AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್.ಡಿ.ಕುಮಾರಸ್ವಾಮಿ, ಇಂದ್ರಜಿತ್ ಲಂಕೇಶ್ ಇರುವ ಫೋಟೋ ವೈರಲ್; ಅವಾಚ್ಯ ಪದ ಬಳಸಿದ ಟ್ರೋಲ್ ಮಗ ಪೇಜ್ ಅಡ್ಮಿನ್ ವಿರುದ್ಧ ದೂರು

ಅತ್ತ ಇಂದ್ರಜಿತ್ ಲಂಕೇಶ್ರಿಂದ ಸ್ಯಾಂಡಲ್ವುಡ್ ನಟ ದರ್ಶನ್ ಹಿಂಬಾಲಕರ ವಿರುದ್ಧ ದೂರು ಸಲ್ಲಿಕೆಯಾಗಿದ್ದು, ಇತ್ತ ಜೆಡಿಎಸ್ನಿಂದಲೂ ಟ್ರೋಲ್ ಪೇಜ್ ಅಡ್ಮಿನ್ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ.

ಹೆಚ್.ಡಿ.ಕುಮಾರಸ್ವಾಮಿ, ಇಂದ್ರಜಿತ್ ಲಂಕೇಶ್ ಇರುವ ಫೋಟೋ ವೈರಲ್; ಅವಾಚ್ಯ ಪದ ಬಳಸಿದ ಟ್ರೋಲ್ ಮಗ ಪೇಜ್ ಅಡ್ಮಿನ್ ವಿರುದ್ಧ ದೂರು
ಅವಾಚ್ಯ ಪದ ಬಳಸಿ ಪೋಸ್ಟ್ ಮಾಡಿದ ಟ್ರೋಲ್ ಮಗ ಪೇಜ್
TV9 Web
| Edited By: |

Updated on:Jul 20, 2021 | 9:00 AM

Share

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ನಿರ್ದೇಶಕ ಇಂದ್ರಜಿತ್ ಲಂಕೇಶ್ ಒಟ್ಟಿಗೆ ಕುಳಿತಿರುವ ಫೋಟೋವೊಂದು ವೈರಲ್ ಆಗಿದೆ. ಅವಾಚ್ಯ ಪದ ಬಳಸಿ ನಿಂದಿಸಿದ ಫೋಟೋ ವೈರಲ್ ಆಗಿದ್ದು, ಟ್ರೋಲ್ ಮಗ ಪೇಜ್ ಅಡ್ಮಿನ್ ವಿರುದ್ಧ ದೂರು ಸಲ್ಲಿಕೆಯಾಗಿದೆ. ಜೆಡಿಎಸ್ ಕಾನೂನು ಘಟಕದ ಕಾರ್ಯದರ್ಶಿ ಪ್ರದೀಪ್ ಕುಮಾರ್ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಅತ್ತ ಇಂದ್ರಜಿತ್ ಲಂಕೇಶ್​ರಿಂದ ಸ್ಯಾಂಡಲ್​ಬುಡ್​ ನಟ ದರ್ಶನ್ ಹಿಂಬಾಲಕರ ವಿರುದ್ಧ ದೂರು ಸಲ್ಲಿಕೆಯಾಗಿದ್ದು, ಇತ್ತ ಜೆಡಿಎಸ್ನಿಂದಲೂ ಟ್ರೋಲ್ ಪೇಜ್ ಅಡ್ಮಿನ್ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ. ‘ಸೂತ್ರಧಾರಿ ಕರಿ ಇಡ್ಲಿ, ಪಾತ್ರಧಾರಿ ಬಿಳಿ ಬಾಂಡ್ಲಿ’ಅಂತ ಟ್ರೋಲ್ ಮಾಡಿದ್ದಾರೆ. ಈ ಹಿಂದೆ ಕೂಡ ಕುಮಾರಸ್ವಾಮಿ ಸೇರಿದಂತೆ ಅನೇಕ ಜೆಡಿಎಸ್ ಮುಖಂಡರನ್ನ ತೇಜೋವಧೆ ಮಾಡಲಾಗಿದೆ. ಟ್ರೋಲ್ ಪೇಜ್ ಅಡ್ಮಿನ್ ವಿರುದ್ಧ ಕ್ರಮ ಜರುಗಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಸ್ಪಷ್ಟನೆ ನೀಡಿದ್ದ ಕುಮಾರಸ್ವಾಮಿ ನಟ ದರ್ಶನ್ ಹೋಟೆಲ್​ನಲ್ಲಿ ಹಲ್ಲೆ ನಡೆಸಿದ್ದಾರೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಆರೋಪಿಸುತ್ತಿರುವ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಇಂದ್ರಜಿತ್ ಲಂಕೇಶ್ ಇರುವ ಫೋಟೋ ವೈರಲ್ ಆಗಿತ್ತು. ಫೋಟೋದಲ್ಲಿ ಇಬ್ಬರು ಒಟ್ಟಿಗೆ ಇರುವುದನ್ನು ನೋಡಿ ಕೆಲ ಅನುಮಾನಕ್ಕೆ ಕಾರಣವಾಗಿತ್ತು. ಆದರೆ ಈ ಬಗ್ಗೆ ಸ್ವತಃ ಕುಮಾರಸ್ವಾಮಿಯವರೇ ಸ್ಪಷ್ಟನೆ ನೀಡಿದ್ದರು. ಈ ಫೋಟೋವನ್ನು ಯಾಕೆ ವೈರಲ್ ಮಾಡಿದ್ದಾರೋ ಗೊತ್ತಿಲ್ಲ. ಪ್ರತಿದಿನ ನನ್ನನ್ನು ನೂರಾರು ಜನ ಭೇಟಿ ಮಾಡುತ್ತಾರೆ. ನನ್ನ ಜೊತೆ ಫೋಟೋ ತೆಗೆದುಕೊಳ್ಳುತ್ತಾರೆ. ಆದರೆ ಇತ್ತೀಚೆಗೆ ಇಂದ್ರಜಿತ್ ಲಂಕೇಶ್ ನನ್ನ ಭೇಟಿ ಮಾಡಿಲ್ಲ ಅಂತ ತಿಳಿಸಿದ್ದರು.

ಇದನ್ನೂ ಓದಿ

ನನ್ನ ಮತ್ತು ಇಂದ್ರಜಿತ್ ಭೇಟಿಯ ಚಿತ್ರ ಹಳೆಯದು: ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಸ್ಪಷ್ಟನೆ

ಈ ಪ್ರಕರಣಕ್ಕೂ ಕುಮಾರಸ್ವಾಮಿಗೂ ಸಂಬಂಧವಿಲ್ಲ ಎಂದ ಇಂದ್ರಜಿತ್​

(secretary of JDS legal unit has filed a complaint against the troll maga Page Admin)

Published On - 8:56 am, Tue, 20 July 21

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ