AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವಿತೀಯ ಪಿಯುಸಿ ಪರೀಕ್ಷೆ; ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಘೋಷಿಸಿದ ಕೆಎಸ್​ಆರ್​ಟಿಸಿ

ಕೆಎಸ್​ಆರ್​ಟಿಸಿಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮತ್ತು ಇತರ ಸ್ಥಳಗಳಲ್ಲಿ ಕೋರಿಕೆ ಮೇರೆಗೆ ನಿಲುಗಡೆ ನೀಡಬೇಕು ಎಂದು ಚಾಲಕ ಮತ್ತು ನಿರ್ವಾಹಕರಿಗೂ ಸೂಚನೆ ನೀಡಿದೆ.

ದ್ವಿತೀಯ ಪಿಯುಸಿ ಪರೀಕ್ಷೆ; ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಘೋಷಿಸಿದ ಕೆಎಸ್​ಆರ್​ಟಿಸಿ
ಕೆಎಸ್​ಆರ್​ಟಿ ಬಸ್​ (ಸಾಂದರ್ಭಿಕ ಚಿತ್ರ)
Ganapathi Sharma
|

Updated on: Mar 03, 2023 | 6:33 PM

Share

ಬೆಂಗಳೂರು: ದ್ವಿತೀಯ ಪಿಯುಸಿ (Second PU) ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಶುಭ ಸುದ್ದಿ ನೀಡಿದೆ. ಪರೀಕ್ಷೆ ಬರೆಯಲು (PUC Exam) ತೆರಳುವ ವಿದ್ಯಾರ್ಥಿಗಳು ಉಚಿತವಾಗಿ ಕೆಎಸ್ಆರ್​​ಟಿಸಿ ಬಸ್​​ನಲ್ಲಿ ಸಂಚರಿಸಬಹುದು ಎಂದು ನಿಗಮ ತಿಳಿಸಿದೆ. ಪರೀಕ್ಷೆ ಬರೆಯುವುದಕ್ಕಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ತೆರಳುವವರಿಗೂ ಇದು ಅನ್ವಯವಾಗಲಿದೆ. ಮಾರ್ಚ್ 9ರಿಂದ ಮಾರ್ಚ್ 29ರ ವರೆಗೆ ವಿದ್ಯಾರ್ಥಿಗಳು ಉಚಿತವಾಗಿ ಸಂಚರಿಸಬಹುದು ಎಂದು ನಿಗಮ ತಿಳಿಸಿದೆ. ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಬಸ್​​ನಲ್ಲಿ ಪ್ರಯಾಣಿಸಬಹುದಾಗಿದೆ ಎಂದು ತಿಳಿಸಿರುವ ನಿಗಮ, ಬಸ್ ಚಾಲಕರಿಗೆ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರಗಳ ಮುಂದೆ ನಿಲುಗಡೆ ನೀಡುವಂತೆ ಸೂಚಿಸಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯನ ಮಂಡಳಿಯ ಅಧ್ಯಕ್ಷರು ಪರೀಕ್ಷೆ ಬರೆಯಲು ತೆರಳುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣದ ವ್ಯವಸ್ಥೆ ಮಾಡುವಂತೆ ಕೆಎಸ್​ಆರ್​ಟಿಸಿಗೆ ಮನವಿ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿರುವ ಕೆಎಸ್​ಆರ್​ಟಿಸಿ, ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳಿಗೆ ಮತ್ತು ಅಲ್ಲಿಂದ ವಾಪಸಾಗಲು ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿದೆ.

ಯಾವೆಲ್ಲಾ ಬಸ್​​ಗಳಲ್ಲಿ ಉಚಿತ ಪ್ರಯಾಣ?

ಕೆಎಸ್​ಆರ್​ಟಿಸಿಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮತ್ತು ಇತರ ಸ್ಥಳಗಳಲ್ಲಿ ಕೋರಿಕೆ ಮೇರೆಗೆ ನಿಲುಗಡೆ ನೀಡಬೇಕು ಎಂದು ಚಾಲಕ ಮತ್ತು ನಿರ್ವಾಹಕರಿಗೂ ಸೂಚನೆ ನೀಡಿದೆ.

ಈ ಮಧ್ಯೆ, ಮಾರ್ಚ್​​ 8ಕ್ಕೆ ಮಹಿಳಾ ದಿನಾಚರಣೆಯಂದು ಮಹಿಳೆಯರು ಬಸ್​​​ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ತಿಳಿಸಿದೆ. ಆ ದಿನ ಮಹಿಳೆಯರು ನಗರದ ಎಲ್ಲಿಂದ ಎಲ್ಲಿಗೆ ಬೇಕಾದರೂ ಉಚಿತವಾಗಿ ಬಿಎಂಟಿಸಿ ಬಸ್​​ಗಳಲ್ಲಿ ಪ್ರಯಾಣಿಸಬಹುದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?