AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿಯಲ್ಲಿ ತಲೆ ಎತ್ತಲಿದೆ ಸ್ಕೂಲ್ ಆಫ್ ಮೈನಿಂಗ್ಸ್; ಗಣಿ ಮತ್ತು ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಘೋಷಣೆ

ದೇಶದಲ್ಲೇ ಎರಡನೇ ಸ್ಕೂಲ್ ಆಫ್ ಮೈನಿಂಗ್ ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಸುಮಾರು 50 ಎಕರೆ ಜಮೀನಿನಲ್ಲಿ ತೆರೆಯಲು ತೀರ್ಮಾನಿಸಲಾಗಿದೆ. ಈಗಾಗಲೇ ವಿಸತ ಯೋಜನ ವರದಿ (ಡಿಪಿಆರ್)ಯೂ ಸಿದ್ದವಾಗಿದೆ ಎಂದು ಹೇಳಿದರು.

ಬಳ್ಳಾರಿಯಲ್ಲಿ ತಲೆ ಎತ್ತಲಿದೆ ಸ್ಕೂಲ್ ಆಫ್ ಮೈನಿಂಗ್ಸ್; ಗಣಿ ಮತ್ತು ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಘೋಷಣೆ
ಮುರುಗೇಶ್ ನಿರಾಣಿ
Follow us
TV9 Web
| Updated By: ganapathi bhat

Updated on:Jul 05, 2021 | 9:54 PM

ತುಮಕೂರು: ಗಣಿಗಾರಿಕೆ ನಿರ್ವಹಣೆ, ಮಾಲೀಕರು ಮತ್ತು ಕಾರ್ಮಿಕರಿಗೆ ತರಬೇತಿ, ಹಾಗೂ ಭವಿಷ್ಯದಲ್ಲಿ ಉಂಟಾಗಬಹುದಾದ ಅನಾಹುತಗಳನ್ನು ತಪ್ಪಿಸಲು ಬಳ್ಳಾರಿಯಲ್ಲಿ ‘ಸ್ಕೂಲ್ ಆಫ್ ಮೈನಿಂಗ್’ ಪ್ರಾರಂಭಿಸಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಇಂದು ಘೋಷಿಸಿದರು. ಸೋಮವಾರ ಇಲ್ಲಿನ ‌ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಲಾಖೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯ ನಂತರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

ದೇಶದಲ್ಲೇ ಎರಡನೇ ಸ್ಕೂಲ್ ಆಫ್ ಮೈನಿಂಗ್ ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಸುಮಾರು 50 ಎಕರೆ ಜಮೀನಿನಲ್ಲಿ ತೆರೆಯಲು ತೀರ್ಮಾನಿಸಲಾಗಿದೆ. ಈಗಾಗಲೇ ವಿಸತ ಯೋಜನ ವರದಿ (ಡಿಪಿಆರ್)ಯೂ ಸಿದ್ದವಾಗಿದೆ ಎಂದು ಹೇಳಿದರು. ಸದ್ಯದಲ್ಲೇ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗುವುದು. ಇಲಾಖೆಯ ಸಿಬ್ಬಂದಿ, ಗಣಿ ಮಾಲೀಕರು, ಹಾಗೂ ಸಿಬ್ಬಂದಿಗಳಿಗೆ ಅಂತರಾಷ್ಟ್ರೀಯ ಮಟ್ಟದ ತರಬೇತಿಯನ್ನು ನೀಡಲಾಗುವುದು ಎಂದು ತಿಳಿಸಿದರು.

ಅವೈಜ್ಞಾನಿಕ ಗಣಿಗಾರಿಕೆ ತಡೆಯುವುದು, ಜೊತೆಗೆ ಎಲ್ಲಾ ರೀತಿಯ ಗಣಿಗಾರಿಕೆ ತರಬೇತಿ ಪ್ರಾರಂಭಿಸಲಾಗುವುದು. ಮೈನಿಂಗ್ ಆಪರೇಟಿಂಗ್ ಮತ್ತು ಉದ್ದಿಮೆದಾರರಿಗೆ ವೈಜ್ಞಾನಿಕವಾಗಿ ಗಣಿಗಾರಿಕೆಯನ್ನು ಹೇಗೆ ನಿರ್ವಹಿಬೇಕೆಂದು ತರಬೇತಿ ನೀಡುವುದೇ ಎಂಬು ಇದರ ಮುಖ್ಯ ಉದ್ದೇಶ ಎಂದರು.

ಪ್ರತಿಯೊಂದು ಜಿಲ್ಲೆಯಲ್ಲಿ ಇಲಾಖೆ ವತಿಯಿಂದ ಹೊಸ ಹೊಸ ಯೋಜನೆಗಳನ್ನು ರೂಪಿಸಲಾಗುತ್ತದೆ. ನಾಲ್ಕು ಕಂದಾಯ ವಿಭಾಗ ಸೇರಿದಂತೆ ಐದು ಕಡೆ ಗಣಿ ಅದಾಲತ್‍ಗಳನ್ನು ಪ್ರಾರಂಭಿಸಲಿದ್ದೇವೆ. ಇದರಿಂದ ಉದ್ದಿಮೆದಾರರು ಇಲಾಖೆ ಇಲಾಖೆಗೆ ಅರ್ಜಿಗಳನ್ನು ಹಿಡಿದುಕೊಂಡು ಅಲೆಯುವುದು ತಪ್ಪುತ್ತದೆ ಎಂದು ಅಭಿಪ್ರಾಯಪಟ್ಟರು.

ಏಕಗವಾಕ್ಷಿ ಯೋಜನೆಯನ್ನು ಶೀಘ್ರದಲ್ಲೇ ಅನುಷ್ಠಾನ ಮಾಡಲಾಗುವುದು. ಸಣ್ಣ ಸಣ್ಣ ಉದ್ದಿಮೆದಾರರು ಇಲಾಯಿಂದ ಇಲಾಖೆಗೆ ಅಲೆಯುವುದನ್ನು ತಪ್ಪಿಸಲು ಇದು ಬಹಳಷ್ಟು ಅನುಕೂಲಕರವಾಗಿದೆ. ಏಕಗವಾಕ್ಷಿ ಯೋಜನೆಯಡಿ ಇಲಾಖೆಗೆ ಸಂಬಂಧಿಸಿದ ಎಲ್ಲ ಸಮಸ್ಯೆಗಳನ್ನು ಸ್ಥಳದಲ್ಲೇ ಇತ್ಯರ್ಥಪಡಿಸಿಕೊಳ್ಳಲಾಗುವುದು ಎಂದು ಸಲಹೆ ಮಾಡಿದರು.

ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಅವರು ಸುದ್ದಿಗೋಷ್ಟಿಯಲ್ಲಿ ಈ ಮಾಹಿತಿ ನೀಡಿದರು. ಗಣಿಗಾರಿಕೆಯಲ್ಲಿ ಸರಳೀಕರಣ ಮಾಡುವ ಸುದ್ದುದೇಶ ನಮ್ಮ ಮುಂದಿದೆ. ಇಲಾಖೆಯಲ್ಲಿ ಸುಮಾರು 6 ಸಾವಿರ ಅರ್ಜಿಗಳು ಇತ್ಯರ್ಥವಾಗದೆ ಬಾಕಿ ಉಳಿದಿವೆ. 2016ಕ್ಕಿಂತ ಮುಂಚೆ ಅರ್ಜಿ ಸಲ್ಲಿಸಿ ಎನ್‍ಒಸಿ ಪಡೆದವರಿಗೆ ಗಣಿಗಾರಿಕೆಗೆ ಅವಕಾಶ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಉಳಿದಿರುವ ಅರ್ಜಿಗಳನ್ನು ಮುಂದಿನ ಮೂರು ತಿಂಗಳೊಳಗೆ ವಿಲೇವಾರಿ ಮಾಡಲಾಗುವುದು. ರಾಜ್ಯದಲ್ಲಿ ಉದ್ದಿಮೆದಾರ ಸ್ನೇಹಿ ರಾಜ್ಯವನ್ನಾಗಿ ಮಾಡಲು ನಾವು ಶಕ್ತಿ ಮೀರಿ ಪ್ರಯತ್ನ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ರಾಜ್ಯದಲ್ಲಿ ರಫ್ತು ನಿಷೇಧದಿಂದ ರಾಜ್ಯದ ಬೊಕ್ಕಸಕ್ಕೆ ಭಾರೀ ನಷ್ಟವಾಗುತ್ತಿದೆ. ಹೀಗಾಗಿ ವಿದೇಶಕ್ಕೆ ಅದಿರನ್ನು ರಪ್ತು ಮಾಡಲು ವಿಧಿಸಲಾಗಿರುವ ನಿರ್ಬಂಧ ತೆರವುಗೊಳಿಸುವಂತೆ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಲಾಗುವುದು. ಸುಪ್ರೀಂಕೋರ್ಟ್‍ನಲ್ಲಿ ನಮಗೆ ಎಲ್ಲ ರೀತಿಯ ಕಾನೂನಿನ ನೆರವು ಸಿಗುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ರಪ್ತು ನಿಷೇಧದಿಂದ ರಾಜ್ಯದ ಬೊಕ್ಕಸಕ್ಕೆ ನಷ್ಟವಾಗುವುದರ ಜೊತೆಗೆ ಕಡಿಮೆ ದರದಲ್ಲಿ ಸರಕು ಖರೀದಿಸಿ ಹೆಚ್ಚಿನ ದರದಲ್ಲಿ ಸ್ಟೀಲ್ ಮಾರಾಟ ಮಾಡಲಾಗುತ್ತದೆ. ಸರಕು ಖರೀದಿಸುವ ರಾಜ್ಯಗಳಲ್ಲಿ ಕಡಿಮೆ ದರದಲ್ಲಿ ಸ್ಟೀಲ್ ಮಾರಾಟ ಮಾಡುತ್ತವೆ. ನಮಗೆ ವಿದೇಶಕ್ಕೆ ಅದಿರು ರಫ್ತು ಮಾಡಲು ಅವಕಾಶ ಕೊಟ್ಟರೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಗಣಿ ಅಭಿವೃದ್ದಿ ನಿಧಿಯಿಂದ ಮೂರು ವರ್ಷಗಳಲ್ಲಿ ಕೈಗೊಳ್ಳಬಹುದಾದ ಕಾರ್ಯ ಯೋಜನೆಗಳ ಕುರಿತಾಗಿ ನೀಲನಕ್ಷೆಯನ್ನು ರೂಪಿಸಲಾಗಿದೆ. ಸದ್ಯ ₹32 ಕೋಟಿ ಹಣ ಉಳಿದಿದೆ. ಇದರಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅವಕಾಶವಿದೆ. ಕುಡಿಯುವ ನೀರು ಸರ್ಕಾರಿ ಶಾಲೆಗಳ ದತ್ತು ಪಡೆಯುವುದು, ಸಮುದಾಯ ಭವನ ನಿರ್ಮಾಣ, ಮೂಲಭೂತ ಸೌಕರ್ಯಗಳ ಅಭಿವೃದ್ದಿ ಸೇರಿದಂತೆ ಹಲವು ರೀತಿ ಯೋಜನೆಗಳನ್ನು ರೂಪಿಸಬಹುದು. ಈ ಬಗ್ಗೆ ಸಭೆ ಕರೆದು ಜನಪ್ರತಿನಿಧಿಗಳಿಗೆ ಹಂಚಿಕೆ ಮಾಡುವುದಾಗಿ ತಿಳಿಸಿದರು.

ದೇಶಕ್ಕೆ ಮಾದರಿಯಾಗುವಂತಹ ಮರಳು ನೀತಿಯನ್ನು ಇಲಾಖೆ ಸಿದ್ದಪಡಿಸಿದೆ. ಬೇರೆ ರಾಜ್ಯದವರು ಕರ್ನಾಟಕವನ್ನು ಮಾದರಿಯಾಗಿಟ್ಟುಕೊಂಡು ಅನುಷ್ಠಾನ ಮಾಡುವಂತಹ ನೀತಿ ಇದಾಗಿದೆ. ಸದ್ಯದಲ್ಲೇ ಮುಖ್ಯಮಂತ್ರಿಯವರೊಂದದಿಗೆ ಚರ್ಚಿಸಿ ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ತಿಳಿಸಿದರು.

ರಾಜ್ಯದಲ್ಲಿ ಒಟ್ಟು 350 ಮರಳು ಬ್ಲಾಕ್‍ಗಳನ್ನು ಗುರುತಿಸಲಾಗಿದೆ. ಈಗಿರುವ ಮರಳು ನೀತಿಗೆ ತಿದ್ದುಪಡಿ ಮಾಡಿ ನದಿ ಮರಳನ್ನು ಸಂಸ್ಕರಿಸಿ ಗ್ರೇಡ್ ಆಧಾರದಲ್ಲಿ ಮಾರಾಟ ಮಾಡಲು ಯೋಜಿಸಲಾಗಿದೆ ಎಂದರು. ಕೆಲವು ಕಡೆ ಡಿಜಿಎಂಎಸ್ ಲೈಸೆನ್ಸ್ ಪಡೆಯದೇ ಕಾರ್ಯನಿರ್ವಹಣೆ ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಹೀಗಾಗಿ 90ದಿನಗಳೊಗೆ ಅರ್ಜಿ ಸಲ್ಲಿಸಿ ಗಣಿಗಾರಿಕೆ ನಡೆಸಲು ಅವಕಾಶ ಕೊಡಲಾಗುವುದು. ಅವೈಜ್ಞಾನಿಕ ಪೆನಾಲ್ಟಿ ನಿಗದಿಪಡಿಸಲಾಗಿದೆ. ದಂಡ ನಿಗದಿಪಡಿಸುವ ಬಗ್ಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಪ್ರತಿಯೊಂದು ಜಿಲ್ಲೆಯಲ್ಲಿ ಉದ್ಯಮದಾರರ ಸಮಸ್ಯೆಗಳಿಗೆ ಸ್ಪಂದಿಸಲು ಹೊಸ ಯೋಜನೆ ರೂಪಿಸಲಾಗುತ್ತಿದೆ. 10 ಕಿಲೋ ಸುತ್ತಮುತ್ತಲಿನಲ್ಲಿರುವ ಗಣಿಗಾರಿಕೆಯನ್ನು ನಿಷೇಧಿಸಲಾಗಿದೆ, 154 ಗಣಿಗಾರಿಕೆಗಳು ನಡೆಯುತ್ತಿವೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಕೆ.ಆರ್.ಎಸ್. ಸುತ್ತಮುತ್ತ ಎಲ್ಲಾ ಮೈನಿಂಗ್ ಬಂದ್; ಡ್ಯಾಮ್​ನಲ್ಲಿ ಯಾವುದೇ ಲೀಕೇಜ್ ಇಲ್ಲ, ಆತಂಕ ಬೇಡ – ಗಣಿ ಸಚಿವ ಮುರುಗೇಶ್​ ನಿರಾಣಿ

Published On - 9:51 pm, Mon, 5 July 21

ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​