AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್.ಡಿ.ಕುಮಾರಸ್ವಾಮಿ, ಇಂದ್ರಜಿತ್ ಲಂಕೇಶ್ ಇರುವ ಫೋಟೋ ವೈರಲ್; ಅವಾಚ್ಯ ಪದ ಬಳಸಿದ ಟ್ರೋಲ್ ಮಗ ಪೇಜ್ ಅಡ್ಮಿನ್ ವಿರುದ್ಧ ದೂರು

ಅತ್ತ ಇಂದ್ರಜಿತ್ ಲಂಕೇಶ್ರಿಂದ ಸ್ಯಾಂಡಲ್ವುಡ್ ನಟ ದರ್ಶನ್ ಹಿಂಬಾಲಕರ ವಿರುದ್ಧ ದೂರು ಸಲ್ಲಿಕೆಯಾಗಿದ್ದು, ಇತ್ತ ಜೆಡಿಎಸ್ನಿಂದಲೂ ಟ್ರೋಲ್ ಪೇಜ್ ಅಡ್ಮಿನ್ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ.

ಹೆಚ್.ಡಿ.ಕುಮಾರಸ್ವಾಮಿ, ಇಂದ್ರಜಿತ್ ಲಂಕೇಶ್ ಇರುವ ಫೋಟೋ ವೈರಲ್; ಅವಾಚ್ಯ ಪದ ಬಳಸಿದ ಟ್ರೋಲ್ ಮಗ ಪೇಜ್ ಅಡ್ಮಿನ್ ವಿರುದ್ಧ ದೂರು
ಅವಾಚ್ಯ ಪದ ಬಳಸಿ ಪೋಸ್ಟ್ ಮಾಡಿದ ಟ್ರೋಲ್ ಮಗ ಪೇಜ್
TV9 Web
| Edited By: sandhya thejappa|

Updated on:Jul 20, 2021 | 9:00 AM

Share

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ನಿರ್ದೇಶಕ ಇಂದ್ರಜಿತ್ ಲಂಕೇಶ್ ಒಟ್ಟಿಗೆ ಕುಳಿತಿರುವ ಫೋಟೋವೊಂದು ವೈರಲ್ ಆಗಿದೆ. ಅವಾಚ್ಯ ಪದ ಬಳಸಿ ನಿಂದಿಸಿದ ಫೋಟೋ ವೈರಲ್ ಆಗಿದ್ದು, ಟ್ರೋಲ್ ಮಗ ಪೇಜ್ ಅಡ್ಮಿನ್ ವಿರುದ್ಧ ದೂರು ಸಲ್ಲಿಕೆಯಾಗಿದೆ. ಜೆಡಿಎಸ್ ಕಾನೂನು ಘಟಕದ ಕಾರ್ಯದರ್ಶಿ ಪ್ರದೀಪ್ ಕುಮಾರ್ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಅತ್ತ ಇಂದ್ರಜಿತ್ ಲಂಕೇಶ್​ರಿಂದ ಸ್ಯಾಂಡಲ್​ಬುಡ್​ ನಟ ದರ್ಶನ್ ಹಿಂಬಾಲಕರ ವಿರುದ್ಧ ದೂರು ಸಲ್ಲಿಕೆಯಾಗಿದ್ದು, ಇತ್ತ ಜೆಡಿಎಸ್ನಿಂದಲೂ ಟ್ರೋಲ್ ಪೇಜ್ ಅಡ್ಮಿನ್ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ. ‘ಸೂತ್ರಧಾರಿ ಕರಿ ಇಡ್ಲಿ, ಪಾತ್ರಧಾರಿ ಬಿಳಿ ಬಾಂಡ್ಲಿ’ಅಂತ ಟ್ರೋಲ್ ಮಾಡಿದ್ದಾರೆ. ಈ ಹಿಂದೆ ಕೂಡ ಕುಮಾರಸ್ವಾಮಿ ಸೇರಿದಂತೆ ಅನೇಕ ಜೆಡಿಎಸ್ ಮುಖಂಡರನ್ನ ತೇಜೋವಧೆ ಮಾಡಲಾಗಿದೆ. ಟ್ರೋಲ್ ಪೇಜ್ ಅಡ್ಮಿನ್ ವಿರುದ್ಧ ಕ್ರಮ ಜರುಗಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಸ್ಪಷ್ಟನೆ ನೀಡಿದ್ದ ಕುಮಾರಸ್ವಾಮಿ ನಟ ದರ್ಶನ್ ಹೋಟೆಲ್​ನಲ್ಲಿ ಹಲ್ಲೆ ನಡೆಸಿದ್ದಾರೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಆರೋಪಿಸುತ್ತಿರುವ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಇಂದ್ರಜಿತ್ ಲಂಕೇಶ್ ಇರುವ ಫೋಟೋ ವೈರಲ್ ಆಗಿತ್ತು. ಫೋಟೋದಲ್ಲಿ ಇಬ್ಬರು ಒಟ್ಟಿಗೆ ಇರುವುದನ್ನು ನೋಡಿ ಕೆಲ ಅನುಮಾನಕ್ಕೆ ಕಾರಣವಾಗಿತ್ತು. ಆದರೆ ಈ ಬಗ್ಗೆ ಸ್ವತಃ ಕುಮಾರಸ್ವಾಮಿಯವರೇ ಸ್ಪಷ್ಟನೆ ನೀಡಿದ್ದರು. ಈ ಫೋಟೋವನ್ನು ಯಾಕೆ ವೈರಲ್ ಮಾಡಿದ್ದಾರೋ ಗೊತ್ತಿಲ್ಲ. ಪ್ರತಿದಿನ ನನ್ನನ್ನು ನೂರಾರು ಜನ ಭೇಟಿ ಮಾಡುತ್ತಾರೆ. ನನ್ನ ಜೊತೆ ಫೋಟೋ ತೆಗೆದುಕೊಳ್ಳುತ್ತಾರೆ. ಆದರೆ ಇತ್ತೀಚೆಗೆ ಇಂದ್ರಜಿತ್ ಲಂಕೇಶ್ ನನ್ನ ಭೇಟಿ ಮಾಡಿಲ್ಲ ಅಂತ ತಿಳಿಸಿದ್ದರು.

ಇದನ್ನೂ ಓದಿ

ನನ್ನ ಮತ್ತು ಇಂದ್ರಜಿತ್ ಭೇಟಿಯ ಚಿತ್ರ ಹಳೆಯದು: ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಸ್ಪಷ್ಟನೆ

ಈ ಪ್ರಕರಣಕ್ಕೂ ಕುಮಾರಸ್ವಾಮಿಗೂ ಸಂಬಂಧವಿಲ್ಲ ಎಂದ ಇಂದ್ರಜಿತ್​

(secretary of JDS legal unit has filed a complaint against the troll maga Page Admin)

Published On - 8:56 am, Tue, 20 July 21

Follow Us
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್