತವಾಗಲು ಆರಂಭವಾಗಿದೆ.

ಗಿಲ್ಲೆಸುಗೂರು ಸರ್ಕಾರಿ ಶಾಲೆಯ ಬಳಿ ಮುಖ್ಯಮಂತ್ರಿ ಬೊಮ್ಮಾಯಿ ಅವರ ನೇತೃತ್ವದಲ್ಲಿ ಜನ ಸಂಕಲ್ಪ ಯಾತ್ರೆ ನಡೆಯಲಿದ್ದು, 50 ಸಾವಿರ ಜನ ಸೇರುವ ನಿರೀಕ್ಷೆ ಇಡಲಾಗಿದೆ. ಹೀಗಾಗಿ ಜನರು ನಿಲ್ಲಲು ಸೂಕ್ತ ಸ್ಥಳಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕಟ್ಟಿದ ಶಾಲಾ ಕಾಂಪೌಂಡ್ ಅನ್ನೇ ನೆಲಸಮಗೊಳಿಸಲಾಗಿದೆ. ಸುಮಾರು 7 ಅಡಿ ಎತ್ತರ 80 ಅಡಿ ಉದ್ದದ ಸುಸಜ್ಜಿತ ಶಾಲಾ ಗೋಡೆಯನ್ನು ಒಂದೆರಡು ಗಂಟೆಗಳ ಕಾಲದ ಕಾರ್ಯಕ್ರಮಕ್ಕಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕಟ್ಟಿದ ತಡೆಗೋಡೆಯನ್ನು ನೆಲಸಮಗೊಳಿಸುವುದು ಎಷ್ಟು ಸರಿ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ.

ಮಳೆ ಅಬ್ಬರಕ್ಕೆ ಉರುಳಿ ಬಿದ್ದ ಶಾಮೀಯಾನ್

ಧಾರವಾಡ: ರೈಲ್ವೆ ನಿಲ್ದಾಣ ಮೇಲ್ದರ್ಜೆಗೇರಿಸಿದ ಉದ್ಘಾಟನಾ ಕಾರ್ಯಕ್ರಮಕ್ಕೆ ಹಾಕಿದ್ದ ಪೆಂಡಾಲ್ ಸುರಿದ ಧಾರಾಕಾರ ಮಳೆಗೆ ಉರುಳಿ ಬಿದ್ದ ಘಟನೆ ನಡೆದಿದೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗಮಿಸಲಿರುವ ಹಿನ್ನೆಲೆ ನಿಲ್ದಾಣದ ಪಕ್ಕದಲ್ಲೇ ಶಾಮೀಯಾನ ಹಾಕಲಾಗಿತ್ತು. ಆದರೆ ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಶಾಮಿಯಾನಾ ಕುಸಿದು ಬಿದ್ದಿದೆ. ಸದ್ಯ ಮಳೆ ಹಿನ್ನೆಲೆ ಕಾರ್ಯಕ್ರಮದ ಸ್ಥಳವನ್ನು ಬದಲಾವಣೆ ಮಾಡಲಾಗಿದೆ. ನಿಲ್ದಾಣದ ಹೊರಭಾಗದಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮ ಇದೀಗ ನಿಲ್ದಾಣದ ಒಳಗಡೆ ನಡೆಸಲು ನಿರ್ಧರಿಸಲಾಗಿದೆ. ಅದರಂತೆ ಪ್ಲ್ಯಾಟ್ ಫಾರಂ ಪಕ್ಕದಲ್ಲಿ ಕಾರ್ಯಕ್ರಮದ ವೇದಿಕೆ ತಯಾರಿ ಮಾಡಲಾಗುತ್ತಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:23 am, Tue, 11 October 22

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ