AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Second PU Results: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಬದಲಾವಣೆ; ಗ್ರೇಡ್ ಬದಲು ಹಳೆ ಪದ್ಧತಿಯಂತೆ ಅಂಕಗಳನ್ನೇ ಪರಿಗಣಿಸಲು ತೀರ್ಮಾನ

ಪರೀಕ್ಷೆ‌ ಇಲ್ಲದೇ ಗ್ರೇಡ್ ಬದಲು ಅಂಕ ನೀಡಲು ಪಿಯು ಪರೀಕ್ಷಾ ಮಂಡಳಿ ನಿರ್ಧಾರ ಮಾಡಿದೆ. ಈ ನಿಟ್ಟಿನಲ್ಲಿ ಈ ಬಾರಿ ಗ್ರೇಡ್ ಬದಲು ಅಂಕಗಳ ಪರಿಗಣನೆ ಮಾಡಲಾಗುತ್ತದೆ ಎಂದು ಟಿವಿ9 ಡಿಜಿಟಲ್​ಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸ್ನೇಹಲ್ ಆರ್. ಹೇಳಿಕೆ ನೀಡಿದ್ದಾರೆ.

Second PU Results: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಬದಲಾವಣೆ; ಗ್ರೇಡ್ ಬದಲು ಹಳೆ ಪದ್ಧತಿಯಂತೆ ಅಂಕಗಳನ್ನೇ ಪರಿಗಣಿಸಲು ತೀರ್ಮಾನ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: preethi shettigar

Updated on:Jun 18, 2021 | 3:47 PM

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಹಳೇ ಪದ್ಧತಿಯನ್ನೇ ಕೈ ಹಿಡಿಯಲು ಪಿಯುಸಿ ಬೋರ್ಡ್ ಮುಂದಾಗಿದ್ದು, ಪರೀಕ್ಷೆ‌ ಇಲ್ಲದೇ ಗ್ರೇಡ್ ಬದಲು ಅಂಕ ನೀಡಲು ಪಿಯು ಪರೀಕ್ಷಾ ಮಂಡಳಿ ನಿರ್ಧಾರ ಮಾಡಿದೆ. ಈ ನಿಟ್ಟಿನಲ್ಲಿ ಈ ಬಾರಿ ಗ್ರೇಡ್ ಬದಲು ಅಂಕಗಳ ಪರಿಗಣನೆ ಮಾಡಲಾಗುತ್ತದೆ ಎಂದು ಟಿವಿ9 ಡಿಜಿಟಲ್​ಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸ್ನೇಹಲ್.ಆರ್ ಹೇಳಿಕೆ ನೀಡಿದ್ದಾರೆ.

ವಿದ್ಯಾರ್ಥಿಗಳ ಮುಂದಿನ ಭವಿಷ್ಯ ದೃಷ್ಟಿಯಿಂದ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ನೀಡುವ ಸಂಬಂಧ 12 ಜನರ ತಜ್ಞರ ಸಮಿತಿ ರಚನೆ ಸಮಿತಿಯಲ್ಲಿ ಈ ಕುರಿತು ಸಹಮತವಿದೆ.ಹೀಗಾಗಿ ಶಿಕ್ಷಣ ತಜ್ಞರು ಹಾಗೂ ಸಮಿತಿ ಸದಸ್ಯರ ಚರ್ಚೆ‌ಯ ಅಂತಿಮ ನಿರ್ಧಾರ ಕೊರೊನಾ ಕಾರಣಕ್ಕೆ ಪಿಯುಸಿ ಪರೀಕ್ಷೆ ಇಲ್ಲದೆ ರೆಗ್ಯುಲರ್ ವಿದ್ಯಾರ್ಥಿಗಳು ಪಾಸ್ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸ್ನೇಹಲ್.ಆರ್ ತಿಳಿಸಿದ್ದಾರೆ.

ದ್ವಿತೀಯ ಪಿಯು ಫಲಿತಾಂಶ ಗ್ರೇಡಿಂಗ್ ಮೂಲಕ ಫಲಿತಾಂಶ ನೀಡುವುದಾಗಿ ಶಿಕ್ಷಣ ಸಚಿವ ಘೋಷಿಸಿದ್ದರು ಆದರೀಗ ಫಲಿತಾಂಶದಲ್ಲಿ ಬದಲಾವಣೆಗೆ ಇಲಾಖೆ ಮುಂದಾಗಿದೆ. ಅಂಕಗಳ ಆಧಾರದ ಮೇಲೆ ಫಲಿತಾಂಶ ನೀಡಲು ತಯಾರಿ ನಡೆಸಿದ್ದು, ಜೂನ್ ಕೊನೆ ವಾರದಲ್ಲಿ ಫಲಿತಾಂಶ ನೀಡಲು ಸಿದ್ಧತೆ ಮಾಡಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸ್ನೇಹಲ್.ಆರ್ ಮಾಹಿತಿ ನೀಡಿದ್ದಾರೆ.

ಎಸ್​ಎಸ್​ಎಲ್​ಸಿ ಮತ್ತು ಪ್ರಥಮ ಪಿಯುಸಿ ಅವರಿಗೆ ಶೇಕಡಾವಾರು ಮೂಲಕ ಈ ಬಾರಿ ಫಲಿತಾಂಶ ನಿಗದಿ ಮಾಡಲಾಗಿದೆ. ಗ್ರೇಡಿಂಗ್ ನೀಡಿದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗುತ್ತದೆ. ಅಲ್ಲದೆ ಉದ್ಯೋಗ ಪಡೆಯಲು ಅರ್ಹ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ಹಳೆ ಪದ್ಧತಿಯಲ್ಲಿ ದ್ವಿತೀಯ ಪಿಯು ಫಲಿತಾಂಶ ನೀಡಲಾಗುತ್ತದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸ್ನೇಹಲ್.ಆರ್ ತಿಳಿಸಿದ್ದಾರೆ.

ಇದನ್ನೂ ಓದಿ:

Suresh Kumar On PUC exms : ಪಿಯುಸಿ ಪರೀಕ್ಷೆಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೂ ಏನು ವ್ಯತ್ಯಾಸ? ಶಿಕ್ಷಣ ಸಚಿರು ಹೇಳ್ತಾರೆ ಕೇಳಿ…

ಪಿಯುಸಿ ಪಾಸಾದವರೆಲ್ಲರೂ ಸಿಇಟಿ ಬರೆಯಬಹುದು, ಅಕ್ಟೋಬರ್ ಮೊದಲ ವಾರದಲ್ಲಿ ಪದವಿ ತರಗತಿಗೆ ದಾಖಲಾತಿ: ಡಿಸಿಎಂ ಅಶ್ವತ್ಥ್ ನಾರಾಯಣ

Published On - 3:03 pm, Fri, 18 June 21

ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?
ಕಾಂಗ್ರೆಸ್​ಗೆ ಸ್ವಾತಂತ್ರ್ಯಕ್ಕಾಗಿ ನಡೆದ ಕ್ರಾಂತಿ ಮಾತ್ರ ಗೊತ್ತು: ಪಾಟೀಲ್
ಕಾಂಗ್ರೆಸ್​ಗೆ ಸ್ವಾತಂತ್ರ್ಯಕ್ಕಾಗಿ ನಡೆದ ಕ್ರಾಂತಿ ಮಾತ್ರ ಗೊತ್ತು: ಪಾಟೀಲ್