AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವಿತೀಯ ಪಿಯುಸಿ ಫಲಿತಾಂಶ: ಮೋಡಿ ಮಾಡಿದ ಆಂಧ್ರದ ಹುಡುಗ, ಹಾಸನದಲ್ಲಿ ಅವಳಿ ಸಹೋದರಿಯರ ಸಾಧನೆ

ಆಂಧ್ರದ ನೆಲ್ಲೂರು ಮೂಲದ ಗಂಧಂ ಗಿರಿ ವರುಣ್ ಸಂದೇಶ್ 600 ಅಂಕಗಳಿಗೆ 588 ಅಂಕಗಳಿಸುವ ಮೂಲಕ 9ನೇ ರ‍್ಯಾಂಕ್‌ ಪಡೆದಿದ್ದಾರೆ. ಹಾಸನದ ಅವಳಿ ಸಹೋದರಿಯರಾದ ಚುಕ್ಕಿ ಚಂದ್ರ ಹಾಗೂ ಇಬ್ಬನಿ ಚಂದ್ರ 571 ಸಮಾನ ಅಂಕ ಗಳಿಸಿ ಅಂಕಪಟ್ಟಿಯಲ್ಲೂ ಅವಳಿಗಳಾಗಿ ಅಚ್ಚರಿ ಮೂಡಿಸಿದ್ದಾರೆ.

ದ್ವಿತೀಯ ಪಿಯುಸಿ ಫಲಿತಾಂಶ: ಮೋಡಿ ಮಾಡಿದ ಆಂಧ್ರದ ಹುಡುಗ, ಹಾಸನದಲ್ಲಿ ಅವಳಿ ಸಹೋದರಿಯರ ಸಾಧನೆ
ಗಂಧಂ ಗಿರಿ ವರುಣ್ ಸಂದೇಶ್ ಮತ್ತು ಅವಳಿ ಸಹೋದರಿಯರಾದ ಚುಕ್ಕಿ ಚಂದ್ರ, ಇಬ್ಬನಿ ಚಂದ್ರ
Follow us
TV9 Web
| Updated By: Ganapathi Sharma

Updated on: Apr 11, 2024 | 8:39 AM

ಬೆಂಗಳೂರು, ಏಪ್ರಿಲ್ 11: ದ್ವಿತೀಯ ಪಿಯುಸಿ ಪರೀಕ್ಷೆಯ (2nd PU Result) ಫಲಿತಾಂಶ ಬುಧವಾರ ಪ್ರಕಟಗೊಂಡಿದ್ದು, ಬೆಂಗಳೂರಿನ ರಾಮೋಹಳ್ಳಿಯಲ್ಲಿರುವ ಯೂನಿವರ್ಸಲ್ ಪಿಯು ಕಾಲೇಜಿನ ವಿದ್ಯಾರ್ಥಿ ಆಂಧ್ರ ಪ್ರದೇಶ ಮೂಲದ ಗಂಧಂ ಗಿರಿ ವರುಣ್ ಸಂದೇಶ್ 9ನೇ ರ‍್ಯಾಂಕ್‌ ಪಡೆದಿದ್ದಾರೆ. ಮತ್ತೊಂದೆಡೆ, ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಸಮಾನ‌ ಅಂಕ ಪಡೆದು ಅಚ್ಚರಿ ಮೂಡಿಸಿದ್ದ ಹಾಸನದ ಅವಳಿ ಸಹೋದರಿಯರು ದ್ವಿತೀಯ ಪಿಯುಸಿಯಲ್ಲೂ ಮತ್ತೆ ಸಮಾನ ಅಂಕ‌ ಪಡೆಯುವ ‌ಮೂಲಕ ಎಲ್ಲರೂ ಬೆರಗಾಗುವಂತೆ ಮಾಡಿದ್ದಾರೆ.

ಆಂಧ್ರದ ನೆಲ್ಲೂರು ಮೂಲದ ಗಂಧಂ ಗಿರಿ ವರುಣ್ ಸಂದೇಶ್ 600 ಅಂಕಗಳಿಗೆ 588 ಅಂಕಗಳಿಸುವ ಮೂಲಕ 9ನೇ ರ‍್ಯಾಂಕ್‌ ಪಡೆದಿದ್ದಾರೆ. ಇವರು ಮೂಲತಃ ಆಂಧ್ರದ ನೆಲ್ಲೂರಿನವರು. ಯೂನಿವರ್ಸಲ್ ಪಿಯು ಕಾಲೇಜಿನ 25 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದು, 12 ವಿದ್ಯಾರ್ಥಿಗಳು ಫಸ್ಟ್‌‌ ಕ್ಲಾಸ್ ಪಾಸಾಗಿದ್ದು, ಉಳಿದಂತೆ ಎಲ್ಲಾ ವಿದ್ಯಾರ್ಥಿಗಳು ಉತ್ತಿರ್ಣಾಗುವುದರ ಮೂಲಕ ಯೂನಿವರ್ಸಲ್ ಸಂಸ್ಥೆಯು ಶೇ 100ರ ಫಲಿತಾಂಶ ಪಡೆದಿದೆ.

ಅಚ್ಚರಿ ಮೂಡಿಸಿದ ಅವಳಿ ಸಹೋದರಿಯರು

ಹಾಸನದ ಅವಳಿ ಸಹೋದರಿಯರಾದ ಚುಕ್ಕಿ ಚಂದ್ರ ಹಾಗೂ ಇಬ್ಬನಿ ಚಂದ್ರ 571 ಸಮಾನ ಅಂಕ ಗಳಿಸಿ ಅಂಕಪಟ್ಟಿಯಲ್ಲೂ ಅವಳಿಗಳಾಗಿ ಅಚ್ಚರಿ ಮೂಡಿಸಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಉಪ ನಿರ್ದೇಶಕ ವಿನೋದ್ ಚಂದ್ರ ಹಾಗು ಕನ್ನಿಕಾ ದಂಪತಿಗಳ ಮಕ್ಕಳಾದ ಇವರು ಎಸ್​ಎಸ್​​ಎಲ್​ಸಿಯಲ್ಲೂ ಸಮಾನ ಅಂಕ ಗಳಿಸಿದ್ದರು. ಇದೀಗ ಎರಡು ವರ್ಷಗಳ ಬಳಿಕ ಮತ್ತೊಂದು ಅಚ್ಚರಿ ಹಾಗೂ ಬೆರಗು ಮೂಡಿಸುವ ಫಲಿತಾಂಶ ಪಡೆದಿದ್ದಾರೆ.

ಇದನ್ನೂ ಓದಿ: ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ, ಕೊನೆ ದಿನಾಂಕ, ಅರ್ಜಿ ಶುಲ್ಕ ಎಷ್ಟು?​ ಇಲ್ಲಿದೆ ಮಾಹಿತಿ

ಎಸ್​ಎಸ್​​ಎಲ್​ಸಿಯಲ್ಲಿ ಈ ಅವಳಿ ಮಕ್ಕಳಿಗೆ 625 ಕ್ಕೆ 620 ಸಮಾನ ಅಂಕ ದೊರೆತಿತ್ತು. ಮಕ್ಕಳ ಸಾಧನೆ ಬಗ್ಗೆ ಪೋಷಕರು ಹಾಗೂ ಸ್ಥಳಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಶಿಕ್ಷಣ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ
ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ