AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವಿತೀಯ ಪಿಯುಸಿ ಪರೀಕ್ಷೆ; ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಘೋಷಿಸಿದ ಕೆಎಸ್​ಆರ್​ಟಿಸಿ

ಕೆಎಸ್​ಆರ್​ಟಿಸಿಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮತ್ತು ಇತರ ಸ್ಥಳಗಳಲ್ಲಿ ಕೋರಿಕೆ ಮೇರೆಗೆ ನಿಲುಗಡೆ ನೀಡಬೇಕು ಎಂದು ಚಾಲಕ ಮತ್ತು ನಿರ್ವಾಹಕರಿಗೂ ಸೂಚನೆ ನೀಡಿದೆ.

ದ್ವಿತೀಯ ಪಿಯುಸಿ ಪರೀಕ್ಷೆ; ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಘೋಷಿಸಿದ ಕೆಎಸ್​ಆರ್​ಟಿಸಿ
ಕೆಎಸ್​ಆರ್​ಟಿ ಬಸ್​ (ಸಾಂದರ್ಭಿಕ ಚಿತ್ರ)
ಗಣಪತಿ ಶರ್ಮಾ
|

Updated on: Mar 03, 2023 | 6:33 PM

Share

ಬೆಂಗಳೂರು: ದ್ವಿತೀಯ ಪಿಯುಸಿ (Second PU) ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಶುಭ ಸುದ್ದಿ ನೀಡಿದೆ. ಪರೀಕ್ಷೆ ಬರೆಯಲು (PUC Exam) ತೆರಳುವ ವಿದ್ಯಾರ್ಥಿಗಳು ಉಚಿತವಾಗಿ ಕೆಎಸ್ಆರ್​​ಟಿಸಿ ಬಸ್​​ನಲ್ಲಿ ಸಂಚರಿಸಬಹುದು ಎಂದು ನಿಗಮ ತಿಳಿಸಿದೆ. ಪರೀಕ್ಷೆ ಬರೆಯುವುದಕ್ಕಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ತೆರಳುವವರಿಗೂ ಇದು ಅನ್ವಯವಾಗಲಿದೆ. ಮಾರ್ಚ್ 9ರಿಂದ ಮಾರ್ಚ್ 29ರ ವರೆಗೆ ವಿದ್ಯಾರ್ಥಿಗಳು ಉಚಿತವಾಗಿ ಸಂಚರಿಸಬಹುದು ಎಂದು ನಿಗಮ ತಿಳಿಸಿದೆ. ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಬಸ್​​ನಲ್ಲಿ ಪ್ರಯಾಣಿಸಬಹುದಾಗಿದೆ ಎಂದು ತಿಳಿಸಿರುವ ನಿಗಮ, ಬಸ್ ಚಾಲಕರಿಗೆ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರಗಳ ಮುಂದೆ ನಿಲುಗಡೆ ನೀಡುವಂತೆ ಸೂಚಿಸಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯನ ಮಂಡಳಿಯ ಅಧ್ಯಕ್ಷರು ಪರೀಕ್ಷೆ ಬರೆಯಲು ತೆರಳುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣದ ವ್ಯವಸ್ಥೆ ಮಾಡುವಂತೆ ಕೆಎಸ್​ಆರ್​ಟಿಸಿಗೆ ಮನವಿ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿರುವ ಕೆಎಸ್​ಆರ್​ಟಿಸಿ, ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳಿಗೆ ಮತ್ತು ಅಲ್ಲಿಂದ ವಾಪಸಾಗಲು ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿದೆ.

ಯಾವೆಲ್ಲಾ ಬಸ್​​ಗಳಲ್ಲಿ ಉಚಿತ ಪ್ರಯಾಣ?

ಕೆಎಸ್​ಆರ್​ಟಿಸಿಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮತ್ತು ಇತರ ಸ್ಥಳಗಳಲ್ಲಿ ಕೋರಿಕೆ ಮೇರೆಗೆ ನಿಲುಗಡೆ ನೀಡಬೇಕು ಎಂದು ಚಾಲಕ ಮತ್ತು ನಿರ್ವಾಹಕರಿಗೂ ಸೂಚನೆ ನೀಡಿದೆ.

ಈ ಮಧ್ಯೆ, ಮಾರ್ಚ್​​ 8ಕ್ಕೆ ಮಹಿಳಾ ದಿನಾಚರಣೆಯಂದು ಮಹಿಳೆಯರು ಬಸ್​​​ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ತಿಳಿಸಿದೆ. ಆ ದಿನ ಮಹಿಳೆಯರು ನಗರದ ಎಲ್ಲಿಂದ ಎಲ್ಲಿಗೆ ಬೇಕಾದರೂ ಉಚಿತವಾಗಿ ಬಿಎಂಟಿಸಿ ಬಸ್​​ಗಳಲ್ಲಿ ಪ್ರಯಾಣಿಸಬಹುದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು