AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಶಾಲೆಗಳು ಅಗ್ನಿ ಸುರಕ್ಷತಾ ಪ್ರಮಾಣಪತ್ರ ಪಡೆಯಲು ಮುಂದಿನ ಶೈಕ್ಷಣಿಕ ವರ್ಷದವರೆಗೆ ಅವಕಾಶ ನೀಡಿ: ಹೈಕೋರ್ಟ್​

ಖಾಸಗಿ ಅನುದಾನ ರಹಿತ ಶಾಲೆಗಳು ಕಟ್ಟಡ ಸುರಕ್ಷತೆ ಮತ್ತು ಅಗ್ನಿ ಸುರಕ್ಷತಾ ಪ್ರಮಾಣಪತ್ರಗಳನ್ನು ಪಡೆಯಲು ಮುಂದಿನ ಶೈಕ್ಷಣಿಕ ವರ್ಷದವರೆಗೆ ಕಾಲಾವಕಾಶ ನೀಡಬೇಕೆಂದು ಹೈಕೋರ್ಟ್​​ ಸರ್ಕಾರಕ್ಕೆ ಸೂಚಿಸಿದೆ. 2022ರ ಜೂನ್​ನಲ್ಲಿ ಹೊರಡಿಸಲಾದ ಸರ್ಕಾರದ ಸುತ್ತೋಲೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ, ಸರ್ಕಾರಿ ಶಾಲೆಗಳಿಗೂ ಈ ನಿಯಮ ಅನ್ವಯವಾಗಬೇಕೆಂದು ಸೂಚಿಸಿದೆ.

ಖಾಸಗಿ ಶಾಲೆಗಳು ಅಗ್ನಿ ಸುರಕ್ಷತಾ ಪ್ರಮಾಣಪತ್ರ ಪಡೆಯಲು ಮುಂದಿನ ಶೈಕ್ಷಣಿಕ ವರ್ಷದವರೆಗೆ ಅವಕಾಶ ನೀಡಿ: ಹೈಕೋರ್ಟ್​
ಹೈಕೋರ್ಟ್​
Ramesha M
| Edited By: |

Updated on: Dec 03, 2024 | 7:48 AM

Share

ಬೆಂಗಳೂರು, ಡಿಸೆಂಬರ್​ 03: ಮಾನ್ಯತೆ ಪಡೆದುಕೊಳ್ಳಲು ಮತ್ತು ಮಾನ್ಯತೆ ನವೀಕರಣ ಮಾಡಿಕೊಳ್ಳಲು ಕಟ್ಟಡ ಸುರಕ್ಷತೆ ಮತ್ತು ಅಗ್ನಿ ಸುರಕ್ಷತಾ ಪ್ರಮಾಣಪತ್ರಗಳನ್ನು ಕಡ್ಡಾಯವಾಗಿ ಪಡೆದುಕೊಳ್ಳುವುದು ಸೇರಿದಂತೆ ಹಲವು ಷರತ್ತುಗಳ ಪಾಲನೆಗೆ ಖಾಸಗಿ ಅನುದಾನ ರಹಿತ ಶಾಲೆಗಳಿಗೆ (Schools) ಮುಂದಿನ ಶೈಕ್ಷಣಿಕ ವರ್ಷದವರೆಗೆ ಕಾಲಾವಕಾಶ ನೀಡುವಂತೆ ಕರ್ನಾಟಕ ಸರ್ಕಾರಕ್ಕೆ (Karnataka Government) ಹೈಕೋರ್ಟ್ (High Court)​​ ಸೂಚನೆ ನೀಡಿದೆ.

ಶಾಲೆಗಳಿಗೆ ಮಾನ್ಯತೆ ಪಡೆದುಕೊಳ್ಳಲು ಅಥವಾ ಮಾನ್ಯತೆ ನವೀಕರಣಕ್ಕೆ ಕಟ್ಟಡ ಸುರಕ್ಷತೆ ಹಾಗೂ ಅಗ್ನಿ ಸುರಕ್ಷತೆ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕೆಂದು 2022ರ ಜೂನ್​ 6 ರಂದು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿತ್ತು.

ಈ ಸುತ್ತೋಲೆ ಪ್ರಶ್ನಿಸಿ ಅನುದಾನ ರಹಿತ ಖಾಸಗಿ ಶಾಲೆ ಸಂಘ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿತ್ತು. ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್​ ಗೋವಿಂದರಾಜ್​ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಖಾಸಗಿ ಶಾಲೆಗಳಿಗೆ ಕಡ್ಡಾಯಗೊಳಿಸಿರುವುದು ಸರ್ಕಾರಿ ಶಾಲೆಗಳಿಗೂ ಅನ್ವಯವಾಗಬೇಕು. ಸುತ್ತೋಲೆ ಪಾಲಿಸಿ ಸರ್ಕಾರ ಮಾದರಿ ನಾಗರಿಕನಾಗಿ ನಡೆದುಕೊಳ್ಳಬೇಕು ಎಂದು ಪೀಠ ಅಭಿಪ್ರಾಯ ಪಟ್ಟಿತು.

ಇದನ್ನೂ ಓದಿ: 2025ನೇ ಸಾಲಿನ SSLC ಮತ್ತು 2nd ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಕಟ್ಟಡ ಸುರಕ್ಷತೆ ಮತ್ತು ಅಗ್ನಿ ಸುರಕ್ಷತೆಯ ಕ್ರಮಗಳನ್ನು ಖಾಸಗಿ ಶಾಲೆಗಳಲ್ಲಿ ಬಯಸುವ ಸರ್ಕಾರ, ಅದನ್ನು ತನ್ನ ಅಧೀನದಲ್ಲಿರುವ ಸರ್ಕಾರಿ ಶಾಲೆಗಳಲ್ಲೂ ಬಯಸಬೇಕು. ಈ ವಿಚಾರದಲ್ಲಿ ಸರ್ಕಾರಿ ಶಾಲೆಗಳಿಗೆ ವಿನಾಯತಿ ಸಲ್ಲದು ಎಂದು ಹೇಳಿದೆ.

ಸರ್ಕಾರಿ ಶಾಲೆಗಳಿಗೆ ಬಂತ್ತು ಫ್ರೀ ಟ್ಯೂಷನ್ ಭಾಗ್ಯ

ಇಷ್ಟು ದಿನ ಪೋಷಕರು ಸಾವಿರಾರು ರೂಪಾಯಿ ಹಣ ಖರ್ಚುಮಾಡಿ ತಮ್ಮ ಮಕ್ಕಳನ್ನು ಖಾಸಗಿ ಟ್ಯೂಷನ್ ಸೆಂಟರ್ ಗಳಿಗೆ ಸೇರಿಸುತ್ತಿದ್ದರು. ವಿದ್ಯಾರ್ಥಿ ಯಾವ ತರಗತಿಯ ವಿಷಯದಲ್ಲಿ ಹಿಂದೆ ಇದ್ದಾನೆ ಎಂದು ಅರ್ಥ ಮಾಡಿಕೊಂಡು ಸ್ಪೆಷಲ್ ಟ್ಯೂಷನ್​ಗೆ ಕಳುಹಿಸುತ್ತಿದ್ದಾರೆ. ಈಗ ಈ ಭಾಗ್ಯ ಸರ್ಕಾರಿ ಶಾಲೆಗಳ ಮಕ್ಕಳಿಗೂ ಬರುತ್ತಿದೆ.

ಮುಂಜಾನೆ ಹಾಗೂ ಸಂಜೆ ಶಾಲೆಯ ಆರಂಭಕ್ಕೂ ಮೊದಲು ಒಂದು ಗಂಟೆ ಹಾಗೂ ಶಾಲೆ ಅವಧಿ ಮುಗದ ಬಳಿಕ ಒಂದು ಕ್ಲಾಸ್ ಶಿಕ್ಷಕರು ಮಕ್ಕಳಿಗೆ ವಿಶೇಷ ತರಗತಿ ತಗೆದುಕೊಳ್ಳುತ್ತಿದ್ದಾರೆ. 1 ರಿಂದ 12 ನೇ ತರಗತಿಯಲ್ಲಿನ ಮಕ್ಕಳಿಗೆ ಇದು ಆರಂಭವಾಗುತ್ತಿದೆ. ಯಾವ ತರಗತಿಯಲ್ಲಿ ಹಿನ್ನಡೆ ಇದ್ದಾರೆ ಎಂದು ಶಾಲಾ ಶಿಕ್ಷಕರೇ ಗುರುತಿಸಿ ಆ ವಿಷಯದಲ್ಲಿ ಹಿಂದಿರುವ ವಿದ್ಯಾರ್ಥಿಗಳನ್ನ ಈ ಸ್ಪೆಷಲ್ ಕ್ಲಾಸ್​ಗೆ ಕಳುಹಿಸುತ್ತಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು