AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಶಾಲೆ ಆರಂಭ; ಜ.29ರಂದು ಮತ್ತೆ ಸಭೆ- ಶಿಕ್ಷಣ ಸಚಿವ

ರಾಜ್ಯದಲ್ಲಿ ಬೆಂಗಳೂರು ಹೊರತುಪಡಿಸಿ ಉಳಿದ ಕಡೆ ಶಾಲೆ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಬೆಂಗಳೂರಿನಲ್ಲಿ ಸದ್ಯಕ್ಕೆ ಜ.29ರವರೆಗೆ ಶಾಲೆ ಬಂದ್ ಮಾಡಲು ಸರ್ಕಾರ ನಿರ್ಧರಿಸಲಾಗಿದೆ.

ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಶಾಲೆ ಆರಂಭ; ಜ.29ರಂದು ಮತ್ತೆ ಸಭೆ- ಶಿಕ್ಷಣ ಸಚಿವ
ಶಿಕ್ಷಣ ಸಚಿವ ಬಿ ಸಿ ನಾಗೇಶ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Jan 21, 2022 | 6:03 PM

Share

ಬೆಂಗಳೂರು: ರಾಜ್ಯದಲ್ಲಿ ಬೆಂಗಳೂರು (Bengaluru) ಹೊರತುಪಡಿಸಿ ಉಳಿದ ಕಡೆ ಶಾಲೆ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಬೆಂಗಳೂರಿನಲ್ಲಿ ಸದ್ಯಕ್ಕೆ ಜ.29ರವರೆಗೆ ಶಾಲೆ ಬಂದ್ (School Bund) ಮಾಡಲು ಸರ್ಕಾರ ನಿರ್ಧರಿಸಿದೆ. ಬೆಂಗಳೂರಿನಲ್ಲಿ ಶಾಲೆ ಓಪನ್ ಬಗ್ಗೆ ಜ.29ರಂದು ಮತ್ತೆ ಸಭೆ ನಡೆಸಿ ಶಾಲೆ ಓಪನ್ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಜೊತೆ ಸಭೆ ಬಳಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (B C Nagesh) ಹೇಳಿಕೆ ನೀಡಿದ್ದಾರೆ.  ಬೆಂಗಳೂರು ಹೊರತುಪಡಿಸಿ ಉಳಿದ ಕಡೆ ಶಾಲೆ ನಡೆಯುತ್ತೆ, ಮಕ್ಕಳಿಗೆ ಸೋಂಕು ಹೆಚ್ಚಾದರೆ ಮಾತ್ರ ಶಾಲೆ ಬಂದ್‌ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ. 

ಸೋಂಕು ಹೆಚ್ಚಳವಾದರೆ  ಮೂರು ದಿನ ಅಥವಾ 7 ದಿನ ಮಾತ್ರ ಶಾಲೆ ಬಂದ್‌ ಆಗಲಿದೆ ಎಂದು ಮಾಹಿತಿ ನೀಡಿದ್ದಾರೆ. ಕಡಿಮೆ ಮಕ್ಕಳಿಗೆ ಸೋಂಕು ಬಂದ್ರೆ 3 ದಿನ ಶಾಲೆ ಬಂದ್​ ಮಾಡಲಾಗುವುದು, ಹೆಚ್ಚು ಮಕ್ಕಳಿಗೆ ಸೋಂಕು ಬಂದರೆ, ಅಂದರೆ 25-30 ಮಕ್ಕಳಿಗೆ ಸೋಂಕು ಬಂದ್ರೆ 7 ದಿನ ಶಾಲೆ ಬಂದ್‌ ಮಾಡಲಾಗುವುದು. ಶಾಲೆ ಬಂದ್ ಬಗ್ಗೆ ಸ್ಥಳೀಯ ಅಧಿಕಾರಿಗಳು ನಿರ್ಧರಿಸುತ್ತಾರೆ ಎಂದು ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ. ಈವರೆಗೆ ರಾಜ್ಯದಲ್ಲಿ 5 ಲಕ್ಷಕ್ಕಿಂತ ಹೆಚ್ಚು ಮಕ್ಕಳಿಗೆ ಕೊವಿಡ್‌ ಟೆಸ್ಟ್‌ ಮಾಡಲಾಗಿದೆ. ಈ ಪೈಕಿ ಶೇ.5ರಷ್ಟು ಮಕ್ಕಳಿಗೆ ಮಾತ್ರ ಸೋಂಕು ಪತ್ತೆ ಆಗಿದೆ. ತುಮಕೂರು, ಮೈಸೂರು ಜಿಲ್ಲೆಯಲ್ಲಿ ಹೆಚ್ಚು ಮಕ್ಕಳಿಗೆ ಸೋಂಕು ಕಾಣಿಸಿಕೊಂಡಿದೆ ಎಂದು ಮಾಹಿತಿ ನೀಡಿದ್ದಾರೆ.

ವೀಕೆಂಡ್​ ಕರ್ಫ್ಯೂ ರದ್ದು ರಾಜ್ಯದಲ್ಲಿ ಈವರೆಗೆ ಜಾರಿಯಲ್ಲಿದ್ದ ವೀಕೆಂಡ್​ ಕರ್ಫ್ಯೂವನ್ನು ರದ್ದು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸಚಿವ ಆರ್​ ಅಶೋಕ್​, ಗೃಹ ಸಚಿವ ಆರಗ ಜ್ಞಾನೇಂದ್ರ ಸುದ್ದಿಗೋಷ್ಟಿ ನಡೆಸ ಮಾಹಿತಿ ನೀಡಿದ್ದಾರೆ. ನಾಳೆಯಿಂದ ವೀಕೆಂಡ್​ ಕರ್ಫ್ಯೂ ಇರುವುದಿಲ್ಲ. ತಜ್ಞರ ಸಲಹೆಯ ಮೇರೆಗೆ  ಈ ನಿರ್ಧಾರ ಕೈಗೊಳ್ಳಲಾಗಿದೆ.  ಆದರೆ ರಾಜ್ಯದಲ್ಲಿ ನೈಟ್​ಕರ್ಫ್ಯೂ ಇರಲಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ ಹಾಗೂ ಉಳಿದ ಕೊವಿಡ್ ನಿಯಮ ಎಂದಿನಂತೆ ಮುಂದುವರೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:

Weekend Curfew Revoked: ಕರ್ನಾಟಕದಲ್ಲಿ ವೀಕೆಂಡ್ ಕರ್ಫ್ಯೂ ತೆರವು: ಕಠಿಣ ನಿಯಮ ಜಾರಿಗೆ ನಿರ್ಧಾರ

Published On - 4:04 pm, Fri, 21 January 22

Follow Us
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?