AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ನೀಡಿದರೆ ಮಹಾನಗರಗಳಲ್ಲೂ ಶಾಲೆ ಓಪನ್​- ಶಿಕ್ಷಣ ಸಚಿವ ಬಿ ಸಿ ನಾಗೇಶ್​

ತಾತ್ರಿಕ ಸಲಹಾ ಸಮಿತಿ ಅನುಮತಿ ಕೊಟ್ಟರೆ ಮಹಾನಗರಗಳಲ್ಲೂ ಶಾಲೆ ಓಪನ್ ಮಾಡುತ್ತೇವೆ ಎಂದಿದ್ದಾರೆ. ಸಲಹಾ ಸಮಿತಿ ಅಂತಿಮ ನಿರ್ಣಯ ಕೊಟ್ಟ ಮೇಲೆ ಸಿಎಂ ಜತೆ ಶಾಲೆ ತೆರೆಯುವುದರ ಬಗ್ಗೆ  ಚರ್ಚಿಸಿ ಅಂತಿಮಗೊಳಿಸುತ್ತೇವೆ.

ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ನೀಡಿದರೆ ಮಹಾನಗರಗಳಲ್ಲೂ ಶಾಲೆ ಓಪನ್​- ಶಿಕ್ಷಣ ಸಚಿವ ಬಿ ಸಿ ನಾಗೇಶ್​
ಶಿಕ್ಷಣ ಸಚಿವ ಬಿ ಸಿ ನಾಗೇಶ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Jan 20, 2022 | 12:50 PM

Share

ರಾಜ್ಯದಲ್ಲಿ ಕೊರೋನಾ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿದೆ. ಈ ನಡುವೆ ಶಿಕ್ಷಣ ಸಚಿವ ಬಿಸಿ ನಾಗೇಶ್ (B.C Nagesh)​ ತಾಂತ್ರಿಕ ಸಲಹಾ ಸಮಿತಿ ನಾಳೆ ಅನುಮತಿ ಕೊಟ್ಟರೆ ಮಹಾನಗರಗಳಲ್ಲೂ ಶಾಲೆ ಓಪನ್ ಮಾಡುತ್ತೇವೆ ಎಂದಿದ್ದಾರೆ. ಸಲಹಾ ಸಮಿತಿ ಅಂತಿಮ ನಿರ್ಣಯ ಕೊಟ್ಟ ಮೇಲೆ ಸಿಎಂ ಜತೆ ಶಾಲೆ ತೆರೆಯುವುದರ ಬಗ್ಗೆ  ಚರ್ಚಿಸಿ ಅಂತಿಮಗೊಳಿಸುತ್ತೇವೆ. 0-5 ವರ್ಷದ ಮಕ್ಕಳಲ್ಲಿ ಪಾಸಿಟಿವಿಟಿ (Positivity) ಇದೆ. ಆದರೆ ಎಸ್ಎಸ್ಎಲ್​ಸಿ (SSLC) ಪಿಯುಸಿ(PUC) ಮಕ್ಕಳಿಗೆ ಸಮಸ್ಯೆ ಕಾಣಿಸಿಕೊಂಡಿಲ್ಲ. ನಾವು ಶೈಕ್ಷಣಿಕ ದೃಷ್ಟಿಯಿಂದ ನೋಡಿದರೆ ಶಾಲೆಗಳನ್ನು ತೆರೆಯಬಹುದು ಅಂತ ಅನಿಸುತ್ತದೆ ಎಂದಿದ್ದಾರೆ. 1ರಿಂದ 10 ನೇ ತರಗತಿಯಲ್ಲಿ ನಿನ್ನೆ 1250 ಮಕ್ಕಳಲ್ಲಿ ಕೊರೋನಾ ದೃಢಪಟ್ಟಿದೆ, ಒಟ್ಟು  ಕೇಸ್ 6752 ಸಕ್ರಿಯ ಪ್ರಕರಣಗಳಿವೆ. ಇನ್ನು ನಿನ್ನೆ ಒಂದೇ ದಿನ, ಪಿಯುಸಿಯ 166 ಮಕ್ಕಳಿಗೆ ನಿನ್ನೆ ಪಾಸಿಟಿವ್ ಆಗಿದೆ. 897 ಆ್ಯಕ್ಟಿವ್ ಕೇಸ್​ನಲ್ಲಿ (Active Case) ಪಿಯುಸಿ ಮಕ್ಕಳಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. 

ಕಳೆದ ಸಿಎಂ ನೇತೃತ್ವದ ಸಭೆಯಲ್ಲಿ ಶಿಕ್ಷಣ ಇಲಾಖೆ ಕಡೆಯಿಂದ ಕಳೆದ ಎರಡೂ ಕೋವಿಡ್ ನಿಂದ ಆದ ಸಮಸ್ಯೆಗಳ ಬಗ್ಗೆ ವಿವರಿಸಿದ್ದೆವು. ಕಳೆದ ಬಾರಿ ತರಹ ರಾಜ್ಯದಲ್ಲಿ ಒಂದೇ ಸಲ ಶಾಲೆ ಬಂದ್ ಮಾಡಬಾರದು ಅಂತ ನಿರ್ಣಯ ತೆಗೆದುಕೊಂಡೆವು. ಜಿಲ್ಲಾಧಿಕಾರಿಗಳಿಗೆ ನಿರ್ಣಯ ತೆಗೆದುಕೊಳ್ಳುವ ಜವಾಬ್ದಾರಿ ನೀಡಲಾಗಿತ್ತು.ಅನೇಕ ಜಿಲ್ಲೆಗಳಲ್ಲಿ ಈಗಲೂ ಕೂಡ ಸಂಪೂರ್ಣವಾಗಿ ಶಾಲೆಗಳು ಕ್ಲೋಸ್ ಆಗಿಲ್ಲ. ಮೈಸೂರು, ತುಮಕೂರು ಸೇರಿ ಕೆಲವು ಮಹಾನಗರಗಳಲ್ಲಿ  ಶಾಲೆಗಳನ್ನು ಕ್ಲೋಸ್ ಮಾಡಲಾಗಿತ್ತು. ಈವರೆಗೂ ಕೋವಿಡ್ ಮಕ್ಕಳ ಮೇಲೆ ಬೇರೆ ರೀತಿಯ ಪರಿಣಾಮ ಬೀರಿಲ್ಲ. ತಾಂತ್ರಿಕ ಸಲಹಾ ಸಮಿತಿ ಮುಂದೆ ಕೂಡ ನಾವು ಶಾಲೆಗಳ ಸ್ಥಿತಿಗತಿ ಬಗ್ಗೆ ವಿವರ ನೀಡುತ್ತೇವೆ. ಈಗಾಗಲೇ 80 ಪ್ರತಿಶತದಷ್ಟು ಸಿಲೆಬಸ್ ಕಂಪ್ಲೀಟ್ ಮಾಡಿದ್ದೇವೆ. ಮಕ್ಕಳ ಪಾಸಿಟಿವಿಟಿ ರೇಟ್ ಕೂಡ ಅನಲೈಸ್ ಮಾಡಿದ್ದೇವೆ. ನಾಳೆ ಸಿಎಂ ಸಭೆಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:

ಗೃಹ ಸಚಿವ ಆರಗ ಸಾಹೇಬ್ರು ಇಬ್ಬರನ್ನೂ ವಜಾ ಮಾಡಲು ಸೂಚಿಸಿದ್ದೇನೆ ಅಂದ್ರು, ಆದರೆ ಅವರಿಬ್ಬರಿಗೂ ಆಗ್ಲೇ ಜಾಮೀನು ಸಿಕ್ತು!

Published On - 12:45 pm, Thu, 20 January 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ