AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ನೀಡಿದರೆ ಮಹಾನಗರಗಳಲ್ಲೂ ಶಾಲೆ ಓಪನ್​- ಶಿಕ್ಷಣ ಸಚಿವ ಬಿ ಸಿ ನಾಗೇಶ್​

ತಾತ್ರಿಕ ಸಲಹಾ ಸಮಿತಿ ಅನುಮತಿ ಕೊಟ್ಟರೆ ಮಹಾನಗರಗಳಲ್ಲೂ ಶಾಲೆ ಓಪನ್ ಮಾಡುತ್ತೇವೆ ಎಂದಿದ್ದಾರೆ. ಸಲಹಾ ಸಮಿತಿ ಅಂತಿಮ ನಿರ್ಣಯ ಕೊಟ್ಟ ಮೇಲೆ ಸಿಎಂ ಜತೆ ಶಾಲೆ ತೆರೆಯುವುದರ ಬಗ್ಗೆ  ಚರ್ಚಿಸಿ ಅಂತಿಮಗೊಳಿಸುತ್ತೇವೆ.

ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ನೀಡಿದರೆ ಮಹಾನಗರಗಳಲ್ಲೂ ಶಾಲೆ ಓಪನ್​- ಶಿಕ್ಷಣ ಸಚಿವ ಬಿ ಸಿ ನಾಗೇಶ್​
ಶಿಕ್ಷಣ ಸಚಿವ ಬಿ ಸಿ ನಾಗೇಶ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Jan 20, 2022 | 12:50 PM

Share

ರಾಜ್ಯದಲ್ಲಿ ಕೊರೋನಾ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿದೆ. ಈ ನಡುವೆ ಶಿಕ್ಷಣ ಸಚಿವ ಬಿಸಿ ನಾಗೇಶ್ (B.C Nagesh)​ ತಾಂತ್ರಿಕ ಸಲಹಾ ಸಮಿತಿ ನಾಳೆ ಅನುಮತಿ ಕೊಟ್ಟರೆ ಮಹಾನಗರಗಳಲ್ಲೂ ಶಾಲೆ ಓಪನ್ ಮಾಡುತ್ತೇವೆ ಎಂದಿದ್ದಾರೆ. ಸಲಹಾ ಸಮಿತಿ ಅಂತಿಮ ನಿರ್ಣಯ ಕೊಟ್ಟ ಮೇಲೆ ಸಿಎಂ ಜತೆ ಶಾಲೆ ತೆರೆಯುವುದರ ಬಗ್ಗೆ  ಚರ್ಚಿಸಿ ಅಂತಿಮಗೊಳಿಸುತ್ತೇವೆ. 0-5 ವರ್ಷದ ಮಕ್ಕಳಲ್ಲಿ ಪಾಸಿಟಿವಿಟಿ (Positivity) ಇದೆ. ಆದರೆ ಎಸ್ಎಸ್ಎಲ್​ಸಿ (SSLC) ಪಿಯುಸಿ(PUC) ಮಕ್ಕಳಿಗೆ ಸಮಸ್ಯೆ ಕಾಣಿಸಿಕೊಂಡಿಲ್ಲ. ನಾವು ಶೈಕ್ಷಣಿಕ ದೃಷ್ಟಿಯಿಂದ ನೋಡಿದರೆ ಶಾಲೆಗಳನ್ನು ತೆರೆಯಬಹುದು ಅಂತ ಅನಿಸುತ್ತದೆ ಎಂದಿದ್ದಾರೆ. 1ರಿಂದ 10 ನೇ ತರಗತಿಯಲ್ಲಿ ನಿನ್ನೆ 1250 ಮಕ್ಕಳಲ್ಲಿ ಕೊರೋನಾ ದೃಢಪಟ್ಟಿದೆ, ಒಟ್ಟು  ಕೇಸ್ 6752 ಸಕ್ರಿಯ ಪ್ರಕರಣಗಳಿವೆ. ಇನ್ನು ನಿನ್ನೆ ಒಂದೇ ದಿನ, ಪಿಯುಸಿಯ 166 ಮಕ್ಕಳಿಗೆ ನಿನ್ನೆ ಪಾಸಿಟಿವ್ ಆಗಿದೆ. 897 ಆ್ಯಕ್ಟಿವ್ ಕೇಸ್​ನಲ್ಲಿ (Active Case) ಪಿಯುಸಿ ಮಕ್ಕಳಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. 

ಕಳೆದ ಸಿಎಂ ನೇತೃತ್ವದ ಸಭೆಯಲ್ಲಿ ಶಿಕ್ಷಣ ಇಲಾಖೆ ಕಡೆಯಿಂದ ಕಳೆದ ಎರಡೂ ಕೋವಿಡ್ ನಿಂದ ಆದ ಸಮಸ್ಯೆಗಳ ಬಗ್ಗೆ ವಿವರಿಸಿದ್ದೆವು. ಕಳೆದ ಬಾರಿ ತರಹ ರಾಜ್ಯದಲ್ಲಿ ಒಂದೇ ಸಲ ಶಾಲೆ ಬಂದ್ ಮಾಡಬಾರದು ಅಂತ ನಿರ್ಣಯ ತೆಗೆದುಕೊಂಡೆವು. ಜಿಲ್ಲಾಧಿಕಾರಿಗಳಿಗೆ ನಿರ್ಣಯ ತೆಗೆದುಕೊಳ್ಳುವ ಜವಾಬ್ದಾರಿ ನೀಡಲಾಗಿತ್ತು.ಅನೇಕ ಜಿಲ್ಲೆಗಳಲ್ಲಿ ಈಗಲೂ ಕೂಡ ಸಂಪೂರ್ಣವಾಗಿ ಶಾಲೆಗಳು ಕ್ಲೋಸ್ ಆಗಿಲ್ಲ. ಮೈಸೂರು, ತುಮಕೂರು ಸೇರಿ ಕೆಲವು ಮಹಾನಗರಗಳಲ್ಲಿ  ಶಾಲೆಗಳನ್ನು ಕ್ಲೋಸ್ ಮಾಡಲಾಗಿತ್ತು. ಈವರೆಗೂ ಕೋವಿಡ್ ಮಕ್ಕಳ ಮೇಲೆ ಬೇರೆ ರೀತಿಯ ಪರಿಣಾಮ ಬೀರಿಲ್ಲ. ತಾಂತ್ರಿಕ ಸಲಹಾ ಸಮಿತಿ ಮುಂದೆ ಕೂಡ ನಾವು ಶಾಲೆಗಳ ಸ್ಥಿತಿಗತಿ ಬಗ್ಗೆ ವಿವರ ನೀಡುತ್ತೇವೆ. ಈಗಾಗಲೇ 80 ಪ್ರತಿಶತದಷ್ಟು ಸಿಲೆಬಸ್ ಕಂಪ್ಲೀಟ್ ಮಾಡಿದ್ದೇವೆ. ಮಕ್ಕಳ ಪಾಸಿಟಿವಿಟಿ ರೇಟ್ ಕೂಡ ಅನಲೈಸ್ ಮಾಡಿದ್ದೇವೆ. ನಾಳೆ ಸಿಎಂ ಸಭೆಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:

ಗೃಹ ಸಚಿವ ಆರಗ ಸಾಹೇಬ್ರು ಇಬ್ಬರನ್ನೂ ವಜಾ ಮಾಡಲು ಸೂಚಿಸಿದ್ದೇನೆ ಅಂದ್ರು, ಆದರೆ ಅವರಿಬ್ಬರಿಗೂ ಆಗ್ಲೇ ಜಾಮೀನು ಸಿಕ್ತು!

Published On - 12:45 pm, Thu, 20 January 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ