AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Queen of all Languages ಎಂದು ಗೂಗಲ್​ ಸರ್ಚ್​ ಮಾಡಿದರೆ ಉತ್ತರವೇನು ಗೊತ್ತಾ?

Ugliest Language in India ಎಂದು ಹುಡುಕಿದರೆ ಕನ್ನಡ ಎಂಬ ಉತ್ತರ ತೋರಿಕೆಯಾಗಿರುವುದು ಕನ್ನಡಿಗರ ಆಕ್ರೋಶಕ್ಕೆ ತುತ್ತಾದ ಬೆನ್ನಲ್ಲೇ ಜನರು ಕ್ವೀನ್​ ಆಫ್ ಆಲ್​ ಲಾಂಗ್ವೇಜಸ್​ (ಭಾಷೆಗಳ ರಾಣಿ) ಎಂದು ಹುಡುಕಲು ಶುರು ಮಾಡಿದ್ದಾರೆ.

Queen of all Languages ಎಂದು ಗೂಗಲ್​ ಸರ್ಚ್​ ಮಾಡಿದರೆ ಉತ್ತರವೇನು ಗೊತ್ತಾ?
ಭಾಷೆಗಳ ರಾಣಿ ಯಾವುದು?
TV9 Web
| Updated By: Skanda|

Updated on: Jun 03, 2021 | 3:30 PM

Share

ಗೂಗಲ್​ ಸರ್ಚ್​ ಎಂಜಿನ್​ನಲ್ಲಿ ಅಗ್ಲಿಯೆಸ್ಟ್ ಲಾಂಗ್ವೇಜ್ ಇನ್​ ಇಂಡಿಯಾ (ಭಾರತದಲ್ಲೇ ಅತ್ಯಂತ ಕೊಳಕು ಭಾಷೆ) ಎಂದು ಹುಡುಕಿದರೆ ಕನ್ನಡ ಎಂಬ ಉತ್ತರ ತೋರಿಕೆಯಾಗಿರುವುದು ಕನ್ನಡಿಗರ ಆಕ್ರೋಶಕ್ಕೆ ತುತ್ತಾದ ಬೆನ್ನಲ್ಲೇ ಅದಕ್ಕೆ ಕಾರಣವಾದ ವೆಬ್​ಸೈಟ್​ ಪುಟವನ್ನು ತೆಗೆದು ಹಾಕಲಾಗಿದೆ. ಈ ವಿಷಯ ದೊಡ್ಡ ಚರ್ಚೆಗೆ ಒಳಗಾದ ನಂತರ ಜನರು ಕ್ವೀನ್​ ಆಫ್ ಆಲ್​ ಲಾಂಗ್ವೇಜಸ್​ (ಭಾಷೆಗಳ ರಾಣಿ) ಎಂದು ಹುಡುಕಲು ಶುರು ಮಾಡಿದ್ದು ಅದಕ್ಕೂ ಕನ್ನಡ ಎಂಬ ಉತ್ತರವೇ ಸಿಗುತ್ತಿದೆ. ಸದ್ಯ ಈ ವಿಚಾರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿರುವ ಜನರು ಕನ್ನಡ ಹಾಗೂ ಕನ್ನಡಿಗರ ವಿರುದ್ಧ ಹುನ್ನಾರ ಮಾಡುವವರು ಎಷ್ಟೇ ಪ್ರಯತ್ನಿಸಿದರೂ ಸತ್ಯ ಸಂಗತಿಯನ್ನು ಮರೆ ಮಾಡುವುದು ಸಾಧ್ಯವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಭಾಷೆಗಳ ರಾಣಿ (Queen of all Languages) ಎಂದು ಹುಡುಕಿದರೆ ಕನ್ನಡ ಎಂಬ ಉತ್ತರವೇ ಮೇಲ್ಭಾಗದಲ್ಲಿ ಕಾಣಿಸುತ್ತಿದ್ದು, ಕನ್ನಡವನ್ನು Queen of World Scripts ಎಂದು ಕರೆಯಲಾಗುತ್ತದೆ ಎನ್ನುವುದು ಕಾಣಸಿಗುತ್ತದೆ. ವಿನೋಭಾ ಭಾವೆಯವರು ಕನ್ನಡವನ್ನು ವಿಶ್ವ ಲಿಪಿಗಳ ರಾಣಿ ಎಂದು ಕರೆದಿದ್ದಾರೆ ಎಂಬ ಸಂಗತಿಯೂ ಅದರೊಟ್ಟಿಗೆ ಪ್ರದರ್ಶಿತವಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡವನ್ನು ನಿಂದಿಸಿದವರ ವಿರುದ್ಧ ಆಕ್ರೋಶ ಹೊರಬಂದ ನಂತರ ಈ ಸಂಗತಿಯೂ ಹರಿದಾಡಲಾರಂಭಿಸಿದ್ದು, ಭಾಷಾ ಪ್ರೇಮಿಗಳು ಇದನ್ನು ನೋಡಿ ಸಂಭ್ರಮಿಸುತ್ತಿದ್ದಾರೆ.

ಕನ್ನಡವನ್ನು ಅಪಮಾನಿಸುವ debtconsolidationsquad.com ಎಂಬ ಜಾಲತಾಣದ ಲೇಖನವನ್ನು ಗೂಗಲ್​ನಿಂದ ತೆಗೆಯಲಾಗಿದೆ. ಅದನ್ನು ಹಾಕಿದ ವ್ಯಕ್ತಿ ನಿಖಿಲ್​ ಸೊನ್ನದ್ ಎನ್ನಲಾಗುತ್ತಿದ್ದು ಆತನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಅನಾವಶ್ಯಕವಾಗಿ ಕನ್ನಡಿಗರನ್ನು, ಕನ್ನಡ ಭಾಷೆಯನ್ನು ಕೀಳೆಂದು ಬಿಂಬಿಸುವ ಯತ್ನದ ವಿರುದ್ಧ ಧ್ವನಿ ಎತ್ತಲಾಗುತ್ತಿದ್ದು, ಗೂಗಲ್​ನಂತಹ ದೊಡ್ಡ ಸಂಸ್ಥೆ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಕನ್ನಡಿಗರು ಒಕ್ಕೊರಲಿನಿಂದ ಆಗ್ರಹಿಸುತ್ತಿದ್ದಾರೆ.

ಈ ಬಗ್ಗೆ ಟಿವಿ9 ಕನ್ನಡ ಡಿಜಿಟಲ್ ಜತೆ ಮಾತನಾಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ನಾವು ಈ ವಿಚಾರವಾಗಿ ಕಾನೂನು ಹೋರಾಟಕ್ಕೆ ಇಳಿದಿದ್ದೇವೆ. ಗೂಗಲ್​ನಲ್ಲಿ ಕನ್ನಡವನ್ನು ಅವಮಾನಿಸಿದ್ದನ್ನು ಖಂಡಿಸಿ ಲೀಗಲ್​ ನೋಟಿಸ್ ಕಳುಹಿಸಿದ್ದೇವೆ. ನೆಲ, ಜಲ, ಭಾಷೆ, ಸಂಸ್ಕೃತಿಯ ವಿಚಾರದಲ್ಲಿ ಇನ್ನೊಬ್ಬರನ್ನು ಅಪಮಾನ ಮಾಡುವುದನ್ನು ಸಹಿಸಲಾಗದು. ಇದೊಂದು ಬಗೆಯ ವ್ಯವಸ್ಥಿತ ಸಂಚು ಎನ್ನುವುದು ಸ್ಪಷ್ಟ. ಕನ್ನಡಿಗರನ್ನು, ಕನ್ನಡ ಭಾಷೆಯನ್ನು ನಿಕೃಷ್ಟವಾಗಿ ಕಾಣುವ ಮನಸ್ಥಿತಿಗಳು ಇಂತಹ ಅವಕಾಶ ಸೃಷ್ಟಿಸಲು ಹೊಂಚು ಹಾಕಿ ಕುಳಿತಿರುತ್ತವೆ. ಇದಕ್ಕೆ ಪ್ರತಿರೋಧ ಒಡ್ಡುವುದಷ್ಟೇ ನಮ್ಮ ಕೆಲಸ ಅಲ್ಲ. ಬದಲಾಗಿ ಈ ತೆರನಾದ ಘಟನೆಗಳು ಜರುಗದಂತೆ ಕಾವಲಿರಬೇಕು. ನಮ್ಮತನಕ್ಕೆ ಧಕ್ಕೆಯಾಗುವ ಸಣ್ಣ ವಿಚಾರವನ್ನೂ ಸಹಿಸುವುದಿಲ್ಲ ಎನ್ನುವುದನ್ನು ಕನ್ನಡಿಗರು ಗಟ್ಟಿ ಧ್ವನಿಯಲ್ಲಿ ಹೇಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನು ಕೆಲವರು ಈ ಎರಡೂ ಸಂಗತಿಗಳನ್ನು ಸಮಚಿತ್ತದಿಂದ ಅವಲೋಕಿಸಿದ್ದು, ಭಾಷೆಯಲ್ಲಿ ಮೇಲು ಕೀಳೆಂದು ಹುಡುಕುವುದೇ ಸಮಂಜಸವಲ್ಲ. ಕನ್ನಡವನ್ನು ಅವಮಾನಿಸುವ ಉದ್ದೇಶದಿಂದ ಹಾಗೆ ಹಾಕಿರುವುದು ಖಂಡನೀಯ. ಹಾಗೆಯೇ, ಎಲ್ಲರಿಗೂ ಅವರವರ ಭಾಷೆಯೇ ಮೇಲಾಗಿರುವುದರಿಂದ ಕನ್ನಡವೇ ಭಾಷೆಗಳ ರಾಣಿ ಎಂದು ನಾವು ಸಾಧಿಸುವುದೂ ಬೇಕಿಲ್ಲ. ಕನ್ನಡಿಗರ ಪಾಲಿಗೆ ಕನ್ನಡ ಶ್ರೇಷ್ಠ ಅದು ನಮ್ಮ ಭಾಷಾಭಿಮಾನ. ಆ ಪ್ರೀತಿಯನ್ನು ತೋರಿಸುತ್ತಾ ಎಲ್ಲಾ ಭಾಷೆಗಳನ್ನೂ ಗೌರವಿಸೋಣ. ಬೇರೆಯವರು ಮಾಡಿದ ತಪ್ಪನ್ನು ಕನ್ನಡಿಗರು ಮಾಡುವುದಿಲ್ಲ, ಮಾಡಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: Ugliest Language in India: ಕನ್ನಡಿಗರ ಸ್ವಾಭಿಮಾನ ಕೆಣಕಿದ ಗೂಗಲ್​; ಕನ್ನಡವನ್ನು ಕೊಳಕು ಭಾಷೆ ಎಂದು ಅಪಮಾನಿಸಿದ ಸರ್ಚ್​ ಎಂಜಿನ್

ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗಜಲಕ್ಷ್ಮಿ, ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡೇಶ್ವರಿ
ಗಜಲಕ್ಷ್ಮಿ, ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡೇಶ್ವರಿ
ಸ್ಟಂಟ್ ಮಾಡಲು ಹೋಗಿ ಕಾರಿನ ಸಮೇತ 300 ಅಡಿ ಆಳದ ಕಂದಕಕ್ಕೆ ಬಿದ್ದ ವ್ಯಕ್ತಿ
ಸ್ಟಂಟ್ ಮಾಡಲು ಹೋಗಿ ಕಾರಿನ ಸಮೇತ 300 ಅಡಿ ಆಳದ ಕಂದಕಕ್ಕೆ ಬಿದ್ದ ವ್ಯಕ್ತಿ
ಸೇತುವೆ ಲೋಕಾರ್ಪಣೆಗೊಂಡು ಎರಡು ಗಂಟೆಯಲ್ಲೇ ಮುಚ್ಚಿದ್ದೇಕೆ?
ಸೇತುವೆ ಲೋಕಾರ್ಪಣೆಗೊಂಡು ಎರಡು ಗಂಟೆಯಲ್ಲೇ ಮುಚ್ಚಿದ್ದೇಕೆ?