AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಜನ ಸಂಕಲ್ಪ ಯಾತ್ರೆಗಾಗಿ ಶಾಲಾ ಕಾಂಪೌಂಡ್ ಧ್ವಂಸ

ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆಯುತ್ತಿರುವ ಜನ ಸಂಕಲ್ಪ ಯಾತ್ರೆಗಾಗಿ ರಾಯಚೂರಿನಲ್ಲಿ ಶಾಲಾಯೊಂದರ ಕಾಂಪೌಂಡ್​ ಅನ್ನು ನೆಲಸಮ ಮಾಡಲಾಗಿದೆ.

ಬಿಜೆಪಿ ಜನ ಸಂಕಲ್ಪ ಯಾತ್ರೆಗಾಗಿ ಶಾಲಾ ಕಾಂಪೌಂಡ್ ಧ್ವಂಸ
ಬಿಜೆಪಿ ಜನ ಸಂಕಲ್ಪ ಯಾತ್ರೆಗಾಗಿ ಶಾಲಾ ಕಾಂಪೌಂಡ್ ಧ್ವಂಸ
TV9 Web
| Edited By: |

Updated on:Oct 11, 2022 | 11:23 AM

Share

ರಾಯಚೂರು: ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ನೇತೃತ್ವದಲ್ಲಿ ನಡೆಯುತ್ತಿರುವ ಜನ ಸಂಕಲ್ಪ ಯಾತ್ರೆಗಾಗಿ ತಾಲ್ಲೂಕಿನ ಗಿಲ್ಲೆಸುಗೂರು ಸರ್ಕಾರಿ ಶಾಲೆಯ ಕಾಂಪೌಂಡ್ ಅನ್ನು ನೆಲಸಮಗೊಳಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆ ಹಿನ್ನೆಲೆ 7 ಅಡಿ ಎತ್ತರ 80 ಅಡಿ ಉದ್ದದ ಸುಸಜ್ಜಿತ ಶಾಲಾ ಗೋಡೆಯನ್ನು ಜೆಸಿಬಿ ಮೂಲಕ ಕೆಡವಿ ಹಾಕಲಾಗಿದ್ದು, ಸುಸಜ್ಜಿತವಾದ ಶಾಲೆಯ ತಡೆಗೋಡೆ ಕೆಡವಿದ್ದಕ್ಕೆ ಸ್ಥಳೀಯರಿಂದ ಆಕ್ರೋಶ ವ್ಯಕ್ತವಾಗಲು ಆರಂಭವಾಗಿದೆ.

ಗಿಲ್ಲೆಸುಗೂರು ಸರ್ಕಾರಿ ಶಾಲೆಯ ಬಳಿ ಮುಖ್ಯಮಂತ್ರಿ ಬೊಮ್ಮಾಯಿ ಅವರ ನೇತೃತ್ವದಲ್ಲಿ ಜನ ಸಂಕಲ್ಪ ಯಾತ್ರೆ ನಡೆಯಲಿದ್ದು, 50 ಸಾವಿರ ಜನ ಸೇರುವ ನಿರೀಕ್ಷೆ ಇಡಲಾಗಿದೆ. ಹೀಗಾಗಿ ಜನರು ನಿಲ್ಲಲು ಸೂಕ್ತ ಸ್ಥಳಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕಟ್ಟಿದ ಶಾಲಾ ಕಾಂಪೌಂಡ್ ಅನ್ನೇ ನೆಲಸಮಗೊಳಿಸಲಾಗಿದೆ. ಸುಮಾರು 7 ಅಡಿ ಎತ್ತರ 80 ಅಡಿ ಉದ್ದದ ಸುಸಜ್ಜಿತ ಶಾಲಾ ಗೋಡೆಯನ್ನು ಒಂದೆರಡು ಗಂಟೆಗಳ ಕಾಲದ ಕಾರ್ಯಕ್ರಮಕ್ಕಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕಟ್ಟಿದ ತಡೆಗೋಡೆಯನ್ನು ನೆಲಸಮಗೊಳಿಸುವುದು ಎಷ್ಟು ಸರಿ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ.

ಮಳೆ ಅಬ್ಬರಕ್ಕೆ ಉರುಳಿ ಬಿದ್ದ ಶಾಮೀಯಾನ್

ಧಾರವಾಡ: ರೈಲ್ವೆ ನಿಲ್ದಾಣ ಮೇಲ್ದರ್ಜೆಗೇರಿಸಿದ ಉದ್ಘಾಟನಾ ಕಾರ್ಯಕ್ರಮಕ್ಕೆ ಹಾಕಿದ್ದ ಪೆಂಡಾಲ್ ಸುರಿದ ಧಾರಾಕಾರ ಮಳೆಗೆ ಉರುಳಿ ಬಿದ್ದ ಘಟನೆ ನಡೆದಿದೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗಮಿಸಲಿರುವ ಹಿನ್ನೆಲೆ ನಿಲ್ದಾಣದ ಪಕ್ಕದಲ್ಲೇ ಶಾಮೀಯಾನ ಹಾಕಲಾಗಿತ್ತು. ಆದರೆ ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಶಾಮಿಯಾನಾ ಕುಸಿದು ಬಿದ್ದಿದೆ. ಸದ್ಯ ಮಳೆ ಹಿನ್ನೆಲೆ ಕಾರ್ಯಕ್ರಮದ ಸ್ಥಳವನ್ನು ಬದಲಾವಣೆ ಮಾಡಲಾಗಿದೆ. ನಿಲ್ದಾಣದ ಹೊರಭಾಗದಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮ ಇದೀಗ ನಿಲ್ದಾಣದ ಒಳಗಡೆ ನಡೆಸಲು ನಿರ್ಧರಿಸಲಾಗಿದೆ. ಅದರಂತೆ ಪ್ಲ್ಯಾಟ್ ಫಾರಂ ಪಕ್ಕದಲ್ಲಿ ಕಾರ್ಯಕ್ರಮದ ವೇದಿಕೆ ತಯಾರಿ ಮಾಡಲಾಗುತ್ತಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:23 am, Tue, 11 October 22

Follow Us
Web contact
Web contact

TV9 Kannada

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ