AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವಿತೀಯ ಪಿಯುಸಿ ಫಲಿತಾಂಶ: ಮೋಡಿ ಮಾಡಿದ ಆಂಧ್ರದ ಹುಡುಗ, ಹಾಸನದಲ್ಲಿ ಅವಳಿ ಸಹೋದರಿಯರ ಸಾಧನೆ

ಆಂಧ್ರದ ನೆಲ್ಲೂರು ಮೂಲದ ಗಂಧಂ ಗಿರಿ ವರುಣ್ ಸಂದೇಶ್ 600 ಅಂಕಗಳಿಗೆ 588 ಅಂಕಗಳಿಸುವ ಮೂಲಕ 9ನೇ ರ‍್ಯಾಂಕ್‌ ಪಡೆದಿದ್ದಾರೆ. ಹಾಸನದ ಅವಳಿ ಸಹೋದರಿಯರಾದ ಚುಕ್ಕಿ ಚಂದ್ರ ಹಾಗೂ ಇಬ್ಬನಿ ಚಂದ್ರ 571 ಸಮಾನ ಅಂಕ ಗಳಿಸಿ ಅಂಕಪಟ್ಟಿಯಲ್ಲೂ ಅವಳಿಗಳಾಗಿ ಅಚ್ಚರಿ ಮೂಡಿಸಿದ್ದಾರೆ.

ದ್ವಿತೀಯ ಪಿಯುಸಿ ಫಲಿತಾಂಶ: ಮೋಡಿ ಮಾಡಿದ ಆಂಧ್ರದ ಹುಡುಗ, ಹಾಸನದಲ್ಲಿ ಅವಳಿ ಸಹೋದರಿಯರ ಸಾಧನೆ
ಗಂಧಂ ಗಿರಿ ವರುಣ್ ಸಂದೇಶ್ ಮತ್ತು ಅವಳಿ ಸಹೋದರಿಯರಾದ ಚುಕ್ಕಿ ಚಂದ್ರ, ಇಬ್ಬನಿ ಚಂದ್ರ
TV9 Web
| Edited By: |

Updated on: Apr 11, 2024 | 8:39 AM

Share

ಬೆಂಗಳೂರು, ಏಪ್ರಿಲ್ 11: ದ್ವಿತೀಯ ಪಿಯುಸಿ ಪರೀಕ್ಷೆಯ (2nd PU Result) ಫಲಿತಾಂಶ ಬುಧವಾರ ಪ್ರಕಟಗೊಂಡಿದ್ದು, ಬೆಂಗಳೂರಿನ ರಾಮೋಹಳ್ಳಿಯಲ್ಲಿರುವ ಯೂನಿವರ್ಸಲ್ ಪಿಯು ಕಾಲೇಜಿನ ವಿದ್ಯಾರ್ಥಿ ಆಂಧ್ರ ಪ್ರದೇಶ ಮೂಲದ ಗಂಧಂ ಗಿರಿ ವರುಣ್ ಸಂದೇಶ್ 9ನೇ ರ‍್ಯಾಂಕ್‌ ಪಡೆದಿದ್ದಾರೆ. ಮತ್ತೊಂದೆಡೆ, ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಸಮಾನ‌ ಅಂಕ ಪಡೆದು ಅಚ್ಚರಿ ಮೂಡಿಸಿದ್ದ ಹಾಸನದ ಅವಳಿ ಸಹೋದರಿಯರು ದ್ವಿತೀಯ ಪಿಯುಸಿಯಲ್ಲೂ ಮತ್ತೆ ಸಮಾನ ಅಂಕ‌ ಪಡೆಯುವ ‌ಮೂಲಕ ಎಲ್ಲರೂ ಬೆರಗಾಗುವಂತೆ ಮಾಡಿದ್ದಾರೆ.

ಆಂಧ್ರದ ನೆಲ್ಲೂರು ಮೂಲದ ಗಂಧಂ ಗಿರಿ ವರುಣ್ ಸಂದೇಶ್ 600 ಅಂಕಗಳಿಗೆ 588 ಅಂಕಗಳಿಸುವ ಮೂಲಕ 9ನೇ ರ‍್ಯಾಂಕ್‌ ಪಡೆದಿದ್ದಾರೆ. ಇವರು ಮೂಲತಃ ಆಂಧ್ರದ ನೆಲ್ಲೂರಿನವರು. ಯೂನಿವರ್ಸಲ್ ಪಿಯು ಕಾಲೇಜಿನ 25 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದು, 12 ವಿದ್ಯಾರ್ಥಿಗಳು ಫಸ್ಟ್‌‌ ಕ್ಲಾಸ್ ಪಾಸಾಗಿದ್ದು, ಉಳಿದಂತೆ ಎಲ್ಲಾ ವಿದ್ಯಾರ್ಥಿಗಳು ಉತ್ತಿರ್ಣಾಗುವುದರ ಮೂಲಕ ಯೂನಿವರ್ಸಲ್ ಸಂಸ್ಥೆಯು ಶೇ 100ರ ಫಲಿತಾಂಶ ಪಡೆದಿದೆ.

ಅಚ್ಚರಿ ಮೂಡಿಸಿದ ಅವಳಿ ಸಹೋದರಿಯರು

ಹಾಸನದ ಅವಳಿ ಸಹೋದರಿಯರಾದ ಚುಕ್ಕಿ ಚಂದ್ರ ಹಾಗೂ ಇಬ್ಬನಿ ಚಂದ್ರ 571 ಸಮಾನ ಅಂಕ ಗಳಿಸಿ ಅಂಕಪಟ್ಟಿಯಲ್ಲೂ ಅವಳಿಗಳಾಗಿ ಅಚ್ಚರಿ ಮೂಡಿಸಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಉಪ ನಿರ್ದೇಶಕ ವಿನೋದ್ ಚಂದ್ರ ಹಾಗು ಕನ್ನಿಕಾ ದಂಪತಿಗಳ ಮಕ್ಕಳಾದ ಇವರು ಎಸ್​ಎಸ್​​ಎಲ್​ಸಿಯಲ್ಲೂ ಸಮಾನ ಅಂಕ ಗಳಿಸಿದ್ದರು. ಇದೀಗ ಎರಡು ವರ್ಷಗಳ ಬಳಿಕ ಮತ್ತೊಂದು ಅಚ್ಚರಿ ಹಾಗೂ ಬೆರಗು ಮೂಡಿಸುವ ಫಲಿತಾಂಶ ಪಡೆದಿದ್ದಾರೆ.

ಇದನ್ನೂ ಓದಿ: ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ, ಕೊನೆ ದಿನಾಂಕ, ಅರ್ಜಿ ಶುಲ್ಕ ಎಷ್ಟು?​ ಇಲ್ಲಿದೆ ಮಾಹಿತಿ

ಎಸ್​ಎಸ್​​ಎಲ್​ಸಿಯಲ್ಲಿ ಈ ಅವಳಿ ಮಕ್ಕಳಿಗೆ 625 ಕ್ಕೆ 620 ಸಮಾನ ಅಂಕ ದೊರೆತಿತ್ತು. ಮಕ್ಕಳ ಸಾಧನೆ ಬಗ್ಗೆ ಪೋಷಕರು ಹಾಗೂ ಸ್ಥಳಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಶಿಕ್ಷಣ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ