AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಜಾರಕಿಹೊಳಿ ಸಿಡಿಯಲ್ಲಿರುವ ಲೇಡಿಯ ಬೆನ್ನಟ್ಟಿದ ಪೊಲೀಸರಿಗೆ ಸಿಕ್ತಾ ಮಹತ್ತರ ಸುಳಿವು?

ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣದಲ್ಲಿ ವಿಡಿಯೋದಲ್ಲಿರುವ ಲೇಡಿಯ ಬೆನ್ನಟ್ಟಿದ ಪೊಲೀಸರಿಗೆ ಬಹಳಷ್ಟು ಸವಾಲುಗಳು ಎದುರಾಗುತ್ತಿದೆ. ಸದ್ಯ, ಸಂತ್ರಸ್ತೆಗಾಗಿ ತಲಾಶ್​ ನಡೆಸುತ್ತಿರುವ ಪೊಲೀಸರಿಗೆ ಆಕೆ ಪಿಜಿ ಬದಲು ಮನೆಯೊಂದರಲ್ಲಿ ವಾಸವಾಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ರಮೇಶ್ ಜಾರಕಿಹೊಳಿ ಸಿಡಿಯಲ್ಲಿರುವ ಲೇಡಿಯ ಬೆನ್ನಟ್ಟಿದ ಪೊಲೀಸರಿಗೆ ಸಿಕ್ತಾ ಮಹತ್ತರ ಸುಳಿವು?
ಸಚಿವ ರಮೇಶ್ ಜಾರಕಿಹೊಳಿಯ ರಾಸಲೀಲೆಯ ಸಿಡಿಯ ತುಣುಕು
Follow us
KUSHAL V
|

Updated on: Mar 06, 2021 | 10:35 PM

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣದಲ್ಲಿ ವಿಡಿಯೋದಲ್ಲಿರುವ ಲೇಡಿಯ ಬೆನ್ನಟ್ಟಿದ ಪೊಲೀಸರಿಗೆ ಬಹಳಷ್ಟು ಸವಾಲುಗಳು ಎದುರಾಗುತ್ತಿದೆ. ಸದ್ಯ, ಸಂತ್ರಸ್ತೆಗಾಗಿ ತಲಾಶ್​ ನಡೆಸುತ್ತಿರುವ ಪೊಲೀಸರಿಗೆ ಆಕೆ ಪಿಜಿ ಬದಲು ಮನೆಯೊಂದರಲ್ಲಿ ವಾಸವಾಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಕಳೆದ 3 ವರ್ಷದಿಂದ R.T.ನಗರದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ಸಂತ್ರಸ್ತೆ ಖಾಸಗಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದರು ಎಂಬ ಮಾಹಿತಿ ಸಹ ಪೊಲೀಸರಿಗೆ ದೊರೆತಿದೆ. ಸಿಡಿಯಲ್ಲಿರುವ ಲೇಡಿ ಹೆಬ್ಬಾಳದ ಬಳಿಯಿರುವ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದರು ಎಂದು ಹೇಳಲಾಗಿದೆ.

ಮಾ. 1ರವರೆಗೂ ಬಾಡಿಗೆ ಮನೆಯಲ್ಲೇ ವಾಸವಿದ್ದ ಸಂತ್ರಸ್ತೆ ಬಳಿಕ ಸಿಡಿ ಬಹಿರಂಗವಾಗುತ್ತಿದ್ದಂತೆ ತಲೆಮರೆಸಿಕೊಂಡರಾ ಎಂಬ ಗುಮಾನಿ ಹುಟ್ಟಿದೆ. ವಿಡಿಯೋ ಜೊತೆ ಸಂತ್ರಸ್ತೆಯ ಫೋಟೋ ಸಹ ವೈರಲ್ ಆದಾಗಿನಿಂದ ಆಕೆ ನಾಪತ್ತೆಯಾಗಿದ್ದಾರಾ ಎಂಬ ಅನುಮಾನ ಹುಟ್ಟಿದೆ.

ಸದ್ಯ, ಸಿಡಿಯಲ್ಲಿದ್ದ ಲೇಡಿಯ ಫೋಟೋ ವೈರಲ್ ಆದಾಗಿಂದ ಆಕೆ ಕಾಣಿಸಿಲ್ಲ ಎಂದು ಸಂತ್ರಸ್ತೆ ಇದ್ದ ಮನೆಯ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರಂತೆ. ಹೀಗಾಗಿ, ಪೊಲೀಸರು ಎಲ್ಲಾ ಆಯಾಮದಲ್ಲೂ ತನಿಖೆ ನಡೆಸ್ತಿದ್ದಾರೆ.

ಅಂದ ಹಾಗೆ, ಈ ಹಿಂದೆ, ವಿಡಿಯೋದಲ್ಲಿದ್ದ ಸಂತ್ರಸ್ತೆ R.T.ನಗರ ವ್ಯಾಪ್ತಿಯ ಪಿ.ಜಿಯಲ್ಲಿ ನೆಲೆಸಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ದಿನೇಶ್ ಕಲ್ಲಹಳ್ಳಿ ದೂರಿನಲ್ಲಿ ಈ ಬಗ್ಗೆ ಉಲ್ಲೇಖವಾದ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ಪೊಲೀಸರು R.T.ನಗರದ ವ್ಯಾಪ್ತಿಯಲ್ಲಿರುವ 45 ಪಿ.ಜಿ.ಗಳಲ್ಲಿ ಹುಡುಕಾಟ ನಡೆಸಿ ಪರಿಶೀಲನೆ ಮಾಡಿದ್ರು. ಕಬ್ಬನ್ ಪಾರ್ಕ್ ಮತ್ತು R.T.ನಗರ ಠಾಣಾ ಪೊಲೀಸರಿಂದ ಪರಿಶೀಲ‌ನೆ ನಡೆಸಲಾಗಿತ್ತು.

ಪೊಲೀಸರು ಪಿಜಿಯಲ್ಲಿದ್ದವರ ID ಕಾರ್ಡ್​ ಮತ್ತು ದಾಖಲೆಗಳ ಪರಿಶೀಲನೆ ನಡೆಸಿದ್ದರು. ಆದರೆ, ಪಿ.ಜಿ. ರಿಜಿಸ್ಟರ್ ಹಾಗೂ ಲೆಡ್ಜರ್ ಪುಸ್ತಕಗಳ ಪರಿಶೀಲನೆ ವೇಳೆ ಯಾವುದೇ ಸುಳಿವು ಸಿಕ್ಕಿಲ್ಲ ಎಂದು ಟಿವಿ9ಗೆ ಉನ್ನತ ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಪೊಲೀಸರ ಪರಿಶೀಲನೆ ವೇಳೆ ಯಾವುದೇ ದಾಖಲೆ ಸಿಕ್ಕಿಲ್ಲ ಎಂಬ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: ನನ್ನ ಬಳಿ 19 ಸಿಡಿಗಳಿವೆ ಎಂದಿದ್ದ ಸಾಮಾಜಿಕ ಕಾರ್ಯಕರ್ತ ರಾಜಶೇಖರ್ ಮುಲಾಲಿಗೆ ನೋಟಿಸ್ ಜಾರಿ

ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ